ಕಚ್ಚಾ ತೈಲದ ಬೆಲೆಯ ಮೇಲೆ ಮಾತ್ರ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ನಿರ್ಧಾರವಾಗದು: ಸಿಎಂ
Team Udayavani, Sep 2, 2021, 1:08 PM IST
ಹುಬ್ಬಳ್ಳಿ: ಕಚ್ಚಾ ತೈಲದ ಬೆಲೆಯೊಂದರ ಮೇಲೆ ಮಾತ್ರ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ನಿರ್ಧಾರವಾಗುವುದಿಲ್ಲ. ಇತರೆ ಖರ್ಚುಗಳು ಹೆಚ್ಚಾದ ಹಿನ್ನೆಲೆಯಲ್ಲಿ ದರ ಹೆಚ್ಚಳವಾಗಿರಬೇಕು. ಬೆಲೆ ಹೆಚ್ಚಳ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಮಾತನಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗುರುವಾರ ಇಲ್ಲಿನ ವಿಶ್ವೇಶ್ವರ ನಗರದಲ್ಲಿರುವ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಚ್ಚಾ ತೈಲ ಸಂಸ್ಕರಣೆ, ಕಂಪನಿಯ ಹಣಕಾಸು ವಿಚಾರದ ಮೇಲೆ ನಿರ್ಧಾರವಾಗುತ್ತದೆ. ಕಾಂಗ್ರೆಸ್ ನಾಯಕರು ಕೂಡ ಆಡಳಿತ ಮಾಡಿದ್ದಾರೆ. ಅವರ ಅವಧಿಯಲ್ಲಿ ದರ ಹೆಚ್ಚಳವಾಗಿಲ್ಲವೆ. ಏನೆಲ್ಲಾ ಬಾಂಡ್ ಮಾಡಿಕೊಟ್ಟಿದ್ದಾರೆ ಎನ್ನುವುದು ನಮಗೂ ಗೊತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಎಲ್ಲಾ ಬೆಲೆಗಳು ಹೆಚ್ಚಾಗಿರುವ ಕಾರಣಕ್ಕೆ ದರ ಹೆಚ್ಚಳವಾಗಿರಬಹುದು. ಕೇವಲ ಕಚ್ಚಾ ತೈಲ ಕಡಿಮೆಯಿದ್ದರೂ ದರ ಹೆಚ್ಚಳವಾಗಿದೆ ಎಂದು ಹೇಳುವುದು ಸರಿಯಲ್ಲ. ಈ ಕುರಿತು ಕೇಂದ್ರ ಹಣಕಾಸು ಸಚಿವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.
ಇದನ್ನೂ ಓದಿ:ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಲು ಕೇಂದ್ರ ಕಾನೂನು ಜಾರಿಗೊಳಿಸಲಿ : ಗಿರಿ ಒತ್ತಾಯ
ವಿಶೇಷ ಅಭಿಯಾನ: ಕೇರಳದಲ್ಲಿ ಕೋವಿಡ್ ಸಂಖ್ಯೆ ಹಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿರುವ ಗ್ರಾಮಗಳಲ್ಲಿ ವಿಶೇಷ ಲಸಿಕೆ ಅಭಿಯಾನ ಕೈಗೊಳ್ಳಲಾಗಿದೆ. ಅಲ್ಲಿನ ನಿವಾಸಿಗಳಿಗೆ ಲಸಿಕೆ ಹಾಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಕೇರಳದಿಂದ ಬರುವವರು ನಕಲಿ ಕೋವಿಡ್ ನೆಗೆಟಿವ್ ವರದಿ ತರುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಅವುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ