ಕಿಮ್ಸ್‌ನಲ್ಲಿನ್ನು  ಸಿಟಿ ಸ್ಕ್ಯಾನಿಂಗ್‌ ಸೌಲಭ್ಯ


Team Udayavani, Sep 3, 2018, 3:04 PM IST

3-september-18.jpg

ಹುಬ್ಬಳ್ಳಿ: ಕಿಮ್ಸ್‌ನಲ್ಲಿ 128 ಸ್ಲೈಸ್‌ ಸ್ಕ್ಯಾನಿಂಗ್‌ ಯಂತ್ರವನ್ನು ಜುಲೈನಲ್ಲಿ ಅಳವಡಿಸಲಾಗಿದ್ದು, ಕಂಪನಿಯವರು ಸೋಮವಾರ ಕಿಮ್ಸ್‌ಗೆ ಬಂದು ವೈದ್ಯರಿಗೆ ಇದರ ಬಳಕೆ, ನಿರ್ವಹಣೆ ಬಗ್ಗೆ ತರಬೇತಿ ನೀಡಿ, ಪ್ರಮಾಣ ಪತ್ರ ನೀಡಿದ ನಂತರ ಸೇವೆಗೆ ಮುಕ್ತವಾಗಲಿದೆ.

ಅಂದಾಜು 5.32 ಕೋಟಿ ರೂ. ವೆಚ್ಚದ 128 ಸ್ಲೈಸ್‌ ಸಿಟಿ ಸ್ಕ್ಯಾನ್‌ ಯಂತ್ರ ರೋಗಿಯ ದೇಹದ ಯಾವುದೇ ಭಾಗವನ್ನು ಸಿಟಿ ಸ್ಕ್ಯಾನ್‌ ಮಾಡಿ ಅದರ ಮಾಹಿತಿಯನ್ನು ಕ್ಷಣಾರ್ಧದಲ್ಲಿ ಪಡೆಯಬಹುದು. ರೋಗಿಯ ದೇಹವು ಯಂತ್ರದೊಳಗೆ ಸೇರುತ್ತಿದ್ದಂತೆ ರಕ್ತನಾಳ, ಎಲುಬು, ಸ್ನಾಯು, ಹೃದಯಕ್ಕೆ ರಕ್ತ ಸರಬರಾಜು ಮಾಡುವ ಕರನೊರಿ ಆರ್ಟಿಸ್‌, ಪುಪ್ಪಸದ ಸ್ಕ್ಯಾನ್‌ ಸೇರಿದಂತೆ ದೇಹದ ಎಲ್ಲ ಭಾಗದ ಚಿತ್ರವು ಉತ್ಕೃಷ್ಟ ಗುಣಮಟ್ಟ,3 ಡಿ ಪರಿಣಾಮವಾಗಿ ಸಿಗುವುದರಿಂದ ರೋಗಿಗೆ ಇಂತಹುದೆ ರೋಗವಿದೆ ಎಂದು ತಜ್ಞ ವೈದ್ಯರಿಗೆ ಪತ್ತೆ ಮಾಡಲು ಸಹಕಾರಿಯಾಗಲಿದೆ. ಅತಿ ಕಡಿಮೆ ಅವಧಿಯಲ್ಲಿ ಸ್ಕ್ಯಾನ್‌ ಆಗುವುದರಿಂದ ರೋಗಿಗಳ ಮೇಲೆ ಕ್ಷ-ಕಿರಣದಿಂದ ಉಂಟಾಗಬಹುದಾದ ದುಷ್ಪರಿಣಾಮ ಕಡಿಮೆಯಾಗಲಿದೆ. ಅಲ್ಲದೇ ಸ್ಕ್ಯಾನ್‌ಗಾಗಿ ರೋಗಿಗಳು ತಾಸುಗಟ್ಟಲೇ ಕಾಯುವುದು, ಅಲೆಯುವುದು ತಪ್ಪಲಿದೆ.

ದಿನಕ್ಕೆ 100 ಸ್ಕ್ಯಾನಿಂಗ್‌ ಸಾಧ್ಯ: ಕಿಮ್ಸ್‌ ಆಸ್ಪತ್ರೆಗೆ ಪ್ರತಿದಿನ ಉತ್ತರ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಿಂದ ಸಾವಿರಾರು ರೋಗಿಗಳು ಬರುತ್ತಾರೆ. ಆದರೆ ರೋಗಿಗಳ ಶೀಘ್ರ ಶುಶ್ರೂಷೆ ಮಾಡಲು ಅವಶ್ಯವಿರುವ ಸ್ಕ್ಯಾನಿಂಗ್‌ ಯಂತ್ರವಿರಲಿಲ್ಲ. ಇದರಿಂದ ರೋಗಿಗಳಿಗೆ ಚಿಕಿತ್ಸೆ ನೀಡಲು ಸಮಸ್ಯೆ ಆಗುತ್ತಿತ್ತು. ಇದನ್ನೆಲ್ಲ ನಿವಾರಿಸಲು ಈ ಆಧುನಿಕ ಯಂತ್ರ ಅಳವಡಿಸಲಾಗಿದೆ. ಪ್ರತಿದಿನ 80-100 ರೋಗಿಗಳ ಸ್ಕ್ಯಾನಿಂಗ್‌ ಮಾಡಬಹುದಾಗಿದೆ. ಈ ಮೊದಲು ಕಿಮ್ಸ್‌ ನಲ್ಲಿದ್ದ ಹಳೆಯ ಸ್ಕ್ಯಾನಿಂಗ್‌ ಯಂತ್ರದಿಂದ ದಿನಕ್ಕೆ 15-20 ರೋಗಿಗಳಿಗೆ ಮಾತ್ರ ಸ್ಕ್ಯಾನಿಂಗ್‌ ಮಾಡಬಹುದಿತ್ತು. ಈ ಹೊಸ ಯಂತ್ರವು ಖಾಸಗಿ ಆಸ್ಪತ್ರೆಗಳನ್ನು ಹೊರತುಪಡಿಸಿದರೆ ಬೆಂಗಳೂರಿನ ವೈದ್ಯಕೀಯ ಕಾಲೇಜ್‌ನಲ್ಲಿದೆ. ಅದನ್ನು ಬಿಟ್ಟರೆ ರಾಜ್ಯದ ಸರಕಾರಿ ಆಸ್ಪತ್ರೆಯಲ್ಲಿ ಅಳವಡಿಸಲಾದ ಎರಡನೆಯ ಯಂತ್ರ ಇದಾಗಿದೆ.

ಕಿಮ್ಸ್‌ ಆಸ್ಪತ್ರೆಯಲ್ಲಿ ಹೊಸದಾಗಿ ಅಳವಡಿಸಲಾದ ಆಧುನಿಕ 128 ಸ್ಲೈಸ್‌ ಸಿಟಿ ಸ್ಕ್ಯಾನ್‌ ಯಂತ್ರ ಬಳಕೆ ಕುರಿತು ಕಂಪನಿಯವರು ವೈದ್ಯರಿಗೆ ಸೋಮವಾರ ತರಬೇತಿ ನೀಡಲಿದ್ದಾರೆ. ಆನಂತರ ಕಿಮ್ಸ್‌ನ ವೈದ್ಯರು ಈ ಯಂತ್ರವನ್ನು ರೋಗಿಗಳ ಮೇಲೆ ಬಳಕೆ ಮಾಡಬಹುದು ಎಂಬುದರ ಬಗ್ಗೆ ತಪಾಸಣೆ ನಡೆಸಿ ಪ್ರಮಾಣಪತ್ರ ನೀಡಲಿದ್ದಾರೆ. ನೂತನ ಯಂತ್ರದಿಂದಾಗಿ ರೋಗಿಗಳಿಗೆ ಅನುಕೂಲವಾಗಲಿದೆ.
 ಡಾ| ದತ್ತಾತ್ರೇಯ ಡಿ. ಬಂಟ್‌,
ನಿರ್ದೇಶಕ, ಕಿಮ್ಸ್‌

ಶಿವಶಂಕರ ಕಂಠಿ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.