ಮುಂದುವರಿದ ಮಳೆ-ಗಾಳಿ; ಧರೆಗುರುಳಿದ ಮರಗಳು
Team Udayavani, May 18, 2018, 5:25 PM IST
ಹುಬ್ಬಳ್ಳಿ: ನಗರದಲ್ಲಿ ಗುರುವಾರ ಸಂಜೆ ಮಳೆ ಸುರಿದಿದೆ. ರಾಜನಗರದಲ್ಲಿ ಬೃಹದಾಕಾರದ ಮರ ಹಾಗೂ ಒಂದು ವಿದ್ಯುತ್ ಕಂಬ ನೆಲಕ್ಕುರುಳಿದ ಪರಿಣಾಮ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು.
ಸ್ಥಳಕ್ಕೆ ಆಗಮಿಸಿದ ಹೆಸ್ಕಾಂ ಸಿಬ್ಬಂದಿ ಮರ ತೆರವುಗೊಳಿಸಿ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಕಲ್ಪಿಸಿದರು. ಹಳೇ ಹುಬ್ಬಳ್ಳಿಯ ಕಮ್ಮಾರ ಸಾಲ್ ನಲ್ಲಿ ಮರ ನೆಲಕ್ಕುರುಳಿದ ಪರಿಣಾಮ ಕೆಲ ಕಾಲ ರಸ್ತೆ ಸಂಚಾರ ಸ್ಥಗಿತೊಂಡಿತ್ತು.
ಬುಧವಾರ ಮಧ್ಯರಾತ್ರಿ ದೇಶಪಾಂಡೆ ಲೇಔಟ್ ಹಾಗೂ ಮಯೂರ ಎಸ್ಟೇಟ್ನಲ್ಲಿ ಬೃಹದಾಕಾರದ ಎರಡು ಮರಗಳು ನೆಲಕ್ಕುರುಳಿವೆ. ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದರಿಂದ ಮೂರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದರಿಂದ ಸುತ್ತಲಿನ ಭಾಗದಲ್ಲಿ ಇಡೀ ರಾತ್ರಿ ಕತ್ತಲಿನಲ್ಲಿ ಕಾಲ ಕಳೆಯುವಂತಾಗಿತ್ತು.
ಬೆಳಗ್ಗೆ ಪಾಲಿಕೆ ಸಿಬ್ಬಂದಿ ಮರವನ್ನು ತೆರವುಗೊಳಿಸಿದರು. ಹೆಸ್ಕಾಂ ಸಿಬ್ಬಂದಿ ಹೊಸ ಕಂಬಗಳನ್ನು ಅಳವಡಿಸಿ ವಿದ್ಯುತ್ ಸರಬರಾಜು ಆರಂಭಿಸಿದರು. ಆನಂದ ನಗರದಲ್ಲೂ ಗುರುವಾರ ರಾತ್ರಿ ಮರವೊಂದು ಮನೆ ಮೇಲೆ ಬಿದ್ದ ಪರಿಣಾಮ ಮೆಹಬೂಬ್ಸಾಬ್ ಬಂಗಡಿವಾಲೆ ಎಂಬುವರ ಮನೆಗೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು