ಚಿಗರಿ ದುರಸ್ತಿಯೇ ದೊಡ್ಡ ಸವಾಲು
•ಉಕದಲ್ಲಿಲ್ಲ ವೋಲ್ವೋ ಸರ್ವೀಸ್ ಸೆಂಟರ್ •ಬಸ್ಗೆ ತೀವ್ರ ಹಾನಿಯಾದ್ರೆ ವಿಳಂಬ ತಪ್ಪಿದ್ದಲ್ಲ
Team Udayavani, Jun 15, 2019, 9:28 AM IST
ಹುಬ್ಬಳ್ಳಿ: ನಿರ್ವಹಣಾ ದೃಷ್ಟಿಯಿಂದ ವಾಯವ್ಯ ಸಾರಿಗೆ ಸಂಸ್ಥೆ ಪಾಲಿಗೆ ಬಿಳಿಯಾನೆಯಾಗಿರುವ ಬಿಆರ್ಟಿಎಸ್ನ ಚಿಗರಿ ಬಸ್ಗಳ ದುರಸ್ತಿ ಸಮಸ್ಯೆ ಎದುರಾಗಿದ್ದು, ಅಪಘಾತದಲ್ಲಿ ತೀವ್ರ ಹಾನಿಯಾದ ಬಸ್ಗಳ ದುರಸ್ತಿಯಂತೂ ಸವಾಲಾಗಿ ಪರಿಣಮಿಸಿದೆ.
ಅವಳಿ ನಗರದ ಜನತೆಗೆ ಉತ್ತಮ ಸಾರಿಗೆ ಸೇವೆ ನೀಡುವುಕ್ಕಾಗಿ ವೋಲ್ವೋ ಕಂಪೆನಿಯ ವಾಹನಗಳನ್ನು ರಸ್ತೆಗಿಳಿಸಿರುವುದು ಸಂತಸ ವಿಚಾರ. ಈ ವಾಹನಗಳ ನಿರ್ವಹಣೆಗಾಗಿ ವಾಯವ್ಯ ಸಾರಿಗೆ ಸಂಸ್ಥೆ ಮೆಕ್ಯಾನಿಕ್ಗಳಿಗೆ ವಿಶೇಷ ತರಬೇತಿ ನೀಡಲಾಗಿದೆ. ಹುಬ್ಬಳ್ಳಿ ಹಾಗೂ ಧಾರವಾಡ ಘಟಕಗಳಲ್ಲಿ ತಲಾ 25 ಮೆಕ್ಯಾನಿಕ್ಗಳು ವೋಲ್ವೋ ವಾಹನ ತರಬೇತಿ ಪಡೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ನಿತ್ಯದ ನಿರ್ವಹಣೆಗೆ ಅತ್ಯಾಧುನಿಕ ಯಂತ್ರೋಪಕರಣಗಳು ಡಿಪೋಗಳಲ್ಲಿ ಅಳವಡಿಸಿರುವುದರಿಂದ ಯಾವುದೇ ತೊಂದರೆಯಿಲ್ಲ. ವೋಲ್ವೋ ವಾಹನಗಳಿಗೆ ಅಗತ್ಯವಾದ ಕೆಲ ಬಿಡಿ ಭಾಗಗಳನ್ನು ಖರೀದಿ ಮಾಡಲಾಗಿದೆ. ಅಗತ್ಯ ಬಿದ್ದರೆ ಖರೀದಿಸುವ ಅವಕಾಶ ಕೂಡ ಕಲ್ಪಿಸಲಾಗಿದೆ. ಆದರೆ ಅಪಘಾತಗಳಲ್ಲಿ ಹಾನಿಗೊಳಗಾದ ಬಸ್ಗಳ ದುರಸ್ತಿಗೆ ಯಾವುದೇ ತಯಾರಿ ಹಾಗೂ ವ್ಯವಸ್ಥೆ ಇಲ್ಲದಿರುವುದು ಅಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ.
ದುರಸ್ತಿಗಾಗಿ ಬೆಂಗಳೂರಿಗೆ ವಾಹನಗಳನ್ನು ಕಳುಹಿಸಿದರೆ ಒಂದು ಬಸ್ಗೆ ಸುಮಾರು 30-35 ಸಾವಿರ ರೂ. ಡೀಸೆಲ್ಗಾಗಿ ವ್ಯಯ ಮಾಡಬೇಕಾಗುತ್ತದೆ. ಇನ್ನೂ ಈ ವಾಹನಗಳು ಕಂಪೆನಿ ವಿಮಾ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ವಿಮೆ ಪ್ರಕ್ರಿಯೆ ಪೂರ್ಣಗೊಂಡ ನಂತರವಷ್ಟೇ ದುರಸ್ತಿ ನಡೆಯುವುದರಿಂದ ವಿಳಂಬಕ್ಕೆ ಕಾರಣವಾಗಲಿದೆ.
ವೋಲ್ವೋ ಬಸ್ಸಿನ ಮುಂಭಾಗದ ಗಾಜು ಒಡೆದರೆ ಅದನ್ನು ಬೆಂಗಳೂರಿನಿಂದ ತರಿಸಿಕೊಂಡು ಅಳವಡಿಸಲಾಗುತ್ತದೆ. ಈ ಕಾರ್ಯಕ್ಕೆ ಕನಿಷ್ಠ ಐದಾರು ದಿನ ಬೇಕಾಗುತ್ತಿದೆ. ಸಣ್ಣ ಕಾರ್ಯಕ್ಕೆ ಇಷ್ಟೊಂದು ದಿನ ಬೇಕಾಗಿರುವುದರಿಂದ ತೀವ್ರ ಜಖಂಗೊಂಡಿರುವ ಬಸ್ಗಳ ದುರಸ್ತಿಗೆ ಇನ್ನೆಷ್ಟು ದಿನ ಬೇಕಾಗುತ್ತದೆ ಎಂಬುದು ಸಂಸ್ಥೆಯ ತಾಂತ್ರಿಕ ಸಿಬ್ಬಂದಿ ಅಭಿಪ್ರಾಯವಾಗಿದೆ.
•ಹೇಮರಡ್ಡಿ ಸೈದಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…