ರೈತರ ಖಾತೆಗೆ ಶೀಘ್ರ ಕಡಲೆ ಬೆಂಬಲ ಬೆಲೆ

ತಾಂತ್ರಿಕ ಕಾರಣದಿಂದ ಜಮೆ ವಿಳಂಬ

Team Udayavani, May 19, 2020, 9:36 AM IST

ರೈತರ ಖಾತೆಗೆ ಶೀಘ್ರ ಕಡಲೆ ಬೆಂಬಲ ಬೆಲೆ

ಧಾರವಾಡ: ಸರಕಾರ ಬೆಂಬಲ ಬೆಲೆಯಡಿ ಕಡಲೆ ಬೆಳೆ ಖರೀದಿ ಮಾಡಿದ ರೈತರ ಖಾತೆಗಳಿಗೆ ಹಣ ಜಮೆ ಆಗದಿರುವುದು ಗಮನಕ್ಕೆ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ತಾಂತ್ರಿಕ ಕಾರಣದಿಂದ ಹಣ ಜಮೆಯಾಗಿಲ್ಲ. ಆದಷ್ಟು ಬೇಗ ಕಡಲೆ ಮಾರಿದ ರೈತರ ಖಾತೆಗಳಿಗೆ ಹಣ ಜಮೆ ಆಗಲಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಲ್ಲೆಯಲ್ಲಿ ಮೆಕ್ಕೆಜೋಳ ಹೆಚ್ಚು ಬೆಳೆಯಲಾಗಿದೆ. ಕೆಎಂಎಫ್‌ ದೊಡ್ಡ ಪ್ರಮಾಣದಲ್ಲಿ ಮೆಕ್ಕೆ ಜೋಳ ಖರೀದಿ ಮಾಡಲಿಲ್ಲ. ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ 1400 ರೂ. ಬೆಲೆ ಇದೆ. ಇಂದಿನ ಪರಿಸ್ಥಿತಿಯಲ್ಲಿ ಸರ್ಕಾರದಿಂದ ಮೆಕ್ಕೆಜೋಳ ಖರೀದಿ ಮಾಡಲು ಆಗುವುದಿಲ್ಲ. ಮೆಕ್ಕೆಜೋಳ ಬೆಳೆದ ರೈತರಿಗೆ 5 ಸಾವಿರ ಸಬ್ಸಿಡಿ ಕೊಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಖರೀದಿ ಕೇಂದ್ರದ ಮೂಲಕ ಮೆಕ್ಕೆಜೋಳ ಖರೀದಿ ಮಾಡಲಾಗುವುದಿಲ್ಲ. ರೈತರು ತಮಗೆ ಇಷ್ಟ ಬಂದವರಿಗೆ ಮಾರಾಟ ಮಾಡಬಹುದು ಎಂದರು.

ಜಿಲ್ಲೆಗೆ ಅಂತಾರಾಜ್ಯದಿಂದ ಈವರೆಗೆ 1,180 ವಲಸೆ ಕಾರ್ಮಿಕರು ಬಂದಿದ್ದು, ಜಿಲ್ಲೆಯಿಂದಲೂ ಬೇರೆ ರಾಜ್ಯಗಳಿಗೆ ಕಾರ್ಮಿಕರು ಹೋಗಿದ್ದಾರೆ. ಮಹಾರಾಷ್ಟ್ರ, ತಮಿಳುನಾಡು, ಕೇರಳ ರಾಜ್ಯದಿಂದ ಕಾರ್ಮಿಕರು ಬಂದಿದ್ದಾರೆ. ಇಲ್ಲಿಂದಲೂ ಬೇರೆ ಬೇರೆ ರಾಜ್ಯಗಳಿಗೆ ವಲಸೆ ಕಾರ್ಮಿಕರು ಹೋಗಿದ್ದಾರೆ. ನಾಳೆ, ನಾಡಿದ್ದು ಇನ್ನೂ ಸಾಕಷ್ಟು ಜನ ಹೋಗಲಿದ್ದಾರೆ. ಮುಂಬೈದಿಂದ ನಮ್ಮ ರಾಜ್ಯಕ್ಕೆ ಕಾರ್ಮಿಕರು ಬಂದಾಗ ಹೆಚ್ಚಿನ ಪಾಸಿಟಿವ್‌ ಪ್ರಕರಣ ಪತ್ತೆಯಾಗಿವೆ. ಒಟ್ಟಿನಲ್ಲಿ ಕಾರ್ಮಿಕರ ಸ್ಥಳಾಂತರದಿಂದ ಹೆಚ್ಚಿನ ಪಾಸಿಟಿವ್‌ ಪ್ರಕರಣ ಪತ್ತೆಯಾಗುತ್ತಿವೆ ಎಂದು ಹೇಳಿದರು.

ಸರಕಾರ ಮಾರ್ಗಸೂಚಿ ಅನ್ವಯ ಮಂಗಳವಾರದಿಂದ ಬಸ್‌ಗಳು ಪ್ರಾರಂಭ ಆಗಲಿದ್ದು, ಟ್ಯಾಕ್ಸಿ ರಿಕ್ಷಾಗಳಿಗೂ ಪರವಾನಗಿ ನೀಡಲಾಗಿದೆ. ಸಿನಿಮಾ ಥಿಯೇಟರ್‌, ಮಾಲ್‌, ಪಬ್‌ಗಳು ಎಂದಿನಂತೆ ಬಂದ್‌ ಇರಲಿವೆ. ಪಾರ್ಕ್‌ಗಳಿಗೆ ಬೆಳಗ್ಗೆ ಹಾಗೂ ಸಂಜೆ ಹೊತ್ತು ಎರಡು ತಾಸು ತೆರೆಯಲು ಅವಕಾಶ ನೀಡಲಾಗಿದೆ. ಬಂದ್‌ ಆಗಿದ್ದ ಅಭಿವೃದ್ಧಿ ಕಾಮಗಾರಿಗಳನ್ನೂ ಪುನರಾರಂಭಿಸಿದ್ದೇವೆ ಎಂದು ತಿಳಿಸಿದರು.

ಕೆಸಿ ಪಾರ್ಕ್‌ ಬಳಿಯ ಸರಕಾರಿ ಪ್ರವಾಸಿ ಮಂದಿರದಲ್ಲಿ ಲಾಕಡೌನ್‌ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿರುವ ಬಗ್ಗೆ ವಿಚಾರ ಮಾಡಿ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಹೊಸದಾಗಿ ವೈನ್‌ಶಾಪ್‌ ಹಾಗೂ ಬಾರ್‌ಗೆ ಸರಕಾರ ಪರವಾನಗಿ ನೀಡಿಲ್ಲ. ಕೇವಲ ಎಂಎಸ್‌ಐಎಲ್‌ ಮಳಿಗೆಗಳಿಗೆ ಮಾತ್ರವೇ ಪರವಾನಗಿ ನೀಡಿದೆ. – ಜಗದೀಶ ಶೆಟ್ಟರ, ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.