ಲಾಕ್ಡೌನ್ ವಿಸ್ತರಣೆ ಬಗ್ಗೆ ಸಿಎಂ ನಿರ್ಧಾರ
ಸಂಕಷ್ಟ ಸಂದರ್ಭದಲ್ಲೂ ರಾಜಕೀಯ ಸಲ್ಲ
Team Udayavani, Jun 1, 2021, 5:22 PM IST
ಧಾರವಾಡ: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಾರಿ ಮಾಡಿರುವ ಲಾಕ್ಡೌನ್ ವಿಸ್ತರಣೆ ಬಗ್ಗೆ ಜೂ.5 ಅಥವಾ ಜೂ.6ರಂದು ಸ್ಪಷ್ಟ ಚಿತ್ರಣ ದೊರಯಲಿದೆ ಎಂದು ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರವಿವಾರ ಶೇ.16ರಷ್ಟಾಗಿದ್ದು, ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಸೋಂಕು ಇಳಿಮುಖವಾಗಿದೆ. ಆದರೆ ಲಾಕ್ಡೌನ್ ವಿಸ್ತರಿಸಬೇಕೋ ಬೇಡವೋ ಎನ್ನುವುದರ ಬಗ್ಗೆ ಸಿಎಂ ನಿರ್ಧಾರ ಕೈಗೊಳ್ಳಲಿದ್ದಾರೆ. ಕೆಲವೊಂದಿಷ್ಟು ಚಟುವಟಿಕೆಗಳಿಗೆ ರಿಯಾಯಿತಿ ಕೊಡಬೇಕಾಗುತ್ತದೆ. ಕೈಗಾರಿಕೆಗಳು ಆರಂಭವಾಗಬೇಕಿವೆ. ಸಿಎಂ ಈ ಎಲ್ಲದರ ಬಗ್ಗೆ ಜೂ.5 ಅಥವಾ 6ರಂದು ನಿರ್ಧಾರ ತೆಗೆದುಕೊಳ್ಳಲಿದ್ದು, ಅವರ ನಿರ್ಧಾರವೇ ಅಂತಿಮ.
ಆಗಾಗ ಸಿಎಂ ಬದಲಾವಣೆ ವಿಚಾರಗಳು ಏಕೆ ಹುಟ್ಟಿಕೊಳ್ಳುತ್ತಿವೆಯೋ ನನಗೆ ಗೊತ್ತಾಗುತ್ತಿಲ್ಲ. ರೇಣುಕಾಚಾರ್ಯ ಸಹಿ ಸಂಗ್ರಹ ವಿಚಾರವೂ ನನಗೆ ಗೊತ್ತಿಲ್ಲ. ಈ ಎಲ್ಲ ವಿಚಾರವಾಗಿ ಯಾವ ವೇದಿಕೆಯಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ. ಇದು ವೇದಿಕೆಯಲ್ಲ. ವಿನಾಕಾರಣ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ಇದಲ್ಲದೇ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಮುಂದುವರಿಯುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ