ಮಹಾನಗರ ಪಾಲಿಕೆ ಚುನಾವಣೆ : ಟಿಕೆಟ್‌ಗೆ ನಾಯಕರ ಮನೆ ಮುಂದೆ ಪರೇಡ್‌

ಟಿಕೆಟ್‌ ಆಕಾಂಕ್ಷಿತರಿಂದ ನಾನಾ ರೀತಿಯ ಸರ್ಕಸ್‌|­ಪ್ರಭಾವ-ಒತ್ತಡ ತಂತ್ರಕ್ಕೆ ಮೊರೆ| ­ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

Team Udayavani, Aug 17, 2021, 1:36 PM IST

hndfdr

ವರದಿ: ಅಮರೇಗೌಡ ಗೋನವಾರ

ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಸೋಮವಾರದಿಂದ ಅಧಿಕೃತ ಚಾಲನೆ ಪಡೆದುಕೊಂಡಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಟಿಕೆಟ್‌ ಆಕಾಂಕ್ಷಿಗಳಿಂದ ಪಕ್ಷದ ನಾಯಕರ ನಿವಾಸಗಳಿಗೆ ಪರೇಡ್‌, ದುಂಬಾಲು ಬೀಳುವುದು, ಶಿಫಾರಸು, ಪ್ರಭಾವ, ಒತ್ತಡದ ಯತ್ನಗಳು ಆರಂಭಗೊಂಡಿವೆ.

ಪಾಲಿಕೆ ಚುನಾವಣೆಗೆ ಮುನ್ನವೇ ಆಯಾ ವಾರ್ಡ್‌ಗಳಲ್ಲಿ ಚುನಾವಣೆಗೆ ಟಿಕೆಟ್‌ ಆಕಾಂಕ್ಷಿಗಳು ತಮ್ಮದೇ ಹಲವು ಕಾರ್ಯ, ಸಾಮಾಜಿಕ ಸೇವೆ ಇನ್ನಿತರ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಉತ್ಸವ, ವಾರ್ಡ್‌ ವ್ಯಾಪ್ತಿ ಜಾತ್ರೆ, ಆಚರಣೆ, ಉರುಸು, ಅನ್ನಸಂತರ್ಪಣೆ, ಗಣೇಶೋತ್ಸವ ಇನ್ನಿತರ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ, ನೆರವು ನೀಡುವ ಮೂಲಕ ತಮ್ಮದೇ ಉಸ್ತುವಾರಿ ಇಲ್ಲವೇ ನೇತೃತ್ವ ಎಂದು ಬಿಂಬಿಸಿ ಮುಂದಿನ ಚುನಾವಣೆಗೆ ಹಾದಿ ಸುಗಮಗೊಳಿಸುವ ಯತ್ನಗಳು ನಡೆಯುತ್ತವೆ.

ಕಳೆದ ವರ್ಷದಿಂದ ಕೋವಿಡ್‌ ಮಹಾಮಾರಿ ವಕ್ಕರಿಸಿದ್ದರಿಂದ ಪಾಲಿಕೆ ಟಿಕೆಟ್‌ ಆಕಾಂಕ್ಷಿಗಳು, ಪಾಲಿಕೆ ಮಾಜಿ ಸದಸ್ಯರು ವಾರ್ಡ್‌ ವ್ಯಾಪ್ತಿಯಲ್ಲಿ ಆಹಾರ ಧಾನ್ಯಗಳ ಕಿಟ್‌ ಹಂಚಿಕೆ, ಕೋವಿಡ್‌ ಲಸಿಕೆ ಆಯೋಜನೆ, ಲಸಿಕೆ ಕೇಂದ್ರಗಳಿಗೆ ಭೇಟಿ, ಪಡಿತರ ಅಂಗಡಿಗಳಿಗೆ ತೆರಳಿ ಪಡಿತರ ವಿತರಣೆ ಕಾಳಜಿ ಇನ್ನಿತರ ಕಾರ್ಯಗಳಲ್ಲಿ ತೊಡಗಿದ್ದು ಕಂಡು ಬಂದಿದೆ. ಚುನಾವಣೆ ಘೋಷಣೆ ಪೂರ್ವದಲ್ಲಿಯೇ ಎಷ್ಟು ಸಾಧ್ಯವೋ ಅಷ್ಟು ಆಕಾಂಕ್ಷಿಗಳು ತಮಗೆ ಟಿಕೆಟ್‌ ದೊರೆಯಲಿದೆ ಎಂಬ ವಿಶ್ವಾಸದಲ್ಲಿ ಹಾಗೂ ಪಕ್ಷದ ನಾಯಕರು ಅಂತಿಮ ಹಂತದಲ್ಲಿ ತಮಗೆ ಟಿಕೆಟ್‌ ನೀಡಿದರೆ ಹೇಗೆ ಎಂಬ ಚಿಂತನೆಯಲ್ಲಿ ಇವೆಲ್ಲವುಗಳನ್ನು ಕೈಗೊಂಡಿದ್ದಾಗಿದೆ. ಯಾವಾಗ ಚುನಾವಣೆ ಅಧಿಕೃತವಾಗಿ ಘೋಷಣೆ ಆಯಿತೋ ಅಲ್ಲಿಂದಲೇ ಟಿಕೆಟ್‌ ತನಗೆ ಸಿಗಬೇಕೆಂಬ ಸರ್ಕಸ್‌ ಶುರುವಾಗಿದೆ.

ಗಿಜಿಗುಡುತ್ತಿರುವ ನಾಯಕರ ನಿವಾಸ: ಪ್ರಮುಖವಾಗಿ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಪ್ರತಿ ವಾರ್ಡ್‌ಗೆ 4-8 ಟಿಕೆಟ್‌ ಆಕಾಂಕ್ಷಿಗಳು ಇದ್ದು, ಟಿಕೆಟ್‌ ಪಡೆಯುವ ನಿಟ್ಟಿನಲ್ಲಿ ತಮ್ಮ ಪಕ್ಷದ ನಾಯಕರ ನಿವಾಸಗಳಿಗೆ  ಬೆಂಬಲಿಗರೊಂದಿಗೆ ಪರೇಡ್‌ ನಡೆಸುವುದು, ಜಾತಿ-ಸಮಾಜ, ವಾರ್ಡ್‌ ಜನರೊಟ್ಟಿಗಿನ ಸಂಪರ್ಕ, ಪಕ್ಷ ಸೇವೆ ಇನ್ನಿತರ ವಿಚಾರಗಳೊಂದಿಗೆ ಟಿಕೆಟ್‌ ನೀಡುವಂತೆ ಮನವಿ ಮಾಡುವ, ಒತ್ತಡ ತರುವ ಕಾರ್ಯದಲ್ಲಿ ತೊಡಗಿದ್ದಾರೆ. ಅವಳಿನಗರದಲ್ಲಿನ ವಿವಿಧ ಪಕ್ಷಗಳ ಹಾಲಿ ಮತ್ತು ಮಾಜಿ ಶಾಸಕರು, ಸಚಿವರು, ಸಂಸದರು ಹಾಗೂ ಪಕ್ಷಗಳ ನಾಯಕರ ನಿವಾಸಗಳು ಇದೀಗ ಗಿಜಿಗುಡತೊಡಗಿವೆ.

ಟಿಕೆಟ್‌ ಆಕಾಂಕ್ಷಿಗಳು ತಂಡ ತಂಡವಾಗಿ ನಾಯಕರಿಗೆ ಮನವಿ ಸಲ್ಲಿಸುವುದು, ವಾರ್ಡ್‌ ನಲ್ಲಿ ತಾವು ಮಾಡಿದ ಕಾರ್ಯ, ಸೇವೆಗಳ ಚಿತ್ರಗಳ ಸಮೇತ ಬಯೋಡಾಟಾ ವರದಿ ನೀಡುವುದು, ಇಷ್ಟೊಂದು ಬೆಂಬಲಿಗರು ತಮ್ಮ ಪರವಾಗಿದ್ದಾರೆಂದು ಪರೇಡ್‌ ಮಾಡಿಸುವ ಎಲ್ಲ ಯತ್ನಗಳಿಗೆ ಮುಂದಾಗಿದ್ದಾರೆ. ಇದರಿಂದಾಗಿ ಅವಳಿನಗರದಲ್ಲಿನ ಪಕ್ಷಗಳ ನಾಯಕರಷ್ಟೇ ಅಲ್ಲದೆ, ಪಕ್ಷಗಳ ಮುಖಂಡರು ಹಾಗೂ ಪ್ರಮುಖ ಪದಾಧಿಕಾರಿಗಳ ಮನೆಗಳ ಮುಂದೆ ಟಿಕೆಟ್‌ ಆಕಾಂಕ್ಷಿಗಳ ಸರ್ಕಸ್‌ ನೋಡಬಹುದಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.