ಚುನಾವಣಾಧಿಕಾರಿಗೆ ಕಾಂಗ್ರೆಸ್ ದೂರು
Team Udayavani, May 10, 2019, 6:05 AM IST
ಧಾರವಾಡ: ‘ಸಿ.ಎಸ್. ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರವೇ ಕಾರಣ’ ಎಂಬ ಶಾಸಕ ಶ್ರೀರಾಮುಲು ಹೇಳಿಕೆ ಖಂಡಿಸಿ ಅವರ ವಿರುದ್ಧ ಸಂಸದ ವಿ.ಎಸ್. ಉಗ್ರಪ್ಪ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ಜಿಲ್ಲಾ ಚುನಾವಣಾಧಿಕಾರಿಗೆ ಗುರುವಾರ ದೂರು ನೀಡಿದೆ.
ಶ್ರೀರಾಮುಲು ಅಷ್ಟೇ ಅಲ್ಲದೆ ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡ್ರ ವಿರುದ್ಧವೂ ಛಬ್ಬಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಬಿಡ್ನಾಳ ಹೆಸರಿನಲ್ಲಿ ದೂರು ದಾಖಲಿಸಲಾಗಿದೆ. ದೂರಿನ ಪ್ರತಿ ಜೊತೆಗೆ ಶ್ರೀರಾಮುಲು ಹೇಳಿಕೆ ಇರುವ ಪೆನ್ಡ್ರೈವ್ನ್ನೂ ಚುನಾವಣಾಧಿಕಾರಿಗೆ ನೀಡಿದ್ದಾರೆ.
ಬಳಿಕ ಮಾತನಾಡಿದ ಸಂಸದ ವಿ.ಎಸ್. ಉಗ್ರಪ್ಪ, ‘ರಾಮುಲು ಹೇಳಿಕೆಯಲ್ಲಿ ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರದ ಕಿರುಕುಳ ಕಾರಣ ಎಂದಿರುವುದು ಸ್ಪಷ್ಟವಾಗಿದೆ. ಕಿರುಕುಳ ನೀಡಿ ಸತ್ತಿರುವುದು ಗೊತ್ತಿದ್ದರೆ ಇಷ್ಟು ದಿನ ಯಾಕೆ ಸುಮ್ಮನಿದ್ದರು? ಕೃತ್ಯದ ಮಾಹಿತಿ ಗೊತ್ತಿದ್ದೂ ಮುಚ್ಚಿಡುವ ಕಾರ್ಯ ಮಾಡಿದ್ದರೆ ಅದು ಕೂಡ ಅಪರಾಧ. ಇದನ್ನು ದೂರಿನಲ್ಲಿ ಪ್ರಸ್ತಾಪ ಮಾಡಿದ್ದೇವೆ’ ಎಂದರು.
ರಾಮುಲು ರಾಜಕೀಯಕ್ಕಾಗಿ ಸಾವನ್ನು ಬಳಸಿಕೊಳ್ಳುವ ಸಣ್ಣತನ ತೋರಿದ್ದಾರೆ. ಅವರಿಗೆ ದೇವರು ಸದ್ಬುದ್ಧಿ ಕೊಡಲಿ. ಕ್ಷಮೆ ಯಾಚಿಸುತ್ತಾರೆಂದು ಭಾವಿಸಿದ್ದೆ. ಆದರೆ ನನ್ನ ಹೇಳಿಕೆಯನ್ನೇ ತಪ್ಪಾಗಿ ಅರ್ಥೈಸಿದ್ದಾರೆ ಅಂತ ಹೇಳಿದ್ದಾರೆ. ಅವರು ನನ್ನ ಕ್ಷೇತ್ರದ ಮತದಾರ. ಹೀಗಾಗಿ ಅವರ ಹೇಳಿಕೆಗೆ ನಾನು ಕ್ಷಮೆ ಕೇಳುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ