ಚುನಾವಣೆ ಬಂದಾಗ ಕಾಂಗ್ರೆಸ್‌-ಮೋದಿ ವಿರೋಧಿಗಳಿಗೆ ಮಹದಾಯಿ ನೆನಪು


Team Udayavani, Apr 22, 2019, 11:32 AM IST

Udayavani Kannada Newspaper
ಹುಬ್ಬಳ್ಳಿ: ಚುನಾವಣೆ ಬಂದಾಗ ಮಾತ್ರ ಕಾಂಗ್ರೆಸ್‌ ಹಾಗೂ ಮೋದಿ ವಿರೋಧಿಗಳಿಗೆ ಮಹದಾಯಿ ನೆನಪಾಗುತ್ತದೆ. ವಿನಾಕಾರಣ ಬಿಜೆಪಿ ಹಾಗೂ ಮೋದಿಯವರ ಮೇಲೆ ಗೂಬೆ ಕೂರಿಸುವ ಕೆಲಸ ಆಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ತಿರುಗೇಟು ನೀಡಿದ್ದಾರೆ.

ಜನವರಿ ತಿಂಗಳಲ್ಲಿ ಧಾರವಾಡದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಕುಮಾರಸ್ವಾಮಿ ಅವರು, ಮೇಲ್ಮನವಿ ಸಲ್ಲಿಸುವುದರಿಂದ ನ್ಯಾಯಾಧೀಕರಣದ ತೀರ್ಪಿನ ಕುರಿತು ಗೆಜೆಟ್ ನೋಟಿಫಿಕೇಶನ್‌ ಹೊರಡಿಸಲು ತೊಂದರೆಯಾಗುತ್ತದೆ ಎಂದಿದ್ದರು. ಆದರೆ ಇದೀಗ ಕಾಂಗ್ರೆಸ್‌-ಜೆಡಿಎಸ್‌ ನಾಯಕರು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ. 2010 ರಲ್ಲಿ ಯುಪಿಎ ಸರಕಾರವೇ ಈ ವಿಚಾರ ಮಾತುಕತೆಯ ಮೂಲಕ ಬಗೆಹರಿಯುವುದಿಲ್ಲ ಎಂದು ನ್ಯಾಯಾಧೀಕರಣ ರಚನೆಯೊಂದೇ ಪರಿಹಾರ ಎಂದು ಸರ್ವೋಚ್ಚ ನ್ಯಾಯಲಯದಲ್ಲಿ ಅಫಿಡವಿಟ್ ಸಲ್ಲಿಸಿದ್ದನ್ನು ಜನರು ಮರೆತಿಲ್ಲ. 2007ರ ಗೋವಾ ಚುನಾವಣೆ ಸಂದರ್ಭದಲ್ಲಿ ಸೋನಿಯಾ ಗಾಂಧಿ ನೀಡಿದ್ದ ಹೇಳಿಕೆ ಮಾಧ್ಯಮದಲ್ಲಿ ಪ್ರಕಟವಾಗಿರುವುದು ದಾಖಲೆಯಿದೆ. ಇದೆಲ್ಲ ಗೊತ್ತಿದ್ದರೂ ವಿನಯ ಕುಲಕರ್ಣಿ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದು, ಈ ಯತ್ನ ಕೈಗೂಡುವುದಿಲ್ಲ. ಮಹದಾಯಿ ಹೋರಾಟಗಾರರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ವಿನಯ ಕುಲಕರ್ಣಿಯವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಜಿಲ್ಲೆಗೆ ಯಾವ ಕೊಡುಗೆ ನೀಡಿದ್ದಾರೆ. ಯಮನೂರಿನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಲಾಠಿ ಪ್ರಹಾರ ಮಾಡಿಸಿ ದೌರ್ಜನ್ಯ ಎಸಗಿರುವುದನ್ನು ಅಲ್ಲಿನವರು ಸೇರಿದಂತೆ ಕ್ಷೇತ್ರದ ಜನತೆ ಮರೆತಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಹದಾಯಿ ಹೋರಾಟ ಯಾರೊಬ್ಬರ ಸ್ವತ್ತಲ್ಲ. ಅದು ಉಕ ಭಾಗದ 4 ಜಿಲ್ಲೆಗಳ ಜನಸಾಮಾನ್ಯರ ಹೋರಾಟವೇ ಹೊರತು ಕೋನರಡ್ಡಿಯವರ ಮನೆಯ ಹೋರಾಟವಲ್ಲ. ಕೋನರಡ್ಡಿಯವರು ಮಹದಾಯಿ ಹೋರಾಟಗಾರರು ಚುನಾವಣೆಯಲ್ಲಿ ಸಂಸದ ಪ್ರಹ್ಲಾದ ಜೋಶಿ ಸೋಲಿಸುತ್ತೇವೆ ಎಂದು ಹೇಳಿಕೆ ಕೊಟ್ಟಿದ್ದು, ಅವರೊಬ್ಬರೇ ಮಹದಾಯಿಗಾಗಿ ಹೋರಾಟ ಮಾಡಿಲ್ಲ. ಕಳಸಾ-ಬಂಡೂರಿಗೆ ಶಕ್ತಿ ತುಂಬಿದವರೆ ಬಿ.ಎಸ್‌. ಯಡಿಯೂರಪ್ಪ, ಕೆ.ಎಸ್‌. ಈಶ್ವರಪ್ಪ, ಜಗದೀಶ ಶೆಟ್ಟರ, ಪ್ರಹ್ಲಾದ ಜೋಶಿ. 2005-06ರಲ್ಲಿ ಈಶ್ವರಪ್ಪ ಮಹದಾಯಿ ಯೋಜನೆಗೆ ಇಚ್ಛಾಶಕ್ತಿ ತೋರಿ ಕಣಕುಂಬಿಯಲ್ಲಿ ಭೂಮಿಪೂಜೆ ಮಾಡಿದ್ದರು. ಆಗ ಕೋನರಡ್ಡಿ ಎಲ್ಲಿದ್ದರು?
•ಶಿವಾನಂದ ಮುತ್ತಣ್ಣವರ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.