ಪಿಎಸ್ ಐ ಅಕ್ರಮ ನೇಮಕಾತಿ;ಸಿಐಡಿ ಎಂತೆಂಥಹವರನ್ನೊ ಬಂಧಿಸಿದೆ : ಪ್ರಹ್ಲಾದ ಜೋಶಿ
ಆತ ಸಿಗದಿದ್ದರೆ ಚುನಾವಣೆಗೆ ನಿಲ್ಲುತ್ತಿದ್ದ...!
Team Udayavani, May 8, 2022, 6:33 PM IST
ಹುಬ್ಬಳ್ಳಿ: ಪಿಎಸ್ ಐ ಅಕ್ರಮ ನೇಮಕಾತಿಯಲ್ಲಿ ಕಿಂಗ್ ಪಿನ್ ಹೆಸರು ಬಹಿರಂಗ ಪಡಿಸಿದರೆ ಸರಕಾರ ಉರುಳುತ್ತೆ ಎನ್ನುವ ಹೆಚ್.ಡಿ. ಕುಮಾರಸ್ವಾಮಿ ಅವರದು ಸರಕಾರ ಉರುಳಿಸುವುದು, ಬಿಡುವುದು ಅವರ ಜವಬ್ದಾರಿ ಅಲ್ಲ. ಯಾರೇ ಆಗಲಿ ಅವರ ಹತ್ತಿರ ಮಾಹಿತಿ ಇದ್ದರೆ ಅದನ್ನು ಕೊಡಲಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಹುಬ್ಬಳ್ಳಿ ತಾಲೂಕಿನ ಶೆರೇವಾಡ ಗ್ರಾಮದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿಯ ಅಕ್ರಮದಲ್ಲಿ ಸಿಐಡಿ ಎಂತೆಂಥಹವರನ್ನೊ ಬಂಧಿಸಿದೆ. ವಿಶೇಷವಾಗಿ ಕಾಂಗ್ರೆಸ್ ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ. ಅವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನೇ ಬಂಧನ ಆಗಿದ್ದಾನೆ. ಆತ ಶಾಸಕ ಪ್ರಿಯಾಂಕ ಖರ್ಗೆ ಮನೆಯಲ್ಲೆ ಇರುತ್ತಿದ್ದ. ಈ ಪ್ರಕರಣದಲ್ಲಿ ಆತ ಸಿಗದಿದ್ದರೆ ಚುನಾವಣೆಗೆ ನಿಲ್ಲುತ್ತಿದ್ದ ಎಂದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಹಿಂದೆ ಆರ್ ಎಸ್ ಎಸ್ ಕೈವಾಡವಿದೆ ಎಂದು ಹೇಳುತ್ತಿರುವುದರಲ್ಲಿ ಅರ್ಥವಿಲ್ಲ. ಪ್ರಸಿದ್ಧಿ ಪಡೆಯಲು ಕೆಲವರು ಏನೇಯಾದರೂ ಆರ್ ಎಸ್ ಎಸ್ ಎಂದು ಹೇಳುವುದು ಚಾಳಿ ಆಗಿದೆ ಎಂದರು.
ಅಜಾನ್ ವಿರುದ್ದ ಅಭಿಯಾನಕ್ಕೆ ಕರೆ ವಿಷಯವಾಗಿ ಕೆಲ ಹಿಂದೂ ಸಂಘಟನೆಗಳು ಸರಕಾರಕ್ಕೆ ಗುಡುವು ಕೊಟ್ಟಿದ್ದು ಗೊತ್ತಿಲ್ಲ. ಈ ಕುರಿತು ನಿಯಮ, ಕಾನೂನು ಪ್ರಕಾರ ರಾಜ್ಯ ಸರಕಾರ ಕ್ರಮ ಕೈಗೊಳ್ಳುತ್ತದೆ. ಆದರೆ ಯಾರು ಕಾನೂನು ಕೆಗೈತ್ತಿಕೊಳಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?