ಮಕ್ಕಳು ವಿಕಾಸದ ಭಾಗವಾಗಲಿ: ಡಾ| ಪಾಟೀಲ


Team Udayavani, May 22, 2019, 12:14 PM IST

hubali-tdy-4..

ಧಾರವಾಡ: ನಗರದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಲೋಕದ ಮನಸುಗಳ ಚಿಂತನಾ ಸಮಾವೇಶವನ್ನು ಡಾ| ಸಿದ್ಧನಗೌಡ ಪಾಟೀಲ ಉದ್ಘಾಟಿಸಿದರು.

ಧಾರವಾಡ: ಮಕ್ಕಳನ್ನು ಅಭಿವೃದ್ಧಿ ದೃಷ್ಟಿಯಿಂದ ನೋಡದೇ ವಿಕಾಸದ ಭಾಗವಾಗಿ ನೋಡುವ ಅಗತ್ಯವಿದೆ ಎಂದು ಹಿರಿಯ ಹೋರಾಟಗಾರ ಡಾ| ಸಿದ್ಧನಗೌಡ ಪಾಟೀಲ ಹೇಳಿದರು.

ಚಿಲಿಪಿಲಿ ಗುಬ್ಬಚ್ಚಿ ಗೂಡು ಬಳಗ ವತಿಯಿಂದ ನಗರದ ಆಲೂರು ವೆಂಕಟರಾವ್‌ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಲೋಕದ ಮನಸುಗಳ ಚಿಂತನಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಮಾನದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಅಭಿವೃದ್ಧಿ ದೃಷ್ಟಿಯಿಂದ ಅಷ್ಟೇ ನೋಡುತ್ತಿರುವುದು ವಿಷರ್ಯಾಸವೇ ಸರಿ. ಇದರಿಂದ ಮಕ್ಕಳು ಏಕಮುಖೀಯಾಗುತ್ತಿದ್ದು, ಪೋಷಕರಿಗೂ ಇದೇ ಬೇಕಿದೆ. ಇದರಿಂದ ಮಗುವಿನ ವಿಕಾಸದ ಜೀವಸತ್ವಗಳೇ ನಷ್ಟವಾಗುತ್ತಿರುವುದು ಯಾರಿಗೂ ಕಾಣುತ್ತಿಲ್ಲ ಎಂದು ವಿಷಾದಿಸಿದರು.

ಶಿಕ್ಷಕರಲ್ಲಿ ಎರಡು ಭಾಷೆಗಳಿದ್ದು, ಒಂದು ಕರಳು ಭಾಷೆ, ಇನ್ನೊಂದು ಕೊರಳು ಭಾಷೆ. ಮಕ್ಕಳನ್ನು ಮುಂದಿನ ದೇಶದ ಪ್ರಜೆಗಳಾಗಿ, ಸ್ವಂತ ಮಕ್ಕಳಂತೆ ವಿಕಾಸ ಮಾಡುವುದು ಕರಳು ಭಾಷೆ. ಕೊರಳು ಭಾಷೆಯ ಶಿಕ್ಷಕರು ಸಿಲೆಬಸ್‌ ಮುಗಿಸಲು ಮಾತ್ರ ಪ್ರಯತ್ನಿಸುತ್ತಾರೆ. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಕರಳು ಭಾಷೆಯ ಶಿಕ್ಷಕರ ಅವಶ್ಯಕತೆ ಇದೆ ಎಂದರು.

ಮೇ ತಿಂಗಳು ಶಿಕ್ಷಣ ಕ್ಷೇತ್ರ ವ್ಯಾಪಾರದ ದೊಡ್ಡ ಸುಗ್ಗಿ ಕಾಲ. ಈಗಂತೂ ಶಿಕ್ಷಣದಲ್ಲೂ ಮಕ್ಕಳನ್ನು ವ್ಯಾಪಾರದ ಕೇಂದ್ರಗಳಾಗಿ ನೋಡಲಾಗುತ್ತಿದೆ. ಬ್ರಿಟಿಷರ್‌ ಬಿಟ್ಟು ಹೋದ ಶಿಕ್ಷಣ ವಿಧಾನಗಳನ್ನು ಇಂದಿಗೂ ಬದಲಾವಣೆ ಮಾಡಿಕೊಳ್ಳಲು ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು ವಿಜಯ ನಗರದ ಬಿಂಬ ಸಂಸ್ಥೆಯ ಶೋಭಾ ವೆಂಕಟೇಶ ಮಾತನಾಡಿ, ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಮಕ್ಕಳಿಗೆ ಸಿಗುವ ಅವಕಾಶ, ಮೀಸಲಾತಿಯನ್ನು ರಂಗಭೂಮಿಯಲ್ಲಿ ಭಾಗವಹಿಸುವ ಮಕ್ಕಳಿಗೂ ನೀಡುವಂತೆ ಹಕ್ಕೊತ್ತಾಯ ಮಂಡಿಸಬೇಕು. ಇದರಿಂದ ಮುಂಬರುವ ಯುವ ಕಲಾವಿದರಿಗೆ ಪ್ರೋತ್ಸಾಹಿಸಿದಂತೆ ಆಗುತ್ತದೆ ಎಂದರು.

ಸಾಹಿತಿ ಮಾಲತಿ ಪಟ್ಟಣಶೆಟ್ಟಿ ಮಾತನಾಡಿ, ಶಿಕ್ಷಕರು, ವೈದ್ಯರು, ರಾಜಕಾರಣಿಗಳು ಮಕ್ಕಳ ಕುರಿತು ಚಿಂತನೆ ನಡೆಸಬೇಕು. ಜತೆಗೆ ರಾಜ್ಯ ಸರಕಾರಗಳು ಮಂಡಿಸುವ ಬಜೆಟ್‌ನಲ್ಲಿ ಮಕ್ಕಳಿಗಾಗಿಯೇ ಪ್ರತೇಕ ಬಜೆಟ್ ಮಂಡಿಸಬೇಕು. ಅಂದಾಗ ಮಕ್ಕಳ ವಿಕಾಸವಾಗಲು ಸಾಧ್ಯ ಎಂದರು.

ಇದೇ ವೇಳೆ ಮಕ್ಕಳ ಸಾಹಿತ್ಯ ಸಮೃದ್ಧಿ ಪೋಷಣೆ, ಬೆಂಬಲ ವಿಷಯ ಕುರಿತು, ಮಕ್ಕಳ ಪರ ಸಂಘಟನೆಗಳ ಬಲವರ್ಧನೆ-ಸವಾಲುಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಾಹಿತಿಗಳು ಚರ್ಚೆ ನಡೆಸಿದರು.

ಹಿರೇಮಲ್ಲೂರ ಕಾಲೇಜಿನ ಪ್ರಾಚಾರ್ಯ ಶಶಿಧರ ತೋಡಕರ, ಸಾಹಿತಿಗಳಾದ ಚಂದ್ರಕಾಂತ ಕರದಳ್ಳಿ, ಟಿ.ಎಸ್‌.ನಾಗರಾಜಶೆಟ್ಟಿ, ಕೃಷ್ಣಮೂರ್ತಿ ಬಿಳಿಗೆರಿ, ನಿಂಗಣ್ಣ ಕುಂಟಿ, ಗಿರೀಶ ಜಕಾಪುರೆ, ಕೆ.ಎಚ್,ನಾಯಕ್‌, ವಿಶ್ವನಾಥ ಮರ್ತೂರ, ಪ.ಗು.ಸಿದ್ದಾಪೂರ, ಡಾ| ಆನಂದ ಪಾಟೀಲ, ಜಹಾನ್‌ ಆರ್‌, ನಭಾ ಒಕ್ಕುಂದ, ವಿವೇಕಾನಂದ ಪಾಟೀಲ ಸೇರಿದಂತೆ ಇತರರು ಇದ್ದರು. ಶಂಕರ ಹಲಗತ್ತಿ ಪ್ರಾಸ್ತಾವಿಕ ಮಾತನಾಡಿದರು. ಕೀರ್ತಿವತಿ ವಂದಿಸಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.