ಕಾಲೇಜು ಸ್ಥಳಾಂತರ: ವಿದ್ಯಾರ್ಥಿಗಳ ಪ್ರತಿಭಟನೆ
•ಸಾಧನಕೇರಿಯಿಂದ ಮುಗದ ಗ್ರಾಮಕ್ಕೆ ಪಿಯು ಕಾಲೇಜು ಶಿಫ್ಟ್•ಡಿಡಿಪಿಯು ಕಚೇರಿ ಎದುರು ಹೋರಾಟ
Team Udayavani, Jun 12, 2019, 9:01 AM IST
•ಸಾಧನಕೇರಿಯಿಂದ ಮುಗದ ಗ್ರಾಮಕ್ಕೆ ಪಿಯು ಕಾಲೇಜು ಶಿಫ್ಟ್•ಡಿಡಿಪಿಯು ಕಚೇರಿ ಎದುರು ಹೋರಾಟ
ಧಾರವಾಡ: ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶಕ್ಕೆ ಕಾಲೇಜು ಸ್ಥಳಾಂತರ ಮಾಡಿರುವ ಕ್ರಮ ಖಂಡಿಸಿ ನಗರದ ಡಿಡಿಪಿಯು ಕಚೇರಿ ಎದುರು ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಸರ್ವೋದಯ ಶಿಕ್ಷಣ ಟ್ರಸ್ಟ್ ಅಡಿಯಲ್ಲಿ ಸಾಧನಕೇರಿಯಲ್ಲಿ ನಡೆದಿರುವ ಆಲೂರು ವೆಂಕಟರಾವ್ ಸ್ಮಾರಕ ಪಿಯು ಕಾಲೇಜನ್ನು ಮುಗದ ಗ್ರಾಮಕ್ಕೆ ಸ್ಥಳಾಂತರ ಮಾಡಿರುವುದು ಖಂಡನೀಯ. ಮುಗದ ಗ್ರಾಮದ ಹನುಮಂತಪ್ಪ ಮಾವಳೇರ ಪ್ರೌಢಶಾಲೆ ಆವರಣಕ್ಕೆ ಸ್ಥಳಾಂತರ ಮಾಡುವಂತೆ ಸರ್ಕಾರ ಕೆಲ ದಿನಗಳ ಹಿಂದೆ ಆದೇಶ ಹೊರಡಿಸಿದೆ. ಆದರೆ ಮುಗದ ಗ್ರಾಮಕ್ಕೆ ತೆರಳಲು ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಮುಖ್ಯ ರಸ್ತೆಯಿಂದ 3 ಕಿಮೀ ನಡೆದು ತೆರಳುವ ಪರಿಸ್ಥಿತಿ ಎದುರಾಗಿದ್ದು, ಹೀಗಾಗಿ ಈಗ ಸಾಧನಕೇರಿಯಲ್ಲಿ ಇರುವ ಸ್ಥಳದಲ್ಲೇ ಕಾಲೇಜು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಶಾಲೆ ಪ್ರಾಚಾರ್ಯರು ಪಿಯು ದ್ವಿತೀಯ ವರ್ಷದ ಪ್ರವೇಶ ಪಡೆಯುವ ಪೂರ್ವದಲ್ಲೇ ನೀಡಬೇಕಾದ ನೋಟಿಸ್ ಕೆಲ ದಿನಗಳ ಹಿಂದಷ್ಟೇ ನೀಡಿದ್ದಾರೆ. ಸದ್ಯ ಪ್ರವೇಶಾತಿ ಪ್ರಕ್ರಿಯೆ ಮುಗಿದ ಕಾರಣ ವಿದ್ಯಾರ್ಥಿಗಳು ಬೇರೆ ಕಾಲೇಜುಗಳಲ್ಲೂ ಪ್ರವೇಶ ಪಡೆಯದೆ ಪರದಾಡುವಂತಾಗಿದೆ. ನಗರದಿಂದ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುವ ಕಾರಣಕ್ಕೆ ಕೂಡಲೇ ಸಾಧನಕೇರಿಯಲ್ಲೇ ಕಾಲೇಜು ಪ್ರಾರಂಭಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಡಿಡಿಪಿಯು ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಎಚ್ಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ