ಕಾಂಗ್ರೆಸ್ ಪಾದಯಾತ್ರೆ ಎಂಬ ಶಬ್ದ ಕಲಿತದ್ದೇ ಬಿಜೆಪಿಯಿಂದ: ನಳಿನ್ ಕಟೀಲ್


Team Udayavani, Oct 13, 2022, 4:59 PM IST

ನಳಿನ್ ಕಟೀಲ್

ಧಾರವಾಡ: ಬಿ.ಎಸ್.ಯಡಿಯೂರಪ್ಪನವರು ಮಾಡಿದಷ್ಟು ಪಾದಯಾತ್ರೆಯನ್ನು ಯಾರೂ ಮಾಡಿಲ್ಲ. ಅವರು ಮಾಡಿದಷ್ಟು ಸೈಕಲ್ ಯಾತ್ರೆಯನ್ನು ಯಾರೂ ಮಾಡಲಿಕ್ಕಾಗದು. ಪಾದಯಾತ್ರೆಯನ್ನು ಬಿಜೆಪಿಯಿಂದಲೇ ಕಾಂಗ್ರೆಸ್ ಕಲಿತುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಪಾದಯಾತ್ರೆ ಈಗ ಆರಂಭವಾಗಿದೆ. ಬಿಜೆಪಿ ಬೆಳೆದಿದ್ದೇ ಪಾದಯಾತ್ರೆಯಿಂದ. ನಾವು ಅಧಿಕಾರಕ್ಕೆ ಬಂದಿರುವುದೇ ಯಾತ್ರೆಯಿಂದ. ಯಡಿಯೂರಪ್ಪ ಎರಡು ಕಿಲೋ ಮೀಟರ್ ನಡೆಯಲಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಯಡಿಯೂಪ್ಪನವರು ಮಾಡಿದಷ್ಟು ಪಾದಯಾತ್ರೆಯನ್ನು ಯಾರೂ ಮಾಡಿಲ್ಲ. ಸಿದ್ದರಾಮಯ್ಯ ಭಿಕ್ಷೆ ಬೇಡಿ, ಕಾಲು ಬಿದ್ದು ಸಿಎಂ ಆದವರು ಎಂದರು.

ದೇವೇಗೌಡರ ಕಾಲಿಗೆ ಅಡ್ಡ ಬಿದ್ದು ನಮಸ್ಕಾರ ಮಾಡಿ ಸಿದ್ದರಾಮಯ್ಯ ರಾಜಕಾರಣದಲ್ಲಿ ಬೆಳೆದಿದ್ದಾರೆ. ಇಂದಿರಾ ಗಾಂಧಿಗೆ ಕೆಟ್ಟ ಶಬ್ದಗಳಿಂದ ನಿಂದನೆ ಮಾಡುತ್ತಿದ್ದರು. ಕೊನೆಗೆ ಸೋನಿಯಾ ಗಾಂಧಿ ಅವರ ಕಾಲು ಬಿದ್ದು ಸಿಎಂ ಆದರು. ಸಿದ್ದರಾಮಯ್ಯನವರಿಗೆ ಅರಳು ಮರಳು ಅಲ್ಲ, ಅವರಿಗೆ ಮರುಳೇ ಹಿಡಿದಿದೆ. ಅಧಿಕಾರ ಕಳೆದುಕೊಂಡು ಹುಚ್ಚರಾಗಿದ್ದಾರೆ. ಕಳೆದ ಐದು ವರ್ಷದಲ್ಲಿ ಕೆಟ್ಟ ಶಬ್ದ ಬಳಕೆ ಮಾಡುತ್ತಿದ್ದಾರೆ. ದುರಹಂಕಾರ ತೋರಿಸುತ್ತಿದ್ದಾರೆ. ಅವರಿಗೆ ಸ್ಥಿರತೆ ಇಲ್ಲ. ನಾಳೆ ಡಿಕೆಶಿಯನ್ನು ಸಿಎಂ ಮಾಡ್ತಾರೋ ಅಥವಾ ಖರ್ಗೆ ಅವರನ್ನು ಸಿಎಂ ಮಾಡ್ತಾರೋ ಎಂಬ ಭಯ ಸಿದ್ದರಾಮಯ್ಯನವರಿಗಿದೆ. ಈ ಭಯವೇ ಅವರನ್ನು ಹುಚ್ಚರನ್ನಾಗಿ ಮಾಡಿದೆ ಎಂದರು.

ಇದನ್ನೂ ಓದಿ:ಟಿ20 ಅಭ್ಯಾಸ ಪಂದ್ಯ: ನಾಯಕ ರಾಹುಲ್ ಅರ್ಧಶತಕದ ಹೊರತಾಗಿಯೂ ಸೋತ ಟೀಂ ಇಂಡಿಯಾ

ರಾಹುಲ್ ಗಾಂಧಿ ಮೋದಿ ಅವರ ಪಾದದ ಧೂಳಿಗೂ ಸಮಾನರಲ್ಲ ಎಂಬ ಬಿಎಸ್‌ವೈ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಟೀಲ್, ರಾಹುಲ್ ಗಾಂಧಿ ಓರ್ವ ಸಾಧಾರಣ ಎಂಪಿ. ಅವರು ಕಾಂಗ್ರೆಸ್‌ಗೆ ನಾಯಕರಾಗಿರಬಹುದು. ಮೋದಿ ಈ ದೇಶದ ಪ್ರಧಾನಿ. ಇಂದಿರಾ ಗಾಂಧಿ ಪ್ರಧಾನಿ ಇದ್ದಾಗ ವಾಜಪೇಯಿ ಅವರು ಒಮ್ಮೆಯೂ ಏಕವಚನ ಬಳಸಲಿಲ್ಲ. ವಿರೋಧ ಪಕ್ಷಗಳು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ವಾಜಪೇಯಿ ತೋರಿಸಿಕೊಟ್ಟಿದ್ದಾರೆ. ಇಂದು ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಮಾತನಾಡುತ್ತಿದ್ದಾರೆ. ಅದೇ ರೀತಿ ಯಡಿಯೂರಪ್ಪ ಹೇಳಿದ್ದೂ ಸರಿಯಿದೆ. ನೆಹರೂ ಗಾಂಧಿ ಕಾಲಿಗೆ ಸಮಾನರಾಗುವುದಿಲ್ಲ ಎಂಬುದು ತಪ್ಪಾಗುತ್ತದೆ. ಸಿದ್ದರಾಮಯ್ಯ ಸಿಎಂ ಆದವರು ಅವರು ಗೌರವದಿಂದ ನಡೆದುಕೊಂಡರೆ ಉಳಿದವರೂ ಗೌರವದಿಂದ ನಡೆದುಕೊಳ್ಳುತ್ತಾರೆ ಎಂದರು.

ಕಟೀಲ್ ಅವರು ವಿದೂಷಕ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಟೀಲ್, ಸಿದ್ದರಾಮಯ್ಯ ವಿಲನಾ? ಎಂದು ಮರು ಪ್ರಶ್ನಿಸಿದರು.

ಹಿಜಾಬ್ ವಿಚಾರ ನ್ಯಾಯಾಲಯದಲ್ಲಿರುವುದರಿಂದ ನಾನು ಅದರ ಬಗ್ಗೆ ಮಾತನಾಡುವುದಿಲ್ಲ ಎಂದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.