Congress ಪಕ್ಷವು ಎಸ್ ಡಿಪಿಐ, ಪಿಎಫ್ ಐ ಕಪಿಮುಷ್ಠಿಯಲ್ಲಿದೆ: ಸಿಎಂ ಬೊಮ್ಮಾಯಿ
Team Udayavani, May 4, 2023, 11:02 AM IST
ಹುಬ್ಬಳ್ಳಿ: ಎಸ್ ಡಿಪಿಐ, ಪಿಎಫ್ ಐ ಕಪಿಮುಷ್ಠಿಯಲ್ಲಿ ಕಾಂಗ್ರೆಸ್ ಇದ್ದು, ಕಾಂಗ್ರೆಸ್ ನಾಯಕರು ಅವುಗಳ ಒತ್ತಡಕ್ಕೆ ಮಣಿದು ತುಷ್ಠೀಕರಣ ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಬ್ಯಾಂಕ್ ಕಾರಣದಿಂದ ಎಸ್ ಡಿಪಿಐ, ಪಿಎಫ್ಐ ಹೇಳಿದಂತೆ ಕಾಂಗ್ರೆಸ್ ಕೇಳುತ್ತಿದೆ. ಎಸ್ ಡಿಪಿಐ ಬಿಜೆಪಿ ಬಿ ಟೀಂ ಎಂಬ ಅನಿಸಿಕೆಗೆ ಪ್ರತಿಕ್ರಿಯಿಸಿದ ಅವರು, ಬಿ ಟೀಂ ಎಂದಿದ್ದರೆ ನಾವು ಯಾಕೆ ಪಿಎಫ್ ಐ ನಿಷೇಧಿಸುತ್ತಿದ್ದೆವು ಎಂದರು.
ಬಜರಂಗದಳ, ಆಂಜನೇಯನಿಗೆ ಏನು ಸಂಬಂಧ ಎಂಬ ಡಿ.ಕೆ.ಶಿವಕುಮಾರ ಹೇಳಿಕೆಗೆ ಪ್ರತಿಕ್ರಿಸಿದ ಸಿಎಂ, ಶ್ರೀ ರಾಮನಿಗೂ-ಆಂಜನೇಯನಿಗೂ ಇರುವ ಸಂಬಂಧವೇ ಬಜರಂಗ ದಳ-ಆಂಜನೇಯನಿಗೂ ಇರುವ ಸಂಬಂಧವಾಗಿದೆ. ಕಾಂಗ್ರೆಸ್ ನವರು ಏನೇನೋ ಹೇಳಿ ಜನರಭಾವನೆ ಕೆರಳಿಸುವುದು ಬೇಡ. ಕಾಂಗ್ರೆಸ್ ನವರು ಜಾತಿ, ಧರ್ಮ, ಕೋಮು ಭಾವನೆಯಡಿ ಮತಯಾಚನೆ ಮಾಡಿದರೆ ನಾವು ನಮ್ಮ ಕಾರ್ಯಕ್ರಮಗಳ ಆಧಾರದಲ್ಲಿ ಮತಯಾಚನೆ ಮಾಡುತ್ತಿದ್ದೇವೆ ಎಂದರು.
ಇದನ್ನೂ ಓದಿ:IPL 2023 ಲಿಟ್ಟನ್ ದಾಸ್ ಬದಲಿಗೆ ವಿಂಡೀಸ್ ಸ್ಪೋಟಕ ಆಟಗಾರನ ಕರೆತಂದ ಕೋಲ್ಕತ್ತಾ
ಸೋನಿಯಾ ಗಾಂಧಿ ಅವರು ಪ್ರಚಾರಕ್ಕೆ ಹುಬ್ನಳ್ಳಿಗೆ ಬರುತ್ತಿರುವ ಬಗ್ಗೆ ಪ್ರತಿಕ್ರಿಸಿ ಯಾರಾದರೂ ಬರಲಿ, ಕಾಂಗ್ರೆಸ್ ನವರಂತೆ ನಾವೇನು ವಿರೋಧ ವಿರೋಧ ಮಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ
ಐಎನ್ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ
ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ
Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್: ಮೌನ ಮೆರವಣಿಗೆ
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು