ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಕಮ್ಮಟಕ್ಕೆ ಚಾಲನೆ


Team Udayavani, Feb 18, 2017, 3:15 PM IST

hub7.jpg

ಧಾರವಾಡ: ಕಲ್ಪನೆಗೆ ಆಲೋಚನಾ ಶಕ್ತಿ ಸೇರಿದರೆ ಅದ್ಭುತ ಕವಿತೆ ಹೊರಹೊಮ್ಮಲು ಸಾಧ್ಯ ಎಂದು ಹಿರಿಯ ಸಾಹಿತಿ ಡಾ| ಗುರುಲಿಂಗ ಕಾಪಸೆ ಹೇಳಿದರು. ನಗರದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮ ಸಭಾಂಗಣದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ಹಮ್ಮಿಕೊಂಡ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಕಮ್ಮಟ ಉದ್ಘಾಟಿಸಿ ಮಾತನಾಡಿದರು.

ಸಾಹಿತ್ಯ ರಚನೆ ಒಂದು ತಪಸ್ಸು. ಅದನ್ನು ನಿರಂತರ ಅಧ್ಯಯನ, ಬರವಣಿಗೆ, ಹವ್ಯಾಸದ ರೂಢಿಯಿಂದಲೇ ಒಲಿಯುವುದು ಎಂದರು. ಮಕ್ಕಳಿಗಾಗಿ ಸಾಹಿತ್ಯ ರಚಿಸುವವರು ಅವರ ಮನಸ್ಸು ಅರಿಯಬೇಕು. ನಂತರ ಅವಳ ಮನಸ್ಸಿನ ಆಳಕ್ಕಿಳಿದು, ಭಾವನೆ, ಆಸೆ-ಆಕಾಂಕ್ಷೆ ಅರಿತು, ಮಕ್ಕಳಂತಾಗಿ ಸಾಹಿತ್ಯ ರಚಿಸಿದಾಗ ಮಕ್ಕಳಿಗೆ ರುಚಿಸುತ್ತದೆ.

ರಚಿಸುವ ಕವಿತೆ ವ್ಯಾಕರಣ, ಲಯಬದ್ಧವಾಗಿ ಇದ್ದಾಗ, ಭಾವ ತುಂಬಿ ಹಾಡಲು ಸಾಧ್ಯ ಎಂದರು. ಕವಿಸಂ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ಮಕ್ಕಳು ಕಣ್ಣಿಗೆ ಗೋಚರಿಸಿದ ಹಾಗೂ ಗೋಚರಿಸದ ಕಲ್ಪನಾತೀತ ಸಾಹಿತ್ಯ ರಚಿಸುತ್ತಾರೆ. ಈ ವೇಳೆ ಮುಕ್ತವಾಗಿ ಅವರ ವಿಚಾರಗಳನ್ನು ಆಲಿಸುವ, ಆಸ್ವಾದಿಸುವ ಗುಣ ಮಕ್ಕಳ ಸಾಹಿತಿಗಳಿಗೆ ಇರಬೇಕು.

ಮಕ್ಕಳಲ್ಲಿ ಅಡಗಿರುವ ಭಾವನೆಗಳನ್ನು ಹೇಗೆ ಹೊರ ತೆಗೆಯಬೇಕು. ಅವರನ್ನು ಸಾಹಿತ್ಯ ಕೃಷಿಯ ಚಟುವಟಿಕೆಗೆ ಅಣಿಗೊಳಿಸಬೇಕು. ಅದರಲ್ಲೂ ಸರ್ಕಾರಿ, ಹಿಂದುಳಿದ ವರ್ಗಗಳ, ವಸತಿ ಶಾಲೆಗಳ ಮಕ್ಕಳ ಪ್ರತಿಭೆ ಗುರುತಿಸುವ ಉದ್ದೇಶದಿಂದ ಆಯ್ದ 40 ಜನರನ್ನು ಕಮ್ಮಟಕ್ಕೆ ಆಯ್ಕೆ ಮಾಡಿದೆ ಎಂದರು. ರಂಗ ನಿರ್ದೇಶಕಿ ಎಸ್‌. ಮಾಲತಿ ಮಾತನಾಡಿ, ಟಿವಿ, ಮೊಬೈಲ್‌ಗ‌ಳ ಪ್ರಭಾವದಿಂದ ಮಕ್ಕಳ ಬದುಕು ಸೊರಗುತ್ತಿದೆ.

ಅವರಿಗೆ ಸಂಸ್ಕೃತಿ, ಭಾಷೆ, ಮೌಲ್ಯಗಳು ಸಿಗುತ್ತಿಲ್ಲ. ವೇಗದ ಬದುಕಿನಿಂದ ನಮ್ಮಲ್ಲಿ ಚಿಂತನೆ ಹಾಗೂ ನಾನೇನು ಎಂಬ ಆತ್ಮವಿಮರ್ಶೆ ಸಹ ಇಲ್ಲವಾಗಿದೆ. ಅಪ್ರಾಮಾಣಿಕತೆ, ಭ್ರಷ್ಟಾಚಾರ ತಾಂಡವಾಡುತ್ತಿರುವ ಇಂದಿನ ಸಮಾಜದಲ್ಲಿ ಮಕ್ಕಳು ಉತ್ತಮವಾಗಿ ಬದುಕಲು ಸಾಧ್ಯವಿಲ್ಲ. ಸಂಪೂರ್ಣ ಕತ್ತಲೆ ಆವರಿಸಿರುವ ಸಂದರ್ಭದಲ್ಲಿ ಕಮ್ಮಟ ಎನ್ನುವಂತಹ ಸಣ್ಣ ಹಣತೆ ಹಚ್ಚುವ ಮೂಲಕ ಬೆಳಕು ಮೂಡಿಸುವ ಕೆಲಸ ನಡೆಯುತ್ತಿರುವುದು ಶ್ಲಾಘನೀಯ ಎಂದರು. 

ಅಕಾಡೆಮಿ ಅಧ್ಯಕ್ಷ ವೇದವ್ಯಾಸ ಕೌಲಗಿ ಅಧ್ಯಕ್ಷತೆ ವಹಿಸಿದ್ದರು. ಯೋಜನಾಧಿಕಾರಿ ಮಲ್ಲಿಕಾರ್ಜುನ ಮಾಲಿಗೇರ, ಸಾಹಿತಿಗಳಾದ ನಿಂಗಣ್ಣ ಕುಂಟಿ, ವಿವಿಧ ಜಿಲ್ಲೆಗಳ ಮಕ್ಕಳ ಸಾಹಿತಿಗಳು, ಇತರರು ಇದ್ದರು. ಕಮ್ಮಟ ನಿರ್ದೇಶಕ ಡಾ|ನಿಂಗು ಸೊಲಗಿ ಸ್ವಾಗತಿಸಿ, ನಿರೂಪಿಸಿದರು.   

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.