ಒಂದಾಗಿ ಶಾಲೆಗೆ ಹೋದವರು ಒಟ್ಟಿಗೆ ಮಸಣ ಸೇರಿದರು: ಗುರುತಿಸಲಾಗದಷ್ಟು ಜರ್ಜರಿತವಾದ ಮೃತದೇಹಗಳು


Team Udayavani, Jan 15, 2021, 2:30 PM IST

ಒಂದಾಗಿ ಶಾಲೆಗೆ ಹೋದವರು ಒಟ್ಟಿಗೆ ಮಸಣ ಸೇರಿದರು: ಗುರುತಿಸಲಾಗದಷ್ಟು ಜರ್ಜರಿತವಾದ ಮೃತದೇಹಗಳು

ಧಾರವಾಡ: ಇಲ್ಲಿನ ಹೊರವಲಯದ ಇಟ್ಟಿಗಟ್ಟಿ ಬಳಿ ಶುಕ್ರವಾರ ಬೆಳ್ಳಂಬೆಳಗ್ಗೆ ಟೆಂಪೋ ಟ್ರಾವೆಲರ್​ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೇರಿದೆ.

ಆದರೆ ಅಪಘಾತದ ತೀವ್ರತೆಗೆ ಮೃತದೇಹಗಳು ಗುರುತಿಸಲಾಗದಷ್ಟು ಜರ್ಜರಿತವಾಗಿದೆ. ಮೃತರ ಸಂಬಂಧಿಕರು ಬಟ್ಟೆಯ ಸಹಾಯದಿಂದ ಗುರುತಿಸುವ ಪ್ರಯತ್ನ ನಡೆಸುತ್ತಿದ್ದು, ಇದುವರೆಗೆ ಐವರ ಗುರುತು ಪತ್ತೆ ಹಚ್ಚಲಾಗಿದೆ.

ರಜನಿ ಶ್ರೀನಿವಾಸ (47ವ), ವೈದ್ಯೆ ಪ್ರೀತಿ ರವಿಕುಮಾರ (46 ವ), ಪರಂಜ್ಯೋತಿ ಶಶಿಧರ (47 ವ), ವೀಣಾ ಮತ್ತಿಗಳ್ಳಿ (46 ವ), ಮಂಜುಳಾ ನಟೇಶ (46 ವ) ಅವರ ಮೃತದೇಹಗಳನ್ನು ಗುರುತಿಸಲಾಗಿದೆ.

ಇನ್ನುಳಿದ ಮೃತ ದೇಹಗಳ ಪತ್ತೆ ಮಾಡಲು ಪೋಲಿಸರಿಗೆ ಕಷ್ಟವಾಗುತ್ತಿದೆ. ಕೆಲವು ದೇಹಗಳ ಗುರುತಿಸುವುದು ಕಷ್ಟವಾಗುತ್ತಿದೆ ಎಂದು ಕಿಮ್ಸ್ ವೈದ್ಯರೂ ಹೇಳಿದ್ದಾರೆ.

ಇದನ್ನೂ ಓದಿ:ಹಾಡಹಗಲೇ ಅಟ್ಟಿಸಿಕೊಂಡು ಹೋಗಿ ಸಹೋದರರಿಬ್ಬರ ಕೊಚ್ಚಿ ಕೊಲೆ!

ಬಾಲ್ಯ ಸ್ನೇಹಿತೆಯರು

ಮೃತರೆಲ್ಲರೂ ದಾವಣಗೆರೆ ಮೂಲದವರು. ದಾವಣಗೆರೆಯ ಸೇಂಟ್‌ ಪಾಲ್ಸ್‌ ಕಾನ್ವಂಟ್‌ ಶಾಲೆಯ ಹಳೇ ವಿದ್ಯಾರ್ಥಿಗಳಾದ ಇವರು ಇತ್ತೀಚಿಗೆ ನಡೆದ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದರು. ಹಲವು ವರ್ಷಗಳ ನಂತರ ಭೇಟಿಯಾಗಿದ್ದ ಬಾಲ್ಯ ಸ್ನೇಹಿತೆಯರು ಗೋವಾಕ್ಕೆ ಪ್ರವಾಸ ಹೊರಟಿದ್ದರು. ಟೆಂಪೋ ಟ್ರಾವೆಲರ್‌ನಲ್ಲಿ ಮುಂಜಾನೆ ಮೂರು ಗಂಟೆಗೆ ದಾವಣಗೆರೆಯಿಂದ ಹೊರಟಿದ್ದರು.

ಧಾರವಾಡದ ಇಟ್ಟಿಗಟ್ಟಿ ಬೈಪಾಸ್‌ ಸಮೀಪ ಬೆಳಗ್ಗೆ 7.30ರ ವೇಳೆಗೆ ಯಮರೂಪಿಯಾಗಿ ಬಂದ ಮರಳು ಸಾಗಣೆ ಟಿಪ್ಪರ್‌ ಲಾರಿಯು ಟೆಂಪೋ ಟ್ರಾವೆಲರ್​ಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ನಜ್ಜುಗುಜ್ಜಾಗಿದೆ. ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿಡಿಯೋ: ಧಾರವಾಡ ಬೈಪಾಸ್ ನಲ್ಲಿ ಟೆಂಪೋ-ಲಾರಿ ನಡುವೆ ಭೀಕರ ಅಪಘಾತ | Udayavani

ಶವಾಗಾರದ ಬಳಿ ಮೃತರ ಸಂಬಂಧಿಕರು, ಸ್ನೇಹಿತರು ಹಾಗೂ ಪೊಲೀಸ್ ಆಯುಕ್ತ ಲಾಬುರಾಮ ಮೊಕ್ಕಾಂ ಹೂಡಿದ್ದಾರೆ. ಇನ್ನೂ ಕೆಲ ಸಂಬಂಧಿಕರು ದಾವಣಗೆರೆಯಿಂದ ಕಿಮ್ಸ್ ಹಾಗೂ ಧಾರವಾಡಕ್ಕೆ ಆಗಮಿಸುತ್ತಿದ್ದಾರೆ.

ಅಂತಿಮ ಸೆಲ್ಫಿ

ಗೋವಾ ಪ್ರವಾಸಕ್ಕೆಂದು ವಾಹನ ಹತ್ತುತ್ತಿದ್ದಂತೆ ಬಾಲ್ಯ ಸ್ನೇಹಿತೆಯರೆಲ್ಲರೂ ಮೊಬೈಲ್​ನಲ್ಲಿ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಂಡು ವಾಟ್ಸಾ​ಪ್​ ಸ್ಟೇಟಸ್​ನಲ್ಲಿ ಹಾಕಿಕೊಂಡಿದ್ದರು. ಅವರು ಬದುಕಿದ್ದಾಗ ತೆಗೆದ ಕೊನೆಯ ಫೋಟೋ ಇದೇ ಎನ್ನುತ್ತ ಕುಟುಂಬಸ್ಥರು ಗೋಳಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.

“ಎಲ್ಲರೂ ಶಾಲೆಯ ಬಾಲ್ಯ ಸ್ನೇಹಿತರು. ಗುಂಪು ಮಾಡಿ ಪ್ರವಾಸ ಮಾಡುತ್ತಿದ್ದರು. ತಡರಾತ್ರಿ ದಾವಣಗೆರೆ ಬಿಟ್ಟಿದ್ದರು. ಬೆಳಗಾಗುವಷ್ಟರಲ್ಲಿ ದುರಂತ ಸಂಭವಿಸಿದೆ. ಅಯ್ಯೋ ದೇವರೆ ನಾವೆನನ್ನು ನೋಡುತ್ತಿದ್ದೇವೆ” ಎಂದು ಅಪಘಾತದಲ್ಲಿ ಮೃತಪಟ್ಟವರ ಸಂಬಂಧಿಗಳಾದ ಅರವಿಂದ ಮತ್ತು ಸಿದ್ದು ದುಃಖ ವ್ಯಕ್ತಪಡಿಸಿದರು.

ಜಿಲ್ಲಾಸ್ಪತ್ರೆಯ ಆವರಣದಲ್ಲಿನ ಶವಾಗಾರದ ಬಳಿ ಮೃತರ ಸಂಬಂಧಿಗಳು ಬಂಧುಗಳೆಲ್ಲರೂ ರೊಧಿಸುತ್ತಿದ್ದು, ಅಪಘಾತದ ಸ್ಥಳಕ್ಕೂ ಕೆಲವರು ಭೇಟಿಕೊಟ್ಟಿದ್ದಾರೆ.

ಪ್ರಧಾನಿ ಸಂತಾಪ: ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರ ಬಗ್ಗೆ  ಸಂತಾಪ ಸೂಚಿಸುವೆ. ಈ ಸಂದರ್ಭದಲ್ಲಿ ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.