ಮೋದಿಯಿಂದ ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತ


Team Udayavani, Jun 2, 2020, 8:34 AM IST

ಮೋದಿಯಿಂದ ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಎರಡನೇ ಅವಧಿಯಲ್ಲಿ ಒಂದು ವರ್ಷ ಪೂರ್ಣಗೊಳಿಸಿದ್ದು, ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತ ನೀಡಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಸಚಿವ ಜಗದೀಶ ಶೆಟ್ಟರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹಿಂದಿನ ಅವಧಿಯ ಐದು ವರ್ಷ ಹಾಗೂ ಪ್ರಸ್ತುತದ ಒಂದು ವರ್ಷದ ಆಡಳಿತದಲ್ಲಿ ಒಂದೇ ಒಂದು ಹಗರಣ ಅಥವಾ ಆಡಳಿತಕ್ಕೆ ಕಪ್ಪುಚುಕ್ಕೆ ಇಲ್ಲವೇ ಇಲ್ಲ. ಕೇಂದ್ರ ಸರಕಾರ ಕಳೆದ ಆರು ವರ್ಷಗಳಲ್ಲಿ ಅನೇಕ ಐತಿಹಾಸಿಕ ಹಾಗೂ ದಾಖಲಾರ್ಹ ತೀರ್ಮಾನಗಳನ್ನು ತೆಗೆದುಕೊಂಡಿದೆ. ತ್ರಿವಳಿ ತಲಾಖ್‌ ರದ್ಧತಿ, ಸಂವಿಧಾನ 370 ಕಲಂ ರದ್ದು, ಪೌರತ್ವ ಕಾಯ್ದೆ ತಿದ್ದುಪಡಿ, ಒಂದು ದೇಶ ಒಂದು ತೆರಿಗೆ(ಜಿಎಸ್‌ಟಿ), ಒಂದು ದೇಶ ಒಂದು ಪಡಿತರ ಚೀಟಿ, ಅಯೋಧ್ಯಾದಲ್ಲಿ ರಾಮಮಂದಿರ ನಿರ್ಮಾಣ, ರೈತ ಸಮ್ಮಾನ ಯೋಜನೆ ಹೀಗೆ ಅನೇಕ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಲ್ಲದೆ ಯಶಸ್ವಿ ಅನುಷ್ಠಾನ ತೋರಲಾಗಿದೆ ಎಂದರು.

ಕೊರೊನಾದಿಂದ ಮುಂದುವರಿದ ಅಮೆರಿಕಾ, ಚೀನಾ, ಫ್ರಾನ್ಸ್‌, ಇಟಲಿ, ರಷ್ಯಾದಂತಹ ದೇಶಗಳೇ ತತ್ತರಿಸಿವೆ. ಆದರೆ, 130 ಕೋಟಿ ಜನಸಂಖ್ಯೆ ಹೊಂದಿದ ಭಾರತದಲ್ಲಿ ಲಾಕ್‌ಡೌನ್‌ನಂತಹ ಗಟ್ಟಿ ನಿಲುವಿನ ಮೂಲಕ ಕೊರೊನಾವನ್ನು ಕಟ್ಟಿ ಹಾಕುವಲ್ಲಿ ಸಾಕಷ್ಟು ಯಶಸ್ಸು ಸಾಧಿಸಿದ್ದೇವೆ. ಕೃಷಿ, ಉದ್ಯಮ, ಸೇವಾ ವಲಯ ಹೀಗೆ ಎಲ್ಲ ವಲಯಗಳ ಮೇಲೂ ಕೋವಿಡ್ ಕೆಟ್ಟ ಪರಿಣಾಮ ಬೀರಿದೆ. ಇದನ್ನು ಸುಧಾರಿಸುವ ನಿಟ್ಟಿನಲ್ಲಿ ಎಲ್ಲ ವಲಯಕ್ಕೂ ಕೇಂದ್ರ ನೆರವನ್ನು ಘೋಷಿಸಿದೆ ಎಂದರು.

ರಾಜ್ಯಕ್ಕೂ ಸುಮಾರು 17,249 ಕೋಟಿ ರೂ. ನೆರವು ನೀಡಿದ್ದು, ಪ್ರವಾಹ ಪರಿಹಾರಕ್ಕೆ 1,869 ಕೋಟಿ ರೂ. ನೀಡಿತ್ತು. 3085 ಕೋಟಿ ರೂ. ವೆಚ್ಚದಲ್ಲಿ ಹೊಸ ರೈಲ್ವೆ ಮಾರ್ಗಗಳಿಗೆ ಹಣ ನೀಡಲಾಗುತ್ತಿದೆ. ಇಷ್ಟೆಲ್ಲಾ ಕ್ರಮಗಳನ್ನು ಕೈಗೊಂಡಿದ್ದರೂ ವಿಪಕ್ಷಗಳು ಕೇಂದ್ರ ಸರಕಾರವನ್ನು ಟೀಕೆ ಮಾಡುತ್ತಿವೆ. ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಅಪ್ರಬುದ್ಧ ನಾಯಕರಂತೆ ಹೇಳಿಕೆ ನೀಡುತ್ತಿದ್ದಾರೆ. ಸಂಕಷ್ಟ ಸ್ಥಿತಿಯಲ್ಲಿ ವಿಪಕ್ಷವಾಗಿ ಸರಕಾರಕ್ಕೆ ರಚನಾತ್ಮಕ ಸಲಹೆ ನೀಡುವ ಬದಲು ಟೀಕೆಗಾಗಿ ಇಲ್ಲವೆ ಪ್ರಚಾರಕ್ಕಾಗಿ ಆರೋಪ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ಕೋವಿಡ್ ದಂತಹ ಸಂಕಷ್ಟ ಸ್ಥಿತಿಯಿಂದ ಹಿಂದಿನ ಯುಪಿಎ ಸರಕಾರ ಇದ್ದರೆ ದೇಶದ ಗತಿ ಏನಾಗುತ್ತಿತ್ತು ಎಂಬುದನ್ನು ಊಹಿಸಿಕೊಳ್ಳುವುದಕ್ಕೂ ಸಾಧ್ಯವಾಗದಾಗುತ್ತಿತ್ತು ಎಂದರು. ರಾಜ್ಯ ಸರಕಾರ ಕೂಡ ಕೊರೊನಾ ಸಂಕಷ್ಟ ಪರಿಹಾರಕ್ಕೆ 1,610ಕೋಟಿ ರೂ. ಪ್ಯಾಕೇಜ್‌ ಅನ್ನು ಮೊದಲ ಹಂತದಲ್ಲಿ ಘೋಷಣೆ ಮಾಡಿದ್ದು, ಎರಡನೇ ಹಂತದಲ್ಲಿ 662 ಕೋಟಿ ರೂ. ಘೋಷಿಸಲಾಗಿದೆ. ರಾಜ್ಯದಲ್ಲಿ ಶೇ.80 ಉದ್ಯಮಗಳು ಕಾರ್ಯಾರಂಭ ಮಾಡಿವೆ. ಅನೇಕ ಕಡೆ ಕಚ್ಚಾ ಸಾಮಗ್ರಿಗಳ ಕೊರತೆ ಇದೆ. ಜತೆಗೆ ಅನ್ಯ ರಾಜ್ಯಗಳ ಕಾರ್ಮಿಕರು ಮರುವಲಸೆ ಹೋಗಿದ್ದು, ಒಂದೆರಡು ತಿಂಗಳಲ್ಲಿ ಮತ್ತೆ ವಲಸೆ ಬರುವ ವಿಶ್ವಾಸವಿದೆ. ಎಂಎಸ್‌ಎಂಇ ವಲಯಕ್ಕೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿಕೆ ಕುರಿತಾಗಿ ಕೇಂದ್ರ ಸಚಿವರಿಗೆ ತಾವು ಮನವಿ ಮಾಡಿದ್ದಾಗಿ ತಿಳಿಸಿದರು.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

BJP; ಈಶ್ವರಪ್ಪ ಅವರು ಬದ್ಧತೆ ಇರುವ ವ್ಯಕ್ತಿ: ಪ್ರಹ್ಲಾದ ಜೋಶಿ

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

Hubli; ಕೆ.ಎಸ್. ಈಶ್ವರಪ್ಪ ಬಂಡಾಯ ಶೀಘ್ರ ಶಮನ: ಪ್ರಲ್ಹಾದ ಜೋಶಿ

Hubli; ಕೆ.ಎಸ್. ಈಶ್ವರಪ್ಪ ಬಂಡಾಯ ಶೀಘ್ರ ಶಮನ: ಪ್ರಲ್ಹಾದ ಜೋಶಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.