ನೀರಸಾಗರ ಜಲಾಶಯ ಒತ್ತುವರಿ ತೆರವು
Team Udayavani, Jul 5, 2019, 12:49 PM IST
ಹುಬ್ಬಳ್ಳಿ: ಒತ್ತುವರಿ ಮಾಡಿದ ಭೂಮಿ ತೆರವುಗೊಳಿಸಿ ಟ್ರಂಚ್ ಹಾಕಿಸಲಾಯಿತು.
ಹುಬ್ಬಳ್ಳಿ: ಮಹಾನಗರಕ್ಕೆ ನೀರು ಪೂರೈಸುವ ನೀರಸಾಗರ ಜಲಾಶಯದ ಜಲಾನಯನ ಪ್ರದೇಶದ ಒತ್ತುವರಿ ತೆರವು ಕಾರ್ಯ ಜಿಲ್ಲಾಡಳಿತದಿಂದ ಗುರುವಾರ ನಡೆಯಿತು.
ಕೆರೆ ಭಾಗದ ಭೂಮಿ ಒತ್ತುವರಿಯಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ತೆರವುಗೊಳಿಸುವಂತೆ ಸೂಚನೆ ನೀಡಿದ್ದರು. ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಮಾರು 23.5 ಎಕರೆ ಭೂಮಿಯನ್ನು ತಮ್ಮ ಸುಪರ್ದಿಗೆ ಪಡೆದಿದ್ದಾರೆ. ವಶಪಡಿಸಿಕೊಂಡಿರುವ ಭೂಮಿಯ ಸುತ್ತಲೂ ಟ್ರಂಚ್ ಕೊರೆಸಲಾಗಿದೆ.
ತೆರವುಗೊಳಿಸಿದ ಭೂಮಿಯಲ್ಲಿ ತಂತಿ ಬೇಲಿ ಹಾಕಿ ಒತ್ತುವರಿಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜಲಾಶಯದ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಬಾರದು ಎಂದು ಜನರಿಗೆ ಸೂಚನೆ ನೀಡಲಾಗಿದೆ. ಇದೀಗ ತೆರವುಗೊಳಿಸಿದ ಭೂಮಿ ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಸಸಿಗಳನ್ನು ನೆಡುವುದಾಗಿ ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ ತಿಳಿಸಿದ್ದಾರೆ. ಧಾರವಾಡ ತಹಶೀಲ್ದಾರ್ ಪ್ರಕಾಶ ಕುದರಿ, ಕಲಘಟಗಿ ತಹಶೀಲ್ದಾರ ಅಶೋಕ ಶಿಗ್ಗಾವಿ, ನಗರ ನೀರು ಸರಬರಾಜು ಮಂಡಳಿ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
MUST WATCH
ಹೊಸ ಸೇರ್ಪಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!