ಧಾರವಾಡ ವಕೀಲರ ಸಂಘದ ಅಧ್ಯಕ್ಷರಾಗಿ ಬೆಳ್ಳಕ್ಕಿ ಆಯ್ಕೆ


Team Udayavani, Apr 8, 2017, 1:21 PM IST

hub1.jpg

ಧಾರವಾಡ: ಇಲ್ಲಿಯ ಧಾರವಾಡ ವಕೀಲರ ಸಂಘದ ಆಡಳಿತ ಮಂಡಳಿಗೆ ಶುಕ್ರವಾರ ಚುನಾವಣೆ ನಡೆಯಿತು. ಕಳೆದ ಮೂರು ಅವಧಿಗೆ ವಕೀಲರ ಸಂಘದ ಅಧ್ಯಕ್ಷರಾಗಿದ್ದ ವಿ.ಡಿ.ಕಾಮರೆಡ್ಡಿ ವಿರುದ್ಧ ಈ ಸಲ ಆರ್‌.ಯು.ಬೆಳ್ಳಕ್ಕಿ ಕಣಕ್ಕಿಳಿದು ಜಯಶಾಲಿಯಾದರು.

ಆರ್‌ .ಯು.ಬೆಳ್ಳಕ್ಕಿ 518 ಮತ ಪಡೆದು ಗೆಲುವು ಸಾಧಿಸಿದರೆ, ವಿ.ಡಿ.ಕಾಮರೆಡ್ಡಿ 457 ಮತ ಪಡೆದು ಪರಾಭವಗೊಂಡರು. ಉಪಾಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ್ದ ಪ್ರಕಾಶ ಉಡಿಕೇರಿ 427 ಮತ ಪಡೆದು ಗೆಲುವು ಸಾಧಿಸಿದರೆ ಅವರ ಪ್ರತಿಸ್ಪರ್ಧಿಗಳಾದ ಆರ್‌.ಜಿ.ನಾಯ್ಡು (189), ಆರ್‌.ಎಚ್‌.ಯಲಿಗಾರ (186), ವೈ.ಪಿ.ಮದೂರ (178) ಮತ ಪಡೆದರು. 

ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಿಂದಿನ ಬಾರಿ ಕಾರ್ಯದರ್ಶಿಯಾಗಿದ್ದ ಸಿ.ಎಸ್‌.ಪೊಲೀಸ್‌ ಪಾಟೀಲ ಈ ಸಲವೂ 505 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಸಚಿನ ಕುಲಕರ್ಣಿ (480) ಅವರನ್ನು ಸೋಲಿಸಿದರು. ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಸ್‌.ಬಿ.ಬನ್ನೂರ 487 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿ ಸ್ಪರ್ಧಿ ವಿ.ಎಂ.ಸಾಲಿ (422) ಅವರನ್ನು ಮಣಿಸಿದರು. 

ಖಜಾಂಚಿ ಹುದ್ದೆಗೆ ಸ್ಪರ್ಧಿಸಿದ್ದ ಎನ್‌.ಆರ್‌.ಮಟ್ಟಿ 450 ಮತಗಳನ್ನು ಪಡೆದು ಆಯ್ಕೆಯಾದರೆ, ಅವರ ಪ್ರತಿಸ್ಪರ್ಧಿಗಳಾದ ಪ್ರಕಾಶ ರಟಗೇರಿ (388) ಹಾಗೂ ವಿ.ಎಚ್‌.ಪಾಟೀಲ (169) ಮತಗಳನ್ನು ಪಡೆದರು. ಇನ್ನು ಕಾರ್ಯಕಾರಿ ಆಡಳಿತ ಮಂಡಳಿಗೆ ಕಣದಲ್ಲಿದ್ದ 11 ಜನರ ಪೈಕಿ ಹೇಮಂತ್‌ ಕನಕಿಕೊಪ್ಪ (721), ಶ್ರೀಧರ್‌ ಹಂಚಿನಾಳ (641), ಸಂತೋಷ ಗೋಡಿ (521), ಮಹೇಶ ಕೆಲಗೇರಿ (504), ವೀರಣ್ಣ ಕಾಜಗಾರ (477), ಕಲ್ಮೇಶ ನಿಂಗಣ್ಣವರ (473) ಮತ ಪಡೆದು ಆಯ್ಕೆಗೊಂಡಿದ್ದಾರೆ. 

ಉಳಿದಂತೆ ಮಹಿಳಾ ಪ್ರತಿನಿಧಿ ಹುದ್ದೆಗೆ ಸ್ಪರ್ಧಿಸಿದ್ದ ರೂಪಾ ಕೆಂಗಾನೂರ 510 ಮತ ಪಡೆದು ಗೆಲುವು ಸಾಧಿಸಿದರೆ, ಅವರ ಪ್ರತಿಸ್ಪರ್ಧಿ ಸಾವಿತ್ರಿ ಕುಲಕರ್ಣಿ 450 ಮತಗಳನ್ನು ಪಡೆದು ಪರಾಭವಗೊಂಡರು. ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್ ವ್ಯವಸ್ತೆ ಮಾಡಲಾಗಿತ್ತು. 

ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ನಡೆದ ಮತದಾನದಲ್ಲಿ ಒಟ್ಟು 1139 ಮತಗಳ ಪೈಕಿ 987 ಮತಗಳು ಚಲಾವಣೆಗೊಂಡಿವೆ. ಸಂಜೆ ಮತದಾನ ಮುಗಿದ ಬಳಿಕ ಮತ ಎಣಿಕೆ ತಡರಾತ್ರಿವರೆಗೂ ನಡೆಯಿತು. ಮತ ಎಣಿಕೆ ಆದಂತೆ ಫಲಿತಾಂಶ ಪ್ರಕಟಿಸಲಾಯಿತು. ವಿಜೇತರ ಬೆಂಬಲಿಗರು ಪಟಾಕಿ ಸಿಡಿಸಿ, ಗುಲಾಲು ಎರಚಿ ಸಂಭ್ರಮಿಸಿದರು. 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.