ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳಕ್ಕೆ ಖಂಡನೆ
Team Udayavani, Jun 27, 2020, 1:01 PM IST
ಹುಬ್ಬಳ್ಳಿ: ಕೇಂದ್ರ ಸರಕಾರ ದಿನೇ ದಿನೇ ತೈಲ ಬೆಲೆ ಹೆಚ್ಚಳ ಮಾಡುತ್ತಿರುವುದನ್ನು ಬಹುಜನ ಸಮಾಜ ಪಾರ್ಟಿ ಜಿಲ್ಲಾ ಘಟಕ ಖಂಡಿಸಿದೆ.
ತಹಶೀಲ್ದಾರ್ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಪಕ್ಷದ ಕಾರ್ಯಕರ್ತರು, ಕಳೆದ 18ದಿನಗಳಿಂದ ತೈಲ ಬೆಲೆ ನಿರಂತರವಾಗಿ ಹೆಚ್ಚಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನವಿರೋಧಿ ಆಡಳಿತ ನಡೆಸುತ್ತಿವೆ. ನೆರೆಹೊರೆಯ ರಾಷ್ಟ್ರಗಳಲ್ಲಿ ತೈಲ ಬೆಲೆ ಭಾರತಕ್ಕಿಂತ ಕಡಿಮೆ ಇದ್ದರೂ ದೇಶದಲ್ಲಿ ಮಾತ್ರ ಅಧಿಕವಾಗುತ್ತಿದೆ. ಜನರಿಗೆ ಹೊರೆಯಾಗುತ್ತಿರುವ ತೈಲ ಬೆಲೆಯನ್ನು ತಕ್ಷಣ ಇಳಿಸಬೇಕೆಂದು ರೇವಣಸಿದ್ದಪ್ಪ ಹೊಸಮನಿ, ನಿಸ್ಸಾರಅಹ್ಮದ ಮುಲ್ಲಾ, ಪ್ರಕಾಶ ವೀರಾಪುರ, ಹಣಮಂತ ಯಮಾಳ, ವಿಜಯ ಕರ್ರಾ ಇತರರು ಒತ್ತಾಯಿಸಿದ್ದಾರೆ.
ಬೈಕ್ ಹೊತ್ತು ವಿನೂತನ ಪ್ರತಿಭಟನೆ : ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಬೈಕ್ ಹೊತ್ತು ಸಾಗುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಪೆಟ್ರೋಲ್, ಡೀಸೆಲ್ ದರ ಇಳಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ, ಹು-ಧಾ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಬ್ಲಾಕ್ ಅಧ್ಯಕ್ಷೆ ಗೌರಮ್ಮ ನಾಡಗೌಡ್ರ, ಬಸವರಾಜ ಜಾಧವ, ಆನಂದ ಸಿಂಗನಾಥ, ರಾಬರ್ಟ್ ದದ್ದಾಪುರಿ, ಆನಂದ ಜಾಧವ, ಪ್ರಶಾಂತ ಕೆಕರೆ, ನಿರ್ಮಲಾ ಹೊಂಗಲ, ರವಿವರ್ಮ ಪಾಟೀಲ, ಮಂಜುನಾಥಗೌಡ ಮುರಳ್ಳಿ, ಬಸವರಾಜ ದಾಸನಕೊಪ್ಪ, ಮಲ್ಲಪ್ಪ ಬಾವಿಕಟ್ಟಿ, ಕಲ್ಲಪ್ಪ ಪುಡಕಲಕಟ್ಟಿ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ