ಮದ್ಯದಂಗಡಿ ಸ್ಥಳಾಂತರಕ್ಕೆ ಮುಂದುವರಿದ ಪ್ರತಿಭಟನೆ
ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆ ಇದೆ, ನಾವೇನೂ ಮಾಡಲಾಗದು: ಎಡಿಸಿ ಸ್ಪಷ್ಟನೆ
Team Udayavani, May 18, 2019, 10:19 AM IST
ಧಾರವಾಡ: ಹೆಬ್ಬಳ್ಳಿ ಅಗಸಿಯ ಮದ್ಯದಂಗಡಿ ಸ್ಥಳಾಂತರ ಮಾಡುವಂತೆ ಡಿಸಿ ಕಚೇರಿ ಎದುರು ಸ್ಥಳೀಯರು ಪ್ರತಿಭಟನೆ ನಡೆಸಿದರು.
ಧಾರವಾಡ: ಹೆಬ್ಬಳ್ಳಿ ಅಗಸಿಯಲ್ಲಿ ಆರಂಭಿಸಿರುವ ಆರ್.ಎಸ್. ಪ್ರಭಾಕರ್ ಮಾಲೀಕತ್ವದ ನಟರಾಜ್ ವೈನ್ಸ್ ಶಾಪ್ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಸ್ಥಳೀಯರು ನಗರದ ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಮದ್ಯದಂಗಡಿ ಆರಂಭ ಮಾಡದಂತೆ ಸ್ಥಳೀಯರು ಆಕ್ಷೇಪ ಮಾಡಿದ್ದರೂ ಮತ್ತೆ ಅಂಗಡಿ ಆರಂಭಿಸಲಾಗಿದ್ದು, ಕೂಡಲೇ ಅಂಗಡಿ ಸ್ಥಳಾಂತರ ಮಾಡುವಂತೆ ಆಗ್ರಹಿಸಿದ ಪ್ರತಿಭಟನಾನಿರತರು ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.
ಅಹವಾಲು ಸ್ವೀಕರಿಸಲು ಸ್ವಯಂ ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದು ಕುಳಿತ ಪ್ರತಿಭಟನಾಕಾರರು, ಕೊನೆಗೆ ಕಾದು ಕಾದು ಸುಸ್ತಾಗಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಇಟ್ನಾಳ ಮಾತನಾಡಿ, ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆ ಇದೆ. ಹೀಗಾಗಿ ನಾವೇನೂ ಮಾಡಲು ಸಾಧ್ಯವಿಲ್ಲ. ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರಿಸಿ, ಒಂದು ವೇಳೆ ನ್ಯಾಯಾಲಯ ಸೂಚಿಸಿದರೆ ಸ್ಥಳಾಂತರ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪಾಲಿಕೆ ಮಾಜಿ ಸದಸ್ಯರಾದ ಸರೋಜಾ ಪಾಟೀಲ, ನಿರ್ಮಲಾ ಜವಳಿ, ಶಂಕರ ಶೆಳಕೆ, ಸುರೇಶ ಪಟ್ಟಣಶೆಟ್ಟಿ, ರವಿ ಯಲಿಗಾರ, ಸಚಿನ್ ಹೆಗ್ಗೆರಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ