ಪುಂಡರನ್ನು ಮಟ್ಟಹಾಕಲು ಕಠಿಣ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ
Team Udayavani, Dec 18, 2021, 10:42 AM IST
ಹುಬ್ಬಳ್ಳಿ: ಬೆಳಗಾವಿಯಲ್ಲಿ ಶುಕ್ರವಾರ ತಡರಾತ್ರಿ ನಡೆದ ಪುಂಡಾಟಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಂಡರನ್ನು ಮಟ್ಟಹಾಕಲು ಕಠಿಣ ಕ್ರಮಕ್ಜೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ನಾಯಕರ ಪ್ರತಿಮೆಗಳನ್ನು ಅವಮಾನ ಮಾಡುವುದನ್ನು ಸಹಿಸಿಕೊಳ್ಳಲಾಗದು. ರಾಷ್ಟ್ರ ನಾಯಕರ ಪ್ರತಿಮೆಗಳಿಗೆ ಗೌರವ ನೀಡಬೇಕು. ಅದರ ಬದಲು ಪ್ರತಿಮೆಗಳನ್ನು ಅವಮಾನಿಸುವ ಮೂಲಕ ಸಮಾಜದಲ್ಲಿ ಕ್ಷೋಭೆ ಸೃಷ್ಟಿಸಲು ಮುಂದಾದರೆ ಅಂತಹ ಯತ್ನಗಳಿಗೆ ಅವಕಾಶ ನೀಡುವುದಿಲ್ಲ ಎಂದರು.
ಘಟನೆಗೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಹಾಗೂ ಇಂತಹ ಘಟನೆಗಳು,ಪುನಃ ನಡೆಯದಂತೆ ಪೊಲೀಸರು ದೀರ್ಘಾವಧಿ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ ಎಂದರು.
ಇದನ್ನೂ ಓದಿ:ಬೆಳಗಾವಿ ಅಧಿವೇಶನಕ್ಕೆ ಬಂದ ವಾಹನಗಳ ಮೇಲೆ ಕಲ್ಲು ತೂರಾಟ: 27 ಮಂದಿ ಬಂಧನ
ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಲಾಗಿದೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುವ ವೇಳೆ ಇಂತಹ ಘಟನೆ ನಡೆಯುವುದರ ಹಿಂದೆ ಹಲವಾರು ಕಾರಣಗಳು ಇರಬಹುದು ಇದೆಲ್ಲದರ ಬಗ್ಗೆಯೂ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ