ಟಿಕೆಟ್‌ಗಾಗಿ ಪೈಪೋಟಿ, ಸಮೀಕ್ಷೆ ಮೇಲೆ ಕಣ್ಣು


Team Udayavani, Jun 3, 2017, 3:53 PM IST

hub1.jpg

ಹುಬ್ಬಳ್ಳಿ: ವಿಧಾನಸಭೆ ಚುನಾವಣೆಗೆ ರಾಜಕೀಯ ಚಟುವಟಿಕೆ ಗದಿಗೆದರಿವೆ. ಧಾರವಾಡ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಕುರಿತಾಗಿ ಪಕ್ಷದ ಟಿಕೆಟ್‌ ಆಕಾಂಕ್ಷಿಗಳ ಪರವಾಗಿ ಅವರವರ ಬೆಂಬಲಿಗರ ಪ್ರಚಾರ ಸಮರಕ್ಕೆ ಸಾಮಾಜಿಕ ಜಾಲತಾಣ ವೇದಿಕೆಯಾಗಿ ಮಾರ್ಪಟ್ಟಿದೆ. 

ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಕಲಘಟಗಿ ಹಾಗೂ ಕುಂದಗೋಳ ಕ್ಷೇತ್ರಗಳಲ್ಲಿ ಟಿಕೆಟ್‌ ಪೈಪೋಟಿ ತೀವ್ರಗೊಂಡಿದೆ. ಅಭ್ಯರ್ಥಿಗಳ ಕುರಿತಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದು, ಪ್ರಾಥಮಿಕ ಹಂತದ ಸಮೀಕ್ಷೆಯಲ್ಲಿ ಪ್ರಸ್ತಾಪಗೊಂಡ ಮುಖಂಡರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಬೆಂಬಲದ ಪ್ರಚಾರ ಶುರುವಿಟ್ಟುಕೊಂಡಿದ್ದಾರೆ. 

ನಿಂಬಣ್ಣವರ ವರ್ಸಸ್‌ ಟೆಂಗಿನಕಾಯಿ: ಕಲಘಟಗಿ ಕ್ಷೇತ್ರದಲ್ಲಿ ಸದ್ಯದ ಮಟ್ಟಿಗೆ ಸಿ.ಎಂ. ನಿಂಬಣ್ಣವರ ಹಾಗೂ ಮಹೇಶ ಟೆಂಗಿನಕಾಯಿ ಬೆಂಬಲಿಗರ ನಡುವೆ ತೀವ್ರ ಪ್ರಚಾರ ಸಮರ ನಡೆಯುತ್ತಿದೆ. ಕಲಘಟಗಿ ಕ್ಷೇತ್ರದಲ್ಲಿ ಈ ಹಿಂದೆ ಬಿಜೆಪಿ-ಕೆಜೆಪಿಯಿಂದ ಸ್ಪರ್ಧಿಸಿ ಸೋಲುಂಡಿರುವ ಸಿ.ಎಂ. ನಿಂಬಣ್ಣವರ, ಇಲ್ಲಿವರೆಗೆ ತಾವೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದೇ ಭಾವಿಸಿದ್ದರು.

ಯಾವಾಗ ಪಕ್ಷದ ಪ್ರಾಥಮಿಕ ಸಮೀಕ್ಷೆಯಲ್ಲಿ, ನಿಂಬಣ್ಣವರ ಜತೆಗೆ ಪಕ್ಷದ ಯುವ ಮುಖಂಡ ಮಹೇಶ ಟೆಂಗಿನಕಾಯಿ ಅವರ ಹೆಸರು ಕಾಣಿಸಿಕೊಂಡಿತೋ ಕ್ಷೇತ್ರದಲ್ಲಿ ಟಿಕೆಟ್‌ ಪೈಪೋಟಿ ತೀವ್ರತೆ ಹೆಚ್ಚುವಂತೆ ಮಾಡಿದೆ. ಕಳೆದ ಚುನಾವಣೆಯಲ್ಲಿ ನಿಂಬಣ್ಣವರ ಕೆಜೆಪಿಯಿಂದ ಸ್ಪರ್ಧಿಸಿ 31,248 ಮತಗಳನ್ನು ಪಡೆದು ಕಾಂಗ್ರೆಸ್‌ ಅಭ್ಯರ್ಥಿ ಸಂತೋಷ ಲಾಡ್‌ ವಿರುದ್ಧ ಸೋತಿದ್ದರು.

ಇಲ್ಲಿ ಬಿಜೆಪಿ ಅಭ್ಯರ್ಥಿ 6,800 ಮತಗಳನ್ನಷ್ಟೇ ಪಡೆದು ಠೇವಣಿ ಕಳೆದುಕೊಂಡಿದ್ದರು. ನಿಂಬಣ್ಣವರ ಚುನಾವಣೆ ದೃಷ್ಟಿಕೋನದ ತಯಾರಿಯಲ್ಲಿ ತೊಡಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕೃಪಕಟಾಕ್ಷ ತಮಗಿರುವ ವಿಶ್ವಾಸ ಒಂದು ಕಡೆಯಾದರೆ, ಪಕ್ಷದಿಂದ ನಡೆಯುವ ಇನ್ನು ಮೂರು ಸಮೀಕ್ಷೆಗಳಲ್ಲಿ ತಮ್ಮ ಹೆಸರೇ ಮೊದಲ ಸ್ಥಾನದಲ್ಲಿ ಓಡುವಂತೆ ನೋಡಿಕೊಳ್ಳುವ ಒತ್ತಡ ಮತ್ತೂಂದು ಕಡೆ ಎದುರಾಗಿದೆ. 

ಮಹೇಶ ಟೆಂಗಿನಕಾಯಿ ಹಲವು ವರ್ಷಗಳಿಂದ ಬಿಜೆಪಿ ಸಂಘಟನೆಯಲ್ಲಿ ತೊಡಗಿದ್ದು, ವಿಭಾಗ ಮಟ್ಟದ ಸಹ ಪ್ರಭಾರಿ, ವಿವಿಧ ರಾಜ್ಯಗಳ ಚುನಾವಣೆ ವೀಕ್ಷಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದರೂ ಟಿಕೆಟ್‌ ಸಿಕ್ಕಿರಲಿಲ್ಲ.

ಪಕ್ಷದಿಂದ ಇತ್ತೀಚೆಗೆ ನಡೆದ ಸಮೀಕ್ಷೆಯಲ್ಲಿ ಕಲಘಟಗಿ ಕ್ಷೇತ್ರದಲ್ಲಿ ತಮ್ಮ ಹೆಸರು ನಮೂದಾಗಿರುವುದು, ಟೆಂಗಿಕಾಯಿ ಅವರ ಹುರುಪು ಹೆಚ್ಚುವಂತೆ ಮಾಡಿದೆ. ಹೆಚ್ಚಾಗಿ ಯುವ ಪಡೆಯೊಂದಿಗೆ ಗುರುತಿಸಿಕೊಂಡಿರುವ ಟೆಂಗಿನಕಾಯಿ ಕಲಘಟಗಿ ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಪ್ರಯತ್ನಕ್ಕಿಳಿಯುವ ಸಾಧ್ಯತೆ ಇಲ್ಲದಿಲ್ಲ. ಯಾವುದಕ್ಕೂ ಮುಂದಿನ ಮೂರು ಸಮೀಕ್ಷೆಯ ಫ‌ಲಿತಾಂಶ ಮುಂದೇನು ಎಂಬುದನ್ನು ನಿರ್ಧರಿಸಲಿದೆ. 

ಚಿಕ್ಕನಗೌಡ್ರ-ಪಾಟೀಲ ಮಧ್ಯ ಪೈಪೋಟಿ: ಬಿಜೆಪಿಯಲ್ಲಿ ಟಿಕೇಟ್‌ ಆಕಾಂಕ್ಷಿಗಳ ತೀವ್ರ ಪೈಪೋಟಿಯ ಮತ್ತೂಂದು ಕ್ಷೇತ್ರ ಕುಂದಗೋಳ. ಮಾಜಿ ಶಾಸಕ ಎಸ್‌.ಐ. ಚಿಕ್ಕನಗೌಡ್ರು ಹಾಗೂ ಎಂ.ಆರ್‌. ಪಾಟೀಲರ ನಡುವೆ ಟಿಕೆಟ್‌ ತಿಕ್ಕಾಟ ಆರಂಭಗೊಂಡಿದ್ದು, ಇಬ್ಬರು ಮುಖಂಡರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮುಖಂಡ ಮುಂದಿನ ಬಿಜೆಪಿ ಅಭ್ಯರ್ಥಿ ಎಂದು ಪ್ರಚಾರ ಸಮರ ಆರಂಭಿಸಿದ್ದಾರೆ. 

ಇಬ್ಬರೂ ಮುಖಂಡರು ಕ್ಷೇತ್ರದಲ್ಲಿ ಪ್ರಭಾವ ಹೊಂದಿದ್ದಾರೆ. ಎಸ್‌.ಐ. ಚಿಕ್ಕನಗೌಡ್ರು ಕುಂದಗೋಳ ಶಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದು, ಕಳೆದ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸುಮಾರು 34 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಕಾಂಗ್ರೆಸ್‌ನ ಸಿ.ಎಸ್‌. ಶಿವಳ್ಳಿ ವಿರುದ್ಧ ಸೋಲುಂಡಿದ್ದರು.

ಆಗ ಬಿಜೆಪಿ ಅಭ್ಯರ್ಥಿಯಾಗಿದ್ದ ಎಂ.ಆರ್‌. ಪಾಟೀಲ 21 ಸಾವಿರಕ್ಕೂ ಅಧಿಕ ಮತ ಪಡೆದು ಮೂರನೇ ಸ್ಥಾನ ಪಡೆದಿದ್ದರು. ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತಾಗಿ ಪಕ್ಷದಿಂದ ನಡೆದ ಪ್ರಾಥಮಿಕ ಸಮೀಕ್ಷೆಯಲ್ಲಿ ಚಿಕ್ಕನಗೌಡ್ರ ಹಾಗೂ ಎಂ.ಆರ್‌. ಪಾಟೀಲರಿಗೆ ಸಮಾನ ಬೆಂಬಲ ವ್ಯಕ್ತವಾಗಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರು ಮುಖಂಡರ ನಡುವೆ ಪೈಪೋಟಿ ತೀವ್ರಗೊಳ್ಳುವಂತೆ ಮಾಡಿದೆ. 

ಇತ್ತೀಚೆಗೆ ಧಾರವಾಡ ಜಿಲ್ಲೆಗೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ತಮ್ಮ ಸಂಬಂಧಿ ಹಾಗೂ ಮಾಜಿ ಶಾಸಕ ಎಸ್‌.ಐ. ಚಿಕ್ಕನಗೌಡ್ರ ಅವರ ನಿವಾಸಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ, “ಏನಪ್ಪಾ, ನಿಮ್ಮ ಗೌಡರನ್ನು ಈ ಬಾರಿ ಗೆಲ್ಲಿಸುತ್ತೀರಾ?’ ಎಂದು ಪ್ರಶ್ನಿಸಿದರು ಎನ್ನಲಾಗಿದೆ.

ಈ ಪ್ರಶ್ನೆ ಸಹಜವಾಗಿಯೇ ಚಿಕ್ಕನಗೌಡ್ರ ಬೆಂಬಲಿಗರ ನಿರೀಕ್ಷೆ-ಆಸೆಯನ್ನು ಇಮ್ಮಡಿಗೊಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್‌ ನೀಡಿಕೆ ವಿಚಾರದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕೈಗೊಂಡ ಸಮೀಕ್ಷೆಯ ಫ‌ಲಿತಾಂಶ ಏನೆಲ್ಲ ಬದಲಾವಣೆಗೆ ದಾರಿ ಮಾಡಿಕೊಡುತ್ತದೆಯೋ, ಇದು ಇನ್ನಷ್ಟು ಕ್ಷೇತ್ರದಲ್ಲೂ ಪೈಪೋಟಿ ಸೃಷ್ಟಿಸಲಿದೆಯೋ, ಯಾರಿಗೆ ಟಿಕೆಟ್‌ ಎಂಬುದು ಹೆಚ್ಚಿನ ಕುತೂಹಲವಂತೂ ಮೂಡಿಸಿದೆ. 

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.