ಚಿನ್ನಿ ನಿರಾಣಿ ಎಂದು ಕರೆಯುತ್ತಿದ್ದರು
Team Udayavani, Aug 17, 2018, 4:58 PM IST
ಮುಧೋಳ: ನನ್ನನ್ನು ‘ಚಿನ್ನಿ ನಿರಾಣಿ'(ಚಿನ್ನಿ ಹಿಂದಿಯಲ್ಲಿ ಸಕ್ಕರೆ) ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪ್ರೀತಿಯಿಂದ ಕರೆಯುತ್ತಿದ್ದರು. ಅವರು ಎಲ್ಲರನ್ನು ಅವರವರ ಹೆಸರಿನಿಂದ ಕರೆಯುತ್ತಿದ್ದರು. ಅದು ವಾಜಪೇಯಿ ಅವರ ಅಪರೂಪದ ನಾಯಕತ್ವದ ಗುಣ. ನಾನು ಶಾಸಕನಾಗಿ, ಸಚಿವನಾಗಿ ವಾಜಪೇಯಿ ಅವರನ್ನು ಹಲವು ಬಾರಿ ಭೇಟಿಯಾಗಿ ಅವರೊಂದಿಗೆ ಚರ್ಚಿಸುವ ಅವಕಾಶ ದೊರೆತಿದ್ದು, ನನ್ನ ಬದುಕಿನ ಭಾಗ್ಯವೆಂದು ಭಾವಿಸಿದ್ದೇನೆ ಎಂದು ಶಾಸಕ ಮುರುಗೇಶ ನಿರಾಣಿ ವಾಜಪೇಯಿ ಅವರ ವ್ಯಕ್ತಿತ್ವ ಸ್ಮರಿಸಿ ಕಂಬನಿ ಮಿಡಿದಿದ್ದಾರೆ.
ಭಾರತದಲ್ಲಿ ಹರಿದ ದೊಡ್ಡ ನದಿಗಳ ಜೋಡನೆ, ವೈಜ್ಞಾನಿಕ ಕೃಷಿ, ತಂತ್ರಜ್ಞಾನದ ಅಭಿವೃದ್ಧಿ ಮುಂತಾದ ಮಹತ್ವದ ಚಿಂತನೆಗಳನ್ನು ಅವರು ದೇಶಕ್ಕೆ ಕೊಟ್ಟಿದ್ದಾರೆ. ಪ್ರಧಾನಿಯಾಗಿ ಅವರು ಜಗತ್ತಿನ ಉಳಿದ ರಾಷ್ಟ್ರಗಳೊಂದಿಗೆ ಅವರು ಒಳ್ಳೆಯ ಸಂಬಂಧ ಬೆಳೆಸಿದರು. ಮಾಜಿ ಪ್ರಧಾನಿ ಅಟಲ್ ಬಿಹಾರ ವಾಜಪೇಯಿ ಭಾರತದ ಹೆಮ್ಮೆಯ ಪುತ್ರ. ನಮ್ಮ ದೇಶವನ್ನು ಸಶಕ್ತವಾಗಿ ಕಟ್ಟುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಗಾಂಧಿಧೀಜಿ ಹಾಗೂ ನೆಹರು ಅವರಂತೆ ವಾಜಪೇಯಿ ಅವರ ಹೆಸರು ಭಾರತದ ಚರಿತ್ರೆಯಲ್ಲಿ ಅಮರವಾಗಿ ಉಳಿಯುತ್ತದೆ ಎಂದು ನಿರಾಣಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
MUST WATCH
ಹೊಸ ಸೇರ್ಪಡೆ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ