ಹೆರಿಗೆ ನೋವು; ನೇಪಾಳ ಮಹಿಳೆಗೆ ರೈಲ್ವೆ ಸಿಬ್ಬಂದಿಯ ಸಕಾಲಿಕ ಸಹಾಯ
Team Udayavani, Jul 6, 2019, 9:33 AM IST
ಹುಬ್ಬಳ್ಳಿ: ಬೆಳಗಾವಿ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಸುರೇಂದ್ರ ಪ್ರಕಾಶ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ನೇಪಾಳದ ದಂಪತಿ.
ಹುಬ್ಬಳ್ಳಿ: ರೈಲಿನಲ್ಲಿ ಸಂಚರಿಸುತ್ತಿದ್ದಾಗ ಹೆರಿಗೆ ನೋವು ಕಾಣಿಸಿಕೊಂಡ ನೇಪಾಳದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡಿದ ನೈಋತ್ಯ ರೈಲ್ವೆ ಸಿಬ್ಬಂದಿ ಕಾರ್ಯ ಪ್ರಶಂಸೆಗೆ ಪಾತ್ರವಾಗಿದೆ.
ಮೇ 16ರಂದು ನೇಪಾಳಿ ದಂಪತಿ ಬೆಂಗಳೂರಿನಿಂದ ನೇಪಾಳಕ್ಕೆ ತೆರಳಲು ಸಂಪರ್ಕ ಕ್ರಾಂತಿ ಎಕ್ಸ್ಪ್ರೆಸ್ ಮೂಲಕ ದೆಹಲಿಗೆ ಪ್ರಯಾಣಿಸುತ್ತಿದ್ದರು. ಮಧ್ಯರಾತ್ರಿ ಬೆಳಗಾವಿ ಜಿಲ್ಲೆಯ ಖಾನಾಪುರ ಸಮೀಪ ಮಹಿಳೆಗೆ ಹೆರಿಗೆ ನೋವು ಶುರುವಾಗಿದೆ. ಟಿಟಿಇ ಶ್ರೀನಿವಾಸ ನೆರವಿನಿಂದ ದಂಪತಿ ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ಕರೆ ಮಾಡಿ ವೈದ್ಯಕೀಯ ನೆರವಿಗಾಗಿ ಮನವಿ ಮಾಡಿದ್ದಾರೆ. ಸ್ಟೇಷನ್ ಮಾಸ್ಟರ್ ಸುರೇಂದ್ರ ಪ್ರಕಾಶ ಕರೆಗೆ ಸ್ಪಂದಿಸಿ ನಿಲ್ದಾಣದಲ್ಲಿ (108) ಆ್ಯಂಬುಲೆನ್ಸ್ಗೆ ವ್ಯವಸ್ಥೆ ಮಾಡಿದ್ದಾರೆ.
ರೈಲು ಬೆಳಗಾವಿಗೆ ಬರುತ್ತಿದ್ದಂತೆಯೇ ಎಸ್-2 ಕೋಚ್ನಲ್ಲಿದ್ದ ಗರ್ಭಿಣಿಯನ್ನು ಬೆಳಗಾವಿಯ ಕೆಎಲ್ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆರಿಗೆಯಾದ 10 ದಿನಗಳ ನಂತರ ದಂಪತಿಯು ನವಜಾತ ಪುತ್ರಿಯೊಂದಿಗೆ ಬೆಳಗಾವಿ ನಿಲ್ದಾಣಕ್ಕೆ ಬಂದು ಸ್ಟೇಷನ್ ಮಾಸ್ಟರ್ ಸುರೇಂದ್ರ ಪ್ರಕಾಶ ಹಾಗೂ ಸಿಬ್ಬಂದಿಗೆ ಸಿಹಿ ನೀಡಿ ಕೃತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ