ಅನ್ನದಾತರ ಸಂಪೂರ್ಣ ಸಾಲಮನ್ನಾಕ್ಕೆಸಮ್ಮಿಶ್ರ ಸರ್ಕಾರ ಸಿದ್ಧ: ಶಿವಶಂಕರರಡ್ಡಿ
•ಕೃಷಿಕ ಸಮಾಜದ ವಿಚಾರ ಸಂಕಿರಣ ಕಟ್ಟಡ ಉದ್ಘಾಟನೆ•ಬ್ಯಾಂಕ್ ನೋಟಿಸ್ಗಳಿಗೆ ಭಯ ಪಡುವ ಅಗತ್ಯವಿಲ್ಲ
Team Udayavani, Jun 17, 2019, 12:35 PM IST
ಹುಬ್ಬಳ್ಳಿ: ವಿಚಾರ ಸಂಕಿರಣ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಹುಬ್ಬಳ್ಳಿ: ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಸಮ್ಮಿಶ್ರ ಸರಕಾರ ಸಿದ್ಧವಿದ್ದು, ರೈತರು ಯಾವುದೇ ಕಾರಣಕ್ಕೂ ಬ್ಯಾಂಕ್ ನೋಟಿಸ್ಗಳಿಗೆ ಭಯ ಪಡುವ ಅಗತ್ಯವಿಲ್ಲ ಎಂದು ಕೃಷಿ ಸಚಿವ ಎನ್.ಎಚ್. ಶಿವಶಂಕರರಡ್ಡಿ ಹೇಳಿದರು.
ಕುಂದಗೋಳ ಎಪಿಎಂಸಿ ಮಾರುಕಟ್ಟೆಯಲ್ಲಿ ನಿರ್ಮಿಸಿರುವ ಕೃಷಿಕ ಸಮಾಜದ ವಿಚಾರ ಸಂಕಿರಣ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕ್ ನೋಟಿಸ್ ನೀಡುವ ಕಾರಣಕ್ಕೆ ಆತ್ಮಹತ್ಯೆಗೆ ಮುಂದಾಗಬಾರದು ಎಂದರು.
ಸರ್ಕಾರ ಪ್ರತಿವರ್ಷ 10 ಸಾವಿರ ಕೋಟಿ ರೂ. ಮನ್ನಾ ಮಾಡಲಿದೆ. ಇದರಿಂದ ಬಡ್ಡಿ ಹೆಚ್ಚಾಗಲಿದೆ ಎನ್ನುವ ಭಯ ರೈತರಿಗೆ ಬೇಡ. ಈ ಬಡ್ಡಿಯನ್ನು ಸರಕಾರವೇ ಭರಿಸಲಿದೆ ಎಂದರು.
ರೈತರು ಬೆಳೆಗೆ ಬೆಲೆ ಕಡಿಮೆಯಾದ ಸಂದರ್ಭದಲ್ಲಿ ಬೆಳೆ ಗೋದಾಮಿನಲ್ಲಿಟ್ಟು ಬೇಕಾದಾಗ ಮಾರಾಟ ಮಾಡಬಹುದು. ಗೋದಾಮು ಬಾಡಿಗೆಯನ್ನು ಸರಕಾರವೇ ಭರಿಸಲಿದೆ. ಇದಕ್ಕಾಗಿ 500 ಕೋಟಿ ರೂ. ಆವರ್ತ ನಿಧಿ ಮೀಸಲಿಡಲಾಗಿದೆ. ದಾಸ್ತಾನು ಮಾಡಿದ ಬೆಳೆ ಮೇಲೆ ರೈತರು ಬ್ಯಾಂಕ್ಗಳಿಂದ ಸಾಲ ಪಡೆಯಬಹುದಾಗಿದೆ. ಇದು ದೇಶದಲ್ಲೇ ಮಾದರಿ ಯೋಜನೆಯಾಗಿದೆ. ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಸಂಬಂಧಿಸಿ ಬೀಜ, ರಸಗೊಬ್ಬರ ಬೇಡಿಕೆಯಂತೆ ದಾಸ್ತಾನು ಮಾಡಲಾಗಿದೆ ಎಂದರು.
ಕೇಂದ್ರ ಸರಕಾರ ಕೇವಲ ಗೋದಿ ಮತ್ತು ಭತ್ತಕ್ಕೆ ಮಾತ್ರ ಬೆಂಬಲ ಬೆಲೆ ಘೋಷಣೆ ಮಾಡಿದ್ದು, ಉಳಿದ ಬೆಳೆ ಬಗ್ಗೆ ಯಾವುದೇ ಚಿಂತನೆ ಮಾಡಿಲ್ಲ. ಆದರೆ ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರ ಕೃಷಿ ಕ್ಷೇತ್ರದ ಬದಲಾವಣೆಗೆ ಯೋಜನೆ ರೂಪಿಸಿದ್ದು, ಅನುಷ್ಠಾನಕ್ಕೆ ತರುತ್ತಿದೆ. ಕೃಷಿ ಯಂತ್ರ ಖರೀದಿಸಲು ಸಾಮಾನ್ಯ ರೈತರಿಗೆ ಸಬ್ಸಿಡಿ ಪ್ರಮಾಣವನ್ನು ಶೇ.50ರಿಂದ 75ಕ್ಕೆ ಹೆಚ್ಚಿಸಲಾಗುವುದು. ಕಡಿಮೆ ಮಳೆ ಬೀಳುವ ಪ್ರದೇಶಗಳಲ್ಲಿ ಸಿರಿಧಾನ್ಯ ಬೆಳೆಯುವ ರೈತರಿಗೆ ರೈತಸಿರಿ ಯೋಜನೆಯಲ್ಲಿ ಪ್ರತಿ ಎಕರೆಗೆ 4 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುವುದು. ಒಟ್ಟು 50 ಸಾವಿರ ಹೆಕ್ಟರ್ ಪ್ರದೇಶಕ್ಕೆ ಈ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದರು.
ಶಾಸಕಿ ಕುಸುಮಾವತಿ ಶಿವಳ್ಳಿ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಬಸವನಗೌಡ ಮಾಲಿಪಾಟೀಲ, ಮಾಜಿ ಅಧ್ಯಕ್ಷ ಒಡಗೂರ ಡಿ.ಎಲ್.ನಾಗರಾಜ, ಉಮೇಶ ಹೆಬಸೂರ, ಅರವಿಂದ ಕಟಗಿ, ಎನ್.ಎನ್. ಪಾಟೀಲ, ಭೀಮಪ್ಪ ಮುಗಳಿ, ರಾಧಿಕಾ ಮೂಸೂರ, ಬೀರಪ್ಪ ಕುರುಬರ, ಎ.ಬಿ. ಉಪ್ಪಿನ, ಪಿ.ಎನ್. ಪಾಟೀಲ, ಸಿ.ಬಿ. ಮೇತ್ರಿ ಇನ್ನಿತರರಿದ್ದರು. ಕೃಷಿ ಇಲಾಖೆಯಿಂದ ಕೃಷಿ ಸಲಕರಣೆಗಳ ಪ್ರದರ್ಶನ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!