ಕಾಂಗ್ರೆಸ್ನವರು ಪಾರ್ಟ್ಟೈಮ್ ರಾಜಕಾರಣಿಗಳು: ರಾಮುಲು
Team Udayavani, Nov 19, 2021, 9:45 PM IST
ಹುಬ್ಬಳ್ಳಿ: ಬಿಜೆಪಿ ಅಭಿವೃದ್ಧಿಪರ ರಾಜಕಾರಣ ಮಾಡಿದರೆ, ಕಾಂಗ್ರೆಸ್ನದ್ದು ಹಗರಣಗಳ ರಾಜಕಾರಣವಾಗಿದೆ. ಚುನಾವಣೆಯಲ್ಲಿ ಮಾತ್ರ ಜನರಿಗೆ ಸಿಗುವ ಕಾಂಗ್ರೆಸ್ ನಾಯಕರು ನಂತರ ಯಾರಿಗೂ ಸಿಗುವುದಿಲ್ಲ. ಕಾಂಗ್ರೆಸ್ ನಾಯಕರು ಪಾರ್ಟ್ಟೈಮ್ ರಾಜಕಾರಣಿಗಳು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಲೇವಡಿ ಮಾಡಿದರು.
ಜನ ಸ್ವರಾಜ್ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ಹೇಳಿಕೆ ನೀಡಲು ಕಾಂಗ್ರೆಸ್ ನಾಯಕರಿಗೆ ನಾಚಿಕೆ ಆಗಬೇಕು. ದಲಿತರು, ಮುಸ್ಲಿಮರು ಒಗ್ಗೂಡಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಎನ್ನುವ ಕರೆ ಅವರ ಅಸ್ತಿತ್ವ, ಅಭದ್ರತೆಯನ್ನು ತೋರಿಸುತ್ತಿದೆ.
ಇದನ್ನೂ ಓದಿ:40 ಪರ್ಸೆಂಟ್ ಆರೋಪ: ರಾಜ್ಯ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ
ಎಲ್ಲಾ ಧರ್ಮ, ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಮುನ್ನಡೆಯುತ್ತಿರುವ ಕಾರಣ ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮುಸ್ಲಿಂ, ದಲಿತ ಮಹಾನ್ ವ್ಯಕ್ತಿಗಳನ್ನು ರಾಷ್ಟ್ರಪತಿ ಮಾಡಿದ ಕೀರ್ತಿ ಬಿಜೆಪಿಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ