ಹಾಲುಮತ ಸಮಾಜಕ್ಕಾದ ಅವಮಾನ ಖಂಡಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಶಿವಾನಂದ ಮುತ್ತಣ್ಣವರ
Team Udayavani, Apr 6, 2024, 3:29 PM IST
ಹುಬ್ಬಳ್ಳಿ: ಸಬ್ ಕೆ ಸಾಥ್ ಎನ್ನುತ್ತಲೇ ಬಿಜೆಪಿಯವರು ಪ್ರಮುಖ ಸಮಾಜಗಳನ್ನು ಕಡೆಗಣಿಸಿದೆ. ಹಾಲುಮತ ಸಮಾಜಕ್ಕಾದ ಅವಮಾನ ಖಂಡಿಸಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.16ರಂದು ಧಾರವಾಡ ಕಲಾಭವನದಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ನುಡಿದರು.
ರಾಜ್ಯದಲ್ಲಿ ಸುಮಾರು 90 ಲಕ್ಷ ಜನಸಂಖ್ಯೆ ಇರುವ ಕುರುಬ ಸಮಾಜಕ್ಕೆ ಬಿಜೆಪಿ ಒಂದು ಟಿಕೆಟ್ ನೀಡಿಲ್ಲ. ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು ದೆಹಲಿಗೆ ಕರೆಸಿ ಬಿಜೆಪಿ ಅವಮಾನ ಮಾಡಿದೆ ಎಂದರು.
ಕುರುಬರಿಗೆ ಎಸ್ ಟಿ ಸ್ಥಾನ ನೀಡಿಕೆಯಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ಅನ್ಯಾಯ ಮಾಡಿತ್ತು. ಸಿದ್ಧರಾಮಯ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು, ಸೌಲಭ್ಯಕ್ಕೆ ಕೇಂದ್ರದಲ್ಲಿ ಯತ್ನಿಸಿ ಎಂದು ಮನವಿ ಮಾಡಿದರೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಂದಿಸದೆ ಅನ್ಯಾಯ ಮಾಡಿದ್ದಾರೆ.
ಬಕೇಟ್ ಹಿಡಿಯುವವರಿಗೆ ಮಾತ್ರ ಬಿಜೆಪಿಯಲ್ಲಿ ಬೆಲೆ, ಸ್ಥಾನಮಾನಗಳಿವೆ. 30 ವರ್ಷಗಳಿಂದ ಬಿಜೆಪಿಗೆ ದುಡಿದರೂ ನನಗೆ ಪಾಲಿಕೆ ಟಿಕೆಟ್ ತಪ್ಪಿಸಲಾಯಿತು, ಪದಾಧಿಕಾರಿ ಮಾಡಲಿಲ್ಲ. ಜೋಶಿಯವರ ಅಹಂಕಾರದಿಂದ ವರ್ತಿಸುತಿದ್ದು, ಸಮಾಜಕ್ಕಾದ ಅನ್ಯಾದ ವಿರುದ್ಧ ಸ್ಪರ್ಧಿಸುತ್ತಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಯಾವ ಹೋರಾಟದಿಂದ ಬಂದವರಲ್ಲ. ಅವರಿಗೆ ಜನ ಬೆಂಬಲ ದೊರೆಯದು ಎಂದರು.
ಈಶ್ವರಪ್ಪ ಅವರು ರಾಜ್ಯದ ಪ್ರಮುಖರ ಸಭೆಯನ್ನು ರವಿವಾರ ಶಿವಮೊಗ್ಗದಲ್ಲಿ ಕರೆದಿದ್ದಾರೆ. ಹಲವು ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ