ಹುಬ್ಬಳ್ಳಿ: ಅರಣ್ಯ ಇಲಾಖೆ ನಿದ್ದೆಗೆಡಿಸಿದ ಚಿರತೆ

ಕ್ಷಣ ಕ್ಷಣಕ್ಕೂ ಜಾಡು ಬದಲು|ಜನರಲ್ಲಿ ಮತ್ತಷ್ಟು ಆತಂಕ |ಮುಂದುವರಿದ ಕಾರ್ಯಾಚರಣೆ

Team Udayavani, Sep 20, 2021, 1:39 PM IST

hyt

ವರದಿ: ಶಿವಶಂಕರ ಕಂಠಿ

ಹುಬ್ಬಳ್ಳಿ: ರಾಜನಗರದ ಕೇಂದ್ರೀಯ ವಿದ್ಯಾಲಯ ನಂ.1ರ ಬಳಿ ಶನಿವಾರ ರಾತ್ರಿ ಪ್ರತ್ಯಕ್ಷವಾಗಿದ್ದ ಚಿರತೆ ಬೆಳಗಾಗುವುದರೊಳಗೆ ಅಲ್ಲಿಂದ ಕಣ್ಮರೆಯಾಗಿದ್ದು ಅರಣ್ಯ ಇಲಾಖೆಯವರ ನಿದ್ದೆಗೆಡಿಸಿದ್ದರೆ, ಜನರಲ್ಲಿ ಮತ್ತಷ್ಟು ಆತಂಕ ಹುಟ್ಟಿಸಿದೆ.

ಮೂರು ದಿನಗಳ ಹಿಂದೆ ನೃಪತುಂಗ ಬೆಟ್ಟದಲ್ಲಿ ರಾತ್ರಿ ವಾಯುವಿಹಾರ ಮಾಡುತ್ತಿದ್ದ ಓರ್ವರಿಗೆ ಕಾಣಿಸಿಕೊಂಡಿದ್ದ ಚಿರತೆಯು ನಂತರ ಎಲ್ಲಿ ಹೋಗಿತ್ತೋ ಗೊತ್ತಾಗಿರಲಿಲ್ಲ. ಆದರೆ, ಶನಿವಾರ ರಾತ್ರಿ ಕೇಂದ್ರೀಯ ವಿದ್ಯಾಲಯದ ಪ್ರಾಂಗಣದಲ್ಲಿ ಪ್ರತ್ಯಕ್ಷವಾಗಿತ್ತು. ವಿದ್ಯಾರ್ಥಿಯೊಬ್ಬ ಮೊಬೈಲ್‌ನಲ್ಲಿ ಅದು ಓಡಾಡುವ ದೃಶ್ಯ ಸೆರೆ ಹಿಡಿದಿದ್ದ. ಚಿರತೆ ಇರುವ ಬಗ್ಗೆ ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಹಾಗೂ ಅಶೋಕನಗರ ಪೊಲೀಸರು ಅದರ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ಆದರೆ ಚಿರತೆ ಕೆಲವೇ ಕ್ಷಣಗಳಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದು, ರಾತ್ರಿಯೆಲ್ಲ ಗಂಗೂಬಾಯಿಹಾನಗ‌ಲ್‌ ಸಂಗೀತ ವಿದ್ಯಾಲಯ, ಟಿಂಬರ್‌ ಯಾರ್ಡ್‌ ಸೇರಿದಂತೆ ನೃಪತುಂಗ ಬೆಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಿರುಗಾಡಿದೆ ಎಂದು ಹೇಳಲಾಗುತ್ತಿದೆ.

ವಲಯ ಅರಣ್ಯಾಧಿಕಾರಿ ಶ್ರೀಧರ ಎಂ. ತೆಗ್ಗಿನಮನಿ‌ ನೇತೃತ್ವದಲ್ಲಿ ರಾತ್ರಿಯಿಂದ ಕಾರ್ಯಾಚರಣೆ ಮುಂದುವರಿಸಿದ್ದು, ಅದನ್ನು ಹೇಗಾದರೂ ಸೆರೆ ಹಿಡಿಯಬೇಕೆಂದು ಪ್ರತ್ಯೇಕ ಮೂರು ಕಡೆಗಳಲ್ಲಿ ಬೋನ್‌ ಇಟ್ಟಿದ್ದಾರೆ. ಆದರೆ ಚಿರತೆ ಮಾತ್ರ ಅವರ ಸೆರೆಗೆ ಬೀಳುತ್ತಿಲ್ಲ. ಚಿರತೆ ಕೆಲವು ಜನರ ಕಣ್ಣಿಗೆ ಬೀಳುತ್ತಿದ್ದಂತೆ ಕ್ಷಣಾರ್ಧದಲ್ಲಿ ಕಣ್ಮರೆಯಾಗುತ್ತಿದೆ. ಅದರ ಜಾಡು ಹಿ‌ಡಿದು ಅರಣ್ಯ ಇಲಾಖೆಯವರು ಕಾರ್ಯಾಚರಣೆಗೆ ಮುಂದಾಗುತ್ತಿದ್ದಂತೆ ಅಲ್ಲಿಂದ ಅದು ಮಾಯವಾಗುತ್ತಿದೆ. ಅಲ್ಲದೆ ಅದರ ಜಾಡು ಹಿಡಿದು ಪತ್ತೆಗೆ ಮುಂದಾಗಬೇಕೆಂದರೆ ಭೂಮಿಯು ಒಣಗಿದ್ದರಿಂದ ಚಿರತೆಯ ಪಾದದ ಗುರುತುಗಳು ಸಿಗುತ್ತಿಲ್ಲ. ಅಲ್ಲದೆ ಯಾವುದೇ ನಾಯಿ, ಜನುವಾರುಗಳನ್ನು ತಿಂದು ಹಾಕಿದ ಕುರುಹು ಸಿಗುತ್ತಿಲ್ಲ. ಹೀಗಾಗಿ ಕಾರ್ಯಾಚರಣೆಗೆ ತೊಂದರೆ ಆಗುತ್ತಿದೆ ಎಂದು ತಿಳಿದು ಬಂದಿದೆ.

ಚಿರತೆ ಕಳೆದ ಮೂರು ದಿನಗಳಿಂದ ನೃತಪತುಂಗ ಬೆಟ್ಟ ಸುತ್ತಮುತ್ತಲಿನ ಜನರ ನಿದ್ದೆಗೆಡಿಸಿದೆ. ರಾತ್ರಿ ಹೊತ್ತು ಮಾತ್ರ ಕಾಣಿಸಿಕೊಳ್ಳುತ್ತಿರುವ ಅದು ಹಗಲು ಹೊತ್ತಿನಲ್ಲಿ ಯಾವ ಗಿಡ-ಗಂಟೆ, ಪೊದೆಯಲ್ಲಿ ಅವಿತುಕೊಂಡಿರುತ್ತದೋ ಗೊತ್ತಾಗುತ್ತಿಲ್ಲ. ಇದರ ಪತ್ತೆಗೆ ಸಿಸಿ ಕ್ಯಾಮರಾ ಹಾಗೂ‌ ಡ್ರೋನ್‌ ಸಹ ಬಳಕೆ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.