ಮಳೆ ವಿಕೋಪ ನಿರ್ವಹಣೆಗೆ ಮಹಾನಗರ ಪಾಲಿಕೆ ಸನ್ನದ್ಧ
• ಮಳೆಯಿಂದಾಗುವ ಅನಾಹುತಗಳ ದೂರುಗಳಿಗೆ ಆದ್ಯತೆ ನೀಡಲು ಸೂಚನೆ
Team Udayavani, Aug 7, 2019, 9:52 AM IST
ಹುಬ್ಬಳ್ಳಿ: ನಗರದ ದಾಜಿಬಾನ ಪೇಟೆಯಲ್ಲಿ ಮಳೆಯಿಂದ ರಸ್ತೆ ಜಲಾವೃತವಾಗಿದೆ.
ಹುಬ್ಬಳ್ಳಿ: ಹಲವು ದಿನಗಳಿಂದ ಅವಳಿ ನಗರದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಮಳೆಯಿಂದಾಗುವ ವಿಕೋಪಗಳನ್ನು ತಡೆಯುವ ದಿಸೆಯಲ್ಲಿ ಮಹಾನಗರ ಪಾಲಿಕೆ ಸರ್ವಸನ್ನದ್ಧವಾಗಿದ್ದು, ವಿವಿಧ ವಿಭಾಗಗಳ ಸಿಬ್ಬಂದಿಯನ್ನೊಳಗೊಂಡ ವಿಶೇಷ ತಂಡಗಳನ್ನು ರಚಿಸಿದೆ.
ಮಳೆ ವಿಕೋಪ ನಿರ್ವಹಣಾ ವಿಶೇಷ ತಂಡ ಮಳೆಯಿಂದಾಗುವ ಅನಾಹುತಗಳ ದೂರುಗಳಿಗೆ ಆದ್ಯತೆ ನೀಡುವಂತೆ ಮಹಾನಗರ ಪಾಲಿಕೆ ಸಹಾಯವಾಣಿಗೆ ಸೂಚಿಸಿದೆ. ದಿನದ 24 ಗಂಟೆಯೂ ಸ್ವೀಕರಿಸಿದ ದೂರುಗಳನ್ನು ಸಂಬಂಧಿತ ವಿಭಾಗಗಳ ಸಿಬ್ಬಂದಿ ಗಮನಕ್ಕೆ ತರುವಂತೆ ತಿಳಿಸಲಾಗಿದೆ.
ತಗ್ಗು ಪ್ರದೇಶಗಳ ಜನವಸತಿಗೆ ಅನುಗುಣವಾಗಿ ಪೌರ ಕಾರ್ಮಿಕರನ್ನು ಕೂಡ ನಿಯೋಜಿಸಲಾಗಿದ್ದು, ಸಂದರ್ಭ ಒದಗಿ ಬಂದರೆ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸಮುದಾಯ ಭವನಗಳು, ಶಾಲೆಗಳು, ಸರಕಾರಿ ಭವನಗಳಲ್ಲದೇ ಖಾಸಗಿ ಭವನಗಳಲ್ಲಿ ಕೂಡ ವಸತಿ ಕಲ್ಪಿಸುವ ದಿಸೆಯಲ್ಲಿ ಪಾಲಿಕೆ ಕಾರ್ಯೋನ್ಮುಖವಾಗಿದೆ.
ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ (ಎಇಇ) ದರ್ಜೆಯ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ ಫೋರ್ಸ್ ತಂಡಗಳನ್ನು ರಚನೆ ಮಾಡಲಾಗಿದ್ದು, ಪ್ರತಿ ವಲಯದಲ್ಲಿ ಎರಡು ತಂಡಗಳು ಕಾರ್ಯ ನಿರ್ವಹಿಸುತ್ತವೆ. ಪ್ರತಿ ತಂಡದಲ್ಲಿ 10 ಸದಸ್ಯರಿದ್ದು, ಎರಡು ತಂಡಗಳು ಶಿಫ್ಟ್ ಆಧಾರದ ಮೇಲೆ ಕಾರ್ಯ ನಿರ್ವಹಿಸಲಿವೆ.
ಒಂದು ತಂಡ ಮಧ್ಯಾಹ್ನ 2:00 ಗಂಟೆಯಿಂದ ರಾತ್ರಿ 10:00 ಗಂಟೆವರೆಗೆ ಕಾರ್ಯ ನಿರ್ವಹಿಸಿದರೆ, ಇನ್ನೊಂದು ತಂಡ ರಾತ್ರಿ 10:00 ಗಂಟೆಯಿಂದ ಬೆಳಗ್ಗೆ 6:00 ಗಂಟೆವರೆಗೆ ಕಾರ್ಯ ನಿರ್ವಹಿಸಲಿದ್ದಾರೆ. ತಂಡದಲ್ಲಿ ಪೌರ ಕಾರ್ಮಿಕರು, ಹೆಲ್ತ್ ಇನ್ಸ್ಪೆಕ್ಟರ್ಗಳು, ಜಮಾದಾರ್ಗಳನ್ನು ಸೇರಿಸಿಕೊಳ್ಳಲಾಗಿದೆ. ಸಂಬಂಧಿತ ಸಿಬ್ಬಂದಿ ತ್ವರಿತಗತಿಯಲ್ಲಿ ಕಾರ್ಯೋನ್ಮುಖರಾಗುವಂತೆ ಪಾಲಿಕೆ ಆಯಕ್ತರು ತಿಳಿಸಿದ್ದಾರೆ.
•ವಲಯಕ್ಕೆರಡು ವಿಶೇಷ ತಂಡ ರಚನೆ
•ಶಿಫ್ಟ್ ಆಧಾರದಲ್ಲಿ ಕಾರ್ಯ ನಿರ್ವಹಣೆ
•ತಂಡದಲ್ಲಿದ್ದಾರೆ ಪೌರ ಕಾರ್ಮಿಕರು, ಹೆಲ್ತ್ ಇನ್ಸ್ ಪೆಕ್ಟರ್ಗಳು, ಜಮಾದಾರ್
•ಸಂದರ್ಭ ಒದಗಿ ಬಂದರೆ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ವ್ಯವಸ್ಥೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ