ಇನ್ನೆರಡೇ ವರ್ಷದಲ್ಲಿ ಸ್ಮಾರ್ಟ್ ಆಗುತ್ತಂತೆ ಸಿಟಿ!
|ಯೋಜನೆಯ ಪ್ರಗತಿ ವರದಿ ಕೊಟ್ಟ ಎಂಡಿ |ಇನ್ನಾರು ತಿಂಗಳಲ್ಲಿ ಒಟ್ಟಾರೆ 12 ಕಾಮಗಾರಿ ಪೂರ್ಣ
Team Udayavani, Jun 26, 2019, 9:28 AM IST
ಹುಬ್ಬಳ್ಳಿ: ಸ್ಮಾರ್ಟ್ಸಿಟಿ ಯೋಜನೆ ಕಾಮಗಾರಿಗಳ ಪ್ರಗತಿ ಕುರಿತು ಶಕೀಲ್ ಅಹ್ಮದ್ ಮಾಹಿತಿ ನೀಡಿದರು.
ಹುಬ್ಬಳ್ಳಿ: ಸ್ಮಾರ್ಟ್ಸಿಟಿ ಯೋಜನೆಯಡಿ ಇದುವರೆಗೆ ಅಂದಾಜು 3.16 ಕೋಟಿ ರೂ. ವೆಚ್ಚದ ಆರು ಯೋಜನೆಗಳು ಪೂರ್ಣಗೊಂಡಿದ್ದು, ಇನ್ನಾರು ತಿಂಗಳಲ್ಲಿ ಅಂದಾಜು 94.3 ಕೋಟಿ ರೂ. ವೆಚ್ಚದ ಆರು ಯೋಜನೆಗಳು ಪೂರ್ಣಗೊಳ್ಳಲಿವೆ. ಒಟ್ಟಾರೆ 54 ಯೋಜನೆಗಳು ಇನ್ನೆರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ ಎಂದು ಸ್ಮಾರ್ಟ್ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಘೋಷಣೆಯಾಗಿ ನಾಲ್ಕು ವರ್ಷ ಮುಗಿದಿದೆ. ಹುಬ್ಬಳ್ಳಿ-ಧಾರವಾಡ ಎರಡನೇ ಹಂತದಲ್ಲಿ ಸ್ಮಾರ್ಟ್ಸಿಟಿ ಯೋಜನೆಗೆ ಸೇರ್ಪಡೆಗೊಂಡಿತ್ತು. 2017ರಲ್ಲಿ ಎಸ್ಪಿವಿ ಅಸ್ತಿತ್ವಕ್ಕೆ ಬಂದಿತ್ತು. ಕೇಂದ್ರ ಹಾಗೂ ರಾಜ್ಯ ಸರಕಾರಗಳ 1000 ಕೋಟಿ ರೂ. ಅನುದಾನದಲ್ಲಿ ಒಟ್ಟು 54 ಯೋಜನೆಗಳನ್ನು ಮೊದಲ ಹಂತದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.
ಈಗ ಪೂರ್ಣಗೊಂಡಿದ್ದಿಷ್ಟು: ವಿವಿಧ ಕಾರಣಗಳಿಗಾಗಿ ಸ್ಮಾರ್ಟ್ಸಿಟಿ ಯೋಜನೆಗಳ ಅನುಷ್ಠಾನ ವಿಳಂಬವಾಗಿದ್ದು ನಿಜ. ಇದೀಗ ಬಹುತೇಕ ಯೋಜನೆಗಳು ತೀವ್ರತೆ ಪಡೆದುಕೊಂಡಿವೆ. ಈಗಾಗಲೇ 3.16 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಎಸ್ಪಿವಿ ವೆಬ್ಸೈಟ್, ಇ-ಶೌಚಾಲಯ, ರಾಜನಾಲಾ ಸ್ವಚ್ಛತೆ, ನ್ಯಾಪ್ಕಿನ್ ವೆಂಡಿಂಗ್ ಯಂತ್ರ ಅಳವಡಿಕೆ, ಪಾಲಿಕೆ ಕಟ್ಟಡಕ್ಕೆ ಮಳೆ ನೀರು ಕೊಯ್ಲು ಅಳವಡಿಕೆ ಯೋಜನೆಗಳು ಪೂರ್ಣಗೊಂಡಿವೆ ಎಂದು ವಿವರಿಸಿದರು.
ಅವಳಿ ನಗರದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಬಹುತೇಕ ಪೂರ್ಣ ಹಂತಕ್ಕೆ ಬಂದಿದ್ದು, ಕೆಲವೊಂದು ಯಂತ್ರೋಪಕರಣಗಳು ಬಂದಿವೆ. ಇನ್ನಷ್ಟು ಯಂತ್ರಗಳು ಬರಬೇಕಾಗಿದೆ. ಕೆಲವೇ ತಿಂಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾನುಷ್ಠಾನಗೊಳ್ಳಲಿವೆ ಎಂದು ಹೇಳಿದರು.
1ರಂದು ಮಂಡಳಿ ಸಭೆ: ಜು. 1ರಂದು ಬೆಂಗಳೂರಿನಲ್ಲಿ ಸ್ಮಾರ್ಟ್ಸಿಟಿ ಯೋಜನೆ ಆಡಳಿತ ಮಂಡಳಿ ಸಭೆ ನಡೆಯಲಿದ್ದು, ಯೋಜನೆಗಳ ಕಾಮಗಾರಿ ತ್ವರಿತಕ್ಕೆ ಇನ್ನಷ್ಟು ಕ್ರಮಗಳ ಕುರಿತಾಗಿ ಚರ್ಚಿಸಲಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಹು-ಧಾ ಸ್ಮಾರ್ಟ್ ಸಿಟಿ ಯೋಜನೆ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಕೌಲಗಿ, ಮುಖ್ಯ ಎಂಜಿನಿಯರ್ ಎಂ.ಎನ್. ನಾರಾಯಣ, ವಿಶೇಷಾಧಿಕಾರಿ ಎಸ್.ಎಚ್. ನರೇಗಲ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ