ಕೊಳಚೆ ಪ್ರದೇಶ ನಿವಾಸಿಗಳಿಗೆ ಮನೆ ಕಲ್ಪಿಸಲು ಬದ್ಧ

•ಪಟ್ಟಿ ಸಿದ್ಧಪಡಿಸಿಕೊಟ್ಟರೆ ಅವಶ್ಯವುಳ್ಳವರಿಗೆ ಪ್ರಧಾನಿ ಆವಾಸ್‌ ಯೋಜನೆಯಡಿ ಆರ್‌ಸಿಸಿ ಮನೆ

Team Udayavani, Aug 6, 2019, 10:02 AM IST

huballi-tdy-05

ಹುಬ್ಬಳ್ಳಿ: ಹಳೇಹುಬ್ಬಳ್ಳಿ ಜಗದೀಶ ನಗರ ನಿವಾಸಿಗಳನ್ನುದ್ದೇಶಿಸಿ ಶಾಸಕ ಜಗದೀಶ ಶೆಟ್ಟರ ಮಾತನಾಡಿದರು.

ಹುಬ್ಬಳ್ಳಿ: ಹೆಗ್ಗೇರಿ ಜಗದೀಶ ನಗರದಲ್ಲಿನ ಕೊಳಚೆ ಪ್ರದೇಶ ನಿವಾಸಿಗಳಿಗೆ ಅವಶ್ಯವಾದ ಮನೆಗಳನ್ನು ಪ್ರಧಾನಿ ಅವಾಸ್‌ ಯೋಜನೆಯಡಿ ಕಲ್ಪಿಸಲು ಬದ್ಧನಾಗಿದ್ದು, ಹಾಳಾದ, ಬಿದ್ದಿರುವ ಮನೆಗಳ ಪಟ್ಟಿ ಸಿದ್ಧಪಡಿಸಿ ಅಂತಿಮ ವರದಿ ಕೊಡಿ ಎಂದು ಶಾಸಕ ಜಗದೀಶ ಶೆಟ್ಟರ ಹೇಳಿದರು.

ಜಗದೀಶ ನಗರ ಶಿಕ್ಕಲಗಾರ ಬಡಾವಣೆಯ ಕೊಳಗೇರಿಗೆ ಸೋಮವಾರ ಭೇಟಿ ಕೊಟ್ಟು ವೀಕ್ಷಿಸಿದ ನಂತರ ಶ್ರೀ ಯಲ್ಲಮ್ಮಾದೇವಿ ದೇವಸ್ಥಾನದಲ್ಲಿ ಮಾತನಾಡಿದ ಅವರು, 1984ರಲ್ಲಿ ವಾಂಬೆ ಯೋಜನೆಯಡಿ ನಿರ್ಮಿಸಲಾಗಿತ್ತು. ಈಗ ಇಲ್ಲಿ ಕುಟುಂಬಗಳ ಸಂಖ್ಯೆ ಹೆಚ್ಚಾಗಿವೆ. ಕೆಲವು ಮನೆಗಳು ಬಿದ್ದಿವೆ ಹಾಗೂ ದುರಸ್ತಿಗೆ ಬಂದಿವೆ. ಕೆಲ ಕುಟುಂಬಗಳು ಜೋಪಡಿಯಲ್ಲಿ ವಾಸಿಸುತ್ತಿರುವುದಾಗಿ ತಿಳಿದು ಬಂದಿದೆ. ಈಗ ಸುಮಾರು 240 ಮನೆಗಳ ಅವಶ್ಯವಿದೆ ಎಂದು ಹೇಳಲಾಗುತ್ತಿದೆ. ಕಾರಣ ಪಟ್ಟಿ ಸಿದ್ಧಪಡಿಸಿಕೊಟ್ಟರೆ ಅವಶ್ಯವುಳ್ಳವರಿಗೆ ಪ್ರಧಾನಿ ಆವಾಸ್‌ ಯೋಜನೆಯಡಿ ಅಂದಾಜು 5ಲಕ್ಷ ರೂ. ವೆಚ್ಚದಲ್ಲಿ ಆರ್‌ಸಿಸಿ ಮನೆ ನಿರ್ಮಿಸಿ ಕೊಡಲಾಗುವುದು. ಅದಕ್ಕಾಗಿ ಶೀಘ್ರವೇ ಭೂಮಿಪೂಜೆ ಮಾಡಲಾಗುವುದು ಎಂದರು.

ವಾರ್ಡ್‌ 40 ಮತ್ತು 41ರಲ್ಲಿ ಹಾದು ಹೋಗಿರುವ ನಾಲಾವನ್ನು ಸ್ಮಾರ್ಟ್‌ ಸಿಟಿ ಯೋಜನೆಯಡಿ ಸ್ವಚ್ಛಗೊಳಿಸಿ ಅದರ ಸುತ್ತ ತಡೆಗೋಡೆ ನಿರ್ಮಿಸಲಾಗುವುದು. ಇದರಿಂದ ಮಳೆಗಾಲದಲ್ಲಿ ಮನೆಗಳಿಗೆ ವಿಷಜಂತುಗಳು ಬರುವುದು ಹಾಗೂ ಗೋಡೆ ಕುಸಿತ ತಡೆಗಟ್ಟಬಹುದು. ಕೆಲವರು ನಾಲಾ ಅತಿಕ್ರಮಣ ಮಾಡಿ ಮನೆಗಳನ್ನು ನಿರ್ಮಿಸಿದ್ದಾರೆ. ಅದನ್ನು ತೆರವುಗೊಳಿಸಲು ಸ್ಥಳೀಯರು ಸಹಕಾರ ನೀಡಬೇಕು ಎಂದರು.

ಜಗದೀಶ ನಗರದ ಕೊಳಚೆ ಪ್ರದೇಶ ಬಡಾವಣೆಯಲ್ಲಿ ಬಾಕಿ ಉಳಿದಿರುವ ರಸ್ತೆ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ಶಾಸಕರ ನಿಧಿಯಡಿ 25ಲಕ್ಷ ರೂ. ನೀಡಿದ್ದೆ. ಈ ಕುರಿತು ಕೊಳಚೆ ನಿರ್ಮೂಲನಾ ಮಂಡಳಿಗೂ ತಿಳಿಸಿದ್ದೆ. ಆದರೆ ಅಧಿಕಾರಿಗಳಿಂದ ನಿರೀಕ್ಷಿತ ಕೆಲಸ ಆಗಿಲ್ಲ. ಹಿಂದಿನ ಅಭಿಯಂತರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗ ಅಂದಾಜು ಪಟ್ಟಿ ತಯಾರಾಗಿ ಮಂಜೂರಾತಿ ದೊರೆತ ಕೂಡಲೇ ರಸ್ತೆ ನಿರ್ಮಿಸಲಾಗುವುದು. ಈ ಕುರಿತು ಪಾಲಿಕೆ ಆಯುಕ್ತರೊಂದಿಗೆ ಚರ್ಚಿಸುವೆ ಎಂದರು.

ಇದೇ ಸಂದರ್ಭದಲ್ಲಿ ಕೆಲ ಮಹಿಳೆಯರು ನಮ್ಮ ಮನೆಗೆ ಹಾವು ಬರುತ್ತಿವೆ. ನಮಗೆ ಮನೆ ನಿರ್ಮಿಸಿಕೊಡಿ ಎಂದು ಆಗ್ರಹಿಸಿದರು.

ಶಿಕ್ಕಲಗಾರ ಸಮಾಜ ಸೇವಾ ಸಂಘದ ಅಧ್ಯಕ್ಷ ನಾಗೇಶ ಕಟ್ಟಿಮನಿ ಮಾತನಾಡಿ, ವಾಂಬೆ ಯೋಜನೆಯಡಿ 1984ರಲ್ಲಿ ಬಡಾವಣೆಯಲ್ಲಿ 80 ಮನೆ ನಿರ್ಮಿಸಿ ಕೊಡಲಾಗಿತ್ತು. ಈಗ ಕುಟುಂಬಗಳ ಸಂಖ್ಯೆ ಹೆಚ್ಚಾಗಿದ್ದು, 240 ಮನೆಗಳ ಅವಶ್ಯವಿದೆ. ನಿವಾಸಿಗಳ ಬೇಡಿಕೆ ಅನುಸಾರ ಎನ್‌ಜಿಒದಿಂದ ಸರ್ವೇ ಕೂಡ ಮಾಡಲಾಗಿದೆ. ವಾರ್ಡ್‌ 40 ಮತ್ತು 41ರಲ್ಲಿ ಹಾದು ಹೋಗಿರುವ ನಾಲಾಗೆ ತಡೆಗೋಡೆ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಪಾಲಿಕೆ ಮಾಜಿ ಸದಸ್ಯರಾದ ರಾಘವೇಂದ್ರ ರಾಮದುರ್ಗ, ಲಕ್ಷ್ಮಣ ಗಂಡಗಾಳೇಕರ ಮಾತನಾಡಿದರು. ಕೃಷ್ಣಾ ಗಂಡಗಾಳೇಕರ, ಯಲ್ಲಪ್ಪ ಬಾಗಲಕೋಟ, ಬಸವರಾಜ ಕಟ್ಟಿಮನಿ, ಮಂಜುನಾಥ ಮುದ್ದಿ, ಶಂಕರ ಜಿಂಗ್ಲಿ, ರಾಮಚಂದ್ರ ದೊಡಮನಿ, ಪರಶುರಾಮ ಅಮ್ಮಿನಭಾವಿ, ಮಂಜುನಾಥ ಬ್ಯಾಡಗಿ, ಪ್ರಕಾಶ ಬಿಲಾನಾ ಮೊದಲಾದವರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.