ಕಾಂಗ್ರೆಸ್-ಜೆಡಿಎಸ್ ಸಂಬಂಧ ಸರಿಯಿಲ್ಲ: ಕಾಗೇರಿ
Team Udayavani, Jan 29, 2019, 12:30 AM IST
ಧಾರವಾಡ: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ದೋಸ್ತಿ ಮೊದಲಿನಿಂದಲೂ ಅಸ್ಥಿರದಲ್ಲೇ ಇದ್ದು, ಸಿಎಂ ಕುಮಾರಸ್ವಾಮಿ ಈ ಅಸ್ಥಿರತೆಯನ್ನು ಈಗ ಹೇಳಿಕೊಂಡಿದ್ದಾರಷ್ಟೇ. ಅವರಿಗೆ ಸಿಎಂ ಸ್ಥಾನ ಬಿಡಲೂ ಆಗುತ್ತಿಲ್ಲ. ಮುಂದುವರಿಯಲೂ ಆಗುತ್ತಿಲ್ಲ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಕಸ್ಮಿಕವಾಗಿ ರಚನೆಯಾಗಿದ್ದು, ಅಪವಿತ್ರ ಮೈತ್ರಿ ಫಲದ ಸರ್ಕಾರ ಇದಾಗಿದೆ. ಅವಕಾಶವಾದಿ ರಾಜಕಾರಣದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿವೆ. ಆರಂಭದಿಂದಲೂ ಈ ಸರ್ಕಾರದಲ್ಲಿ ಹೊಂದಾ ಣಿಕೆಯೇ ಇಲ್ಲ. ಆಂತರಿಕ ಕಚ್ಚಾಟ, ಒಳಜಗಳಗಳು ನಡೆದಿವೆ ಎಂದರು.
ನಾವೇನು (ಬಿಜೆಪಿ) ಹೀಗೆ ಜಗಳ ಮಾಡಿ ಎಂದು ಅವರಿಗೆ ಹೇಳಿಲ್ಲ. ಅವರೇ ಈ ಜಗಳಗಳನ್ನು ಸೃಷ್ಟಿ ಮಾಡಿಕೊಳ್ಳುತ್ತಿದ್ದಾರೆ. ಇವರ ಈ ಕಚ್ಚಾಟ ಮುಚ್ಚಿ ಹಾಕಲು ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಜಗಳದಿಂದಲೇ ಈ ಸರ್ಕಾರ ಬೀಳುತ್ತದೆ. ಆಗ ಬಿಜೆಪಿ ಜನಾಭಿಪ್ರಾಯಕ್ಕೆ ಮನ್ನಣೆ ಕೊಡುತ್ತದೆ. ಈ ಮೈತ್ರಿ ಸರ್ಕಾರ ತನ್ನ ಭಾರ ತಾಳಲಾಗದೇ, ತಾನೇ ಬಿದ್ದ ಮೇಲೆ ಬಿಜೆಪಿ ತನ್ನ ಜವಾಬ್ದಾರಿ ನಿರ್ವಹಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್