ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ  ಕಲಿಸಿ: ಉದಾಸಿ


Team Udayavani, Jun 21, 2018, 5:33 PM IST

21-june-22.jpg

ಹಾನಗಲ್ಲ: ತಾಯಿಯ ಸಂಸ್ಕಾರದಿಂದಲೇ ಆರಂಭವಗುವ ಶಿಕ್ಷಣ, ಶಾಲೆಗಳನ್ನು ಪ್ರವೇಶಿಸಿದ ಆರಂಭದಲ್ಲಿಯೇ ಸರಿಯಾದ ಶೈಕ್ಷಣಿಕ ಮಾರ್ಗದರ್ಶನ ಮಕ್ಕಳಿಗೆ ದೊರೆತರೆ ಭವಿಷ್ಯದಲ್ಲಿ ಉಜ್ವಲ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಶಾಸಕ ಸಿ.ಎಂ.ಉದಾಸಿ ಹೇಳಿದರು.

ಹಾನಗಲ್ಲ ತಾಲೂಕಿನ ಇನಾಂನೀರಲಗಿ ಹಾಗೂ ಸಮ್ಮಸಗಿ ಗ್ರಾಮಗಳ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಗಳು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಿವೆ. ಕಲಿಕೆಗೆ ಸಹಕಾರಿಯಾಗಲು ಹತ್ತು ಹಲವು ರೀತಿಯ ಸೌಲಭ್ಯ ನೀಡುತ್ತಿವೆ. ಪಾಲಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಬೇಕು. ಗುಣಮಟ್ಟದ ಶಿಕ್ಷಣ ವ್ಯವಹಾರಿಕ ಜ್ಞಾನ ನೀಡಿದರೆ ಸಂಸ್ಕಾರ ಉತ್ತಮ ಪ್ರಜೆಯನ್ನಾಗಿ ನಿರ್ಮಿಸಬಲ್ಲದು ಎಂದರು.

ಬದಲಾದ ಕಾಲದಲ್ಲಿ ತಾಂತ್ರಿಕತೆಗೆ ಹೆಚ್ಚಿನ ಪ್ರಾಶಸ್ತ್ಯವಿದ್ದು ಕಾಲಕ್ಕೆ ಹೊಂದಿಕೊಳ್ಳುವ ಹಾಗೆ ಶೈಕ್ಷಣಿಕ ಉನ್ನತಿಯೂ ಬೇಕಾಗುತ್ತದೆ. ಅದಕ್ಕಾಗಿ ಮಕ್ಕಳನ್ನು ಮಾನಸಿಕವಾಗಿ, ಬೌದ್ಧಿಕವಾಗಿ ಸಿದ್ಧಗೊಳಿಸುವುದು ಪಾಲಕರು ಹಾಗೂ ಶಿಕ್ಷಕರ
ಜವಾಬ್ದಾರಿ. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಕರ ಆಯ್ಕೆಯೂ ಸ್ಪರ್ಧಾತ್ಮಕವಾಗಿದೆ. ಅಲ್ಲದೆ ಶಿಕ್ಷಕರಾದವರು ತಮ್ಮ ಬೌದ್ಧಿಕ ಶಕ್ತಿಯನ್ನು ಮಕ್ಕಳಿಗೆ ಧಾರೆ ಎರೆಯಬೇಕು. ಸರಕಾರ ಸೌಲಭ್ಯಗಳನ್ನು ನೀಡಬಹುದೇ ಹೊರತು ಶಿಕ್ಷಣ ನೀಡಬೇಕಾದವರು ಶಿಕ್ಷಕರೇ ಎಂಬುದನ್ನು ಮನಗಾಣಬೇಕು ಎಂದು ತಿಳಿಸಿದರು. 

40 ವರ್ಷಗಳಿಂದ ದೇಶದಲ್ಲಿ ಸಾಧ್ಯವಾಗದ ಅಭಿವೃದ್ಧಿ ಯೋಜನೆಯನ್ನು ಪ್ರಧಾನಿ ಮೋದಿ ಸರಕಾರ ಮಾಡಿದೆ, ಕೇವಲ 12 ರೂ. ಕಂತುಗಳಲ್ಲಿ 36 ಕೋಟಿ ಜನರಿಗೆ ಜೀವ ವಿಮೆ, ಜನಧನ್‌, ಆಯುಷ್ಯಭಾಗ್ಯ, ಉಜ್ವಲ್‌, ಮುದ್ರಾ, ಫಸಲ್‌ ಬಿಮಾ ಯೋಜನೆ, ದಿನದಯಾಳ ಉಪಾಧ್ಯಾಯ ಗ್ರಾಮ ಯೋಜನೆ ಹಾಗೂ ವಿದ್ಯುತ್‌ ಸಂಪರ್ಕ ಯೋಜನೆ ಸೇರಿದಂತೆ ಹತ್ತು ಹಲವು ವಿಭಿನ್ನ ಯೋಜನೆಗಳನ್ನು ಮೋದಿಯವರ ನೇತೃತ್ವದ ಸರಕಾರ ಮಾಡಿದೆ ಎಂದು ಹೇಳಿದರು.

ಜಿಪಂ ಸದಸ್ಯ ರಾಘವೇಂದ್ರ ತಹಶೀಲ್ದಾರ ಮಾತನಾಡಿ, ಅಂಗನವಾಡಿಗಳು ಮಕ್ಕಳ ಶಿಕ್ಷಣದ ಮೊದಲ ಹಂತದ ಮಾರ್ಗದರ್ಶಕ ಶಾಲೆಗಳಾಗಿವೆ. ಇಲ್ಲಿಂದಲೇ ಮಕ್ಕಳಿಗೆ ಸ್ವಚ್ಛತೆ ಹಾಗೂ ಉತ್ತಮ ಸಂಸ್ಕಾರಕ್ಕೆ ಬುನಾದಿ ಹಾಕಬೇಕು. ಇದಕ್ಕಾಗಿ ಅಂಗನವಾಡಿಗಳ ಸ್ವಚ್ಛತೆ ಹಾಗೂ ಗುಣಮಟ್ಟದ ಆಹಾರ ನೀಡುವುದು ಮೊದಲ ಆದ್ಯತೆಯಾಗಬೇಕು ಎಂದರು.

ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಕಾಡಣ್ಣನವರ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯ ಸಿದ್ದನಗೌಡ ಪಾಟೀಲ, ರಾಜಣ್ಣ ಪಟ್ಟಣದ, ಬಸವರಾಜ ಪುರ್ಲಿ, ಉಪಾಧ್ಯಕ್ಷ ಶೇಖಣ್ಣ ಈಳಿಗೇರ, ಹುಸೇನಮಿಯ್ನಾ ಬಿಳಗಲಿ, ವನಜಾಕ್ಷಿ ಸಾಗರವಳ್ಳಿ, ಹನುಮಂತ ಕೋಣನಕೊಪ್ಪ, ಬಸಣ್ಣ ಈಳಿಗೇರ, ನಾಗರಾಜ ಪಾಟೀಲ, ಸಂತೋಷ ಮಡಿವಾಳರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್‌.ಜಿ.ಶಶಿಧರ, ಸಿಡಿಪಿಒ ವಿದ್ಯಾಬಡಿಗೇರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.