ಸರ್ಕಾರದ ರಕ್ಷಣೆಗೆ ಸಿಎಂ ಟೆಂಪಲ್ ರನ್: ಶೆಟ್ಟರ್
Team Udayavani, Sep 23, 2018, 6:20 AM IST
ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ಸಿಎಂ ಕುಮಾರಸ್ವಾಮಿ ಅಧಿಕಾರ ಕೈ ತಪ್ಪುವ ಭಯದಲ್ಲಿ ದೇವಸ್ಥಾನಗಳನ್ನು ಸುತ್ತುವ ಬದಲು ಆಡಳಿತದತ್ತ ಲಕ್ಷÂ ವಹಿಸಲಿ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಸಲಹೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸುವಾಗಲೇ ಜನರ ಆಶೀರ್ವಾದದಿಂದ ನಾನು ಸಿಎಂ ಆಗಿಲ್ಲ. ದೇವರ ಕೃಪೆಯಿಂದ ಆಗಿದ್ದೇನೆ ಎಂದಿದ್ದರು. ಹೀಗಾಗಿ, ದೇವರ ಆಶೀರ್ವಾದ ತಪ್ಪುತ್ತದೆ ಇಲ್ಲವೇ ಅಧಿಕಾರ ಕೈ ತಪ್ಪುತ್ತದೆ ಎಂಬ ಭಯದಿಂದಾಗಿ ಎರಡು ದಿನಕ್ಕೊಮ್ಮೆ ದೇವಸ್ಥಾನಗಳನ್ನು ಸುತ್ತುವರಿಯುವುದನ್ನು ಮುಂದುವರಿಸಿದ್ದಾರೆ. ಸರ್ಕಾರದ ಅಸ್ಥಿರತೆಯಿಂದ ಅವರು ದೇವಸ್ಥಾನ ಸುತ್ತುತ್ತಿದ್ದಾರೆ. ದೇವಸ್ಥಾನಗಳನ್ನು ಸುತ್ತಾಡುವಾಗಲೂ ತಾರತಮ್ಯ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ದೇವಸ್ಥಾನಗಳಿಗೂ ಸುತ್ತಾಡಲಿ. ಇಲ್ಲಿನ ತಾಲೂಕುಗಳಲ್ಲಿನ ಭೀಕರ ಬರ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಅಧ್ಯಯನ ಮಾಡಲಿ ಎಂದರು.
ಜವಾಬ್ದಾರಿ ಸ್ಥಾನದಲ್ಲಿರುವ ಸಿಎಂ ಕುಮಾರಸ್ವಾಮಿ ದಂಗೆ ಏಳಿ ಎಂದು ಹೇಳುವ ಮೂಲಕ ಆ ಸ್ಥಾನಕ್ಕೆ ಅನರ್ಹರಾಗಿದ್ದಾರೆ. ಸಿಎಂ ಸ್ಥಾನಕ್ಕೆ ಕಪ್ಪುಚುಕ್ಕೆ ತಂದಿದ್ದಾರೆ. ಸಮ್ಮಿಶ್ರ ಸರ್ಕಾರದ ಸಚಿವರು, ಶಾಸಕರು ಅಸಮಾಧಾನಗೊಂಡು ಬೀದಿಗೆ ಬಂದು ಹೋರಾಟ ಮಾಡುತ್ತಿದ್ದಾರೆ. ಆ ಸಿಟ್ಟನ್ನು ತೀರಿಸಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಇನ್ನು ಆರು ತಿಂಗಳು ಮಾತ್ರ ಕುಮಾರಸ್ವಾಮಿ ಅಧಿಕಾರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ