ಪತಿ ವಿರುದ್ದ ಪಾಲಿಕೆ ಸದಸ್ಯೆ ದೂರು

ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದಾಗಿ ದೂರು ; ಗರ್ಭಿಣಿ ಎಂಬುದನ್ನು ಲೆಕ್ಕಿಸದೆ ಕಾಲಿನಿಂದ ಒದ್ದಿದ್ದಾಗಿ ಆರೋಪ

Team Udayavani, Jun 28, 2022, 1:10 PM IST

10

ಹುಬ್ಬಳ್ಳಿ: ಮಹಾನಗರ ಪಾಲಿಕೆ ಸದಸ್ಯೆಯ ಜತೆ ಅವರ ಪತಿ ಜಗಳ ಮಾಡಿದ್ದಲ್ಲದೆ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಸದಸ್ಯೆ ಕೇಶ್ವಾಪುರ ಠಾಣೆಯಲ್ಲಿ ಪತಿ ವಿರುದ್ಧ ದೂರು ಸಲ್ಲಿಸಿದ್ದಾರೆ.

ಪಾಲಿಕೆಯ 58ನೇ ವಾರ್ಡ್‌ನ ಸದಸ್ಯೆ ಶ್ರುತಿ ಚಲವಾದಿ ಪತಿಯಿಂದ ಹಲ್ಲೆಗೊಳಗಾದವರು.

ಇವರ ಪತಿ ಸಂತೋಷ ಚಲವಾದಿ ಅನ್ಯ ಮಹಿಳೆಯೊಂದಿಗೆ ಮಾತನಾಡುವುದು, ಚಾಟ್‌ ಮಾಡುತ್ತಿರುವ ವಿಷಯವಾಗಿ ದಂಪತಿ ಮಧ್ಯೆ ಆಗಾಗ ವಾಗ್ವಾದ ನಡೆಯುತ್ತಿತ್ತು. ರವಿವಾರ ಬೆಳಗ್ಗೆ ಸಹ ಇದೇ ವಿಷಯವಾಗಿ ಜಗಳವುಂಟಾದಾಗ ರೂಮ್‌ನಿಂದ ಹೊರಗೆ ಹೋಗದಂತೆ ತಡೆಗಟ್ಟಿ ಮನಬಂದಂತೆ ಹಲ್ಲೆ ಮಾಡಿ, ಗರ್ಭಿಣಿ ಎಂಬುದನ್ನು ಲೆಕ್ಕಿಸದೆ ಕಾಲಿನಿಂದ ಒದ್ದಿದ್ದಾಗಿ ಆರೋಪಿಸಲಾಗಿದೆ.

ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಯಾವ ಪೊಲೀಸ್‌ ಠಾಣೆಗೆ, ಅಧಿಕಾರಿ ಬಳಿ ಹೋಗು. ನನಗೆ ಜೈಲು, ಸ್ಟೇಶನ್‌ ಹೊಸದಲ್ಲ. ಹೊರಗಿನ ಹುಡುಗರನ್ನು ಕರೆಯಿಸಿ ನಿನ್ನನ್ನು ಮತ್ತು ನಿಮ್ಮ ಅಣ್ಣನನ್ನು ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಕುತ್ತಿಗೆ ಹಿಚುಕಿ ಕೊಲೆಗೆ ಯತ್ನಿಸಿದ್ದಾಗಿ ಶ್ರುತಿ ಅವರು ಪೊಲೀಸ್‌ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ದೂರಿನನ್ವಯ ಕೇಶ್ವಾಪುರ ಠಾಣೆ ಪೊಲೀಸರು ಸಂತೋಷನನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಸಂತೋಷ ಚಲವಾದಿ ಕೇಶ್ವಾಪುರದ ವಿನಯ ಪಿಳ್ಳೆ ಮತ್ತು ಕುಮಾರ ಪಿಳ್ಳೆ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ಇತ್ತೀಚೆಗಷ್ಟೆ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗೆ ಬಂದಿದ್ದ.

ಅಪಹರಣದ ಮಾಸ್ಟರ್‌ಮೈಂಡ್‌ ಪಾಲಿಕೆ ಸದಸ್ಯ: ಸಹನಾ

ನನ್ನನ್ನು ನನ್ನ ತಂದೆ-ತಾಯಿ ಮುಖಾಂತರ ಅಪಹರಿಸಿಕೊಂಡು ಮೂರು ಪ್ರತ್ಯೇಕ ವಾಹನಗಳ ಮೂಲಕ ಗೋವಾಕ್ಕೆ ಕರೆದೊಯ್ದಿದ್ದರು. ಇದರೆಲ್ಲದರ ಮಾಸ್ಟರ್‌ಮೈಂಡ್‌ ಪಾಲಿಕೆ ಸದಸ್ಯ ಚೇತನ ಹಿರೇಕೆರೂರ ಆಗಿದ್ದು, ಆತ ನನ್ನ ತಂದೆಯನ್ನು ಈ ಪ್ರಕರಣದಲ್ಲಿ ಸಿಕ್ಕಿ ಹಾಕಿಸಿ ತಾನು ರಾಜಕೀಯದಲ್ಲಿ ಬೆಳೆಯಲು ಮಾಡಿದ ಪ್ಲಾನ್‌ ಆಗಿದೆ ಎಂದು ಸಹನಾ ದಾಂಡೇಲಿ ಆರೋಪಿಸಿದ್ದು, ಪೊಲೀಸರು ಚೇತನನ್ನು ಬಂಧಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅಪಹರಣದಲ್ಲಿ ತಂದೆಯ ಯಾವ ಪಾತ್ರವಿಲ್ಲ. ಚೇತನ ಅವರನ್ನು ಬಳಸಿಕೊಂಡು ತನ್ನ ಸಹಚರರೊಂದಿಗೆ ಈ ಕೃತ್ಯ ಮಾಡಿದ್ದಾನೆ. ಪೊಲೀಸರು ಸಹಿತ ತಪ್ಪಿತಸ್ಥರಿಗೆ ಶಿಕ್ಷೆ ಕೊಡಬೇಕೇ ವಿನಃ ಅನ್ಯಾಯಕ್ಕೊಳಗಾದವರ ಮೇಲೆ ದಬ್ಟಾಳಿಕೆ ಮಾಡಬಾರದು. ಆತನಿಗೆ ಶಿಕ್ಷೆ ಆಗಬೇಕು. ನಮಗೆ ನ್ಯಾಯ ಒದಗಿಸಬೇಕು ಎಂದು ಸಹನಾ ಆಗ್ರಹಿಸಿದ್ದಾರೆ.

ತನ್ನ ಪತ್ನಿಯನ್ನು ಪಾಲಿಕೆ ಸದಸ್ಯ ಚೇತನ ಹಿರೇಕೆರೂರ ಚಿತಾವಣೆಯಿಂದ ಅಪಹರಿಸಲಾಗಿದೆ ಎಂದು ಗೋಕುಲ ರೋಡ್‌ ಠಾಣೆಯಲ್ಲಿ ನಿಖೀಲ ದಾಂಡೇಲಿ ದೂರು ದಾಖಲಿಸಿದ್ದರು. ದೂರಿನನ್ವಯ ಪೊಲೀಸರು ಸಹನಾರನ್ನು ಗೋವಾದಲ್ಲಿ ರಕ್ಷಿಸಿ, ನಗರಕ್ಕೆ ಕರೆ ತಂದು ಪತಿಯ ಮನೆಗೆ ಕಳುಹಿಸಿದ್ದರು. ಸೋಮವಾರ ಗೋಕುಲ ರೋಡ್‌ ಪೊಲೀಸರು ಸಹನಾರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರು ನ್ಯಾಯಾಧೀಶರ ಎದುರು ತಮ್ಮ ಹೇಳಿಕೆ ಕೊಟ್ಟಿದ್ದಾರೆ. ಪೊಲೀಸರು ಅವರ ಹೇಳಿಕೆ ಆಧರಿಸಿ ಮುಂದಿನ ತನಿಖೆ ಕೈಗೊಳ್ಳಲು ಮುಂದಾಗಿದ್ದಾರೆ.

 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.