ಮೋದಿ ಚಿಂತನೆಯಿಂದ ದೇಶ ಬಲಾಡ್ಯ:ಜೋಶಿ
Team Udayavani, Apr 2, 2019, 4:53 PM IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ ಚಿಂತನೆಯಿಂದ ಭಾರತ ಆರ್ಥಿಕ ಕ್ಷೇತ್ರದಲ್ಲಿ 5ನೇ ದೊಡ್ಡ ದೇಶವಾಗಿ ಬೆಳೆದಿದೆ ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಹೇಳಿದರು.
ಕಲಘಟಗಿಯ ನ್ಯಾಯಾಲಯ ಸಂಕೀರ್ಣ ದ ವಕೀಲರ ಸಂಘದಲ್ಲಿ ಚುನಾವಣೆ ಪ್ರಯುಕ್ತ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ತೀರಾ ಹದಗೆಟ್ಟಿದ್ದ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರಧಾನಿ ನರೇಂದ್ರ ಮೋದಿಯವರ ಸ್ಪಷ್ಟ ನೀತಿ, ಪರಿಶ್ರಮ ಹಾಗೂ ಪರಿಣಾಮಕಾರಿ ಯೋಜನೆಗಳಿಂದ ಇಂದು ಭಾರತ 5ನೇ ಸ್ಥಾನಕ್ಕೇರಲು ಸಾಧ್ಯವಾಯಿತು ಎಂದು ಹೇಳಿದರು.
ಶಾಸಕ ಸಿ.ಎಂ. ನಿಂಬಣ್ಣವರ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ವಿ.ಬಿ. ಶಿವನಗೌಡರ ಕಾರ್ಯದರ್ಶಿ ರವಿ ತೋಟಮಟಿ, ಎಸ್.ವಿ. ತೆಗ್ಗಿಹಳ್ಳಿ, ರಾಕೇಶ ಅಳಗವಾಡಿ, ಈರಣ್ಣ ಜಡಿ, ವಿ.ಆರ್. ಗಾಣಿಗೇರ ಇನ್ನಿತರರಿದ್ದರು.
ಕೇಶವ ಕುಂಜಕ್ಕೆ ಭೇಟಿ; ಹಿರಿಯರೊಂದಿಗೆ ಚರ್ಚೆ
ಹುಬ್ಬಳ್ಳಿ: ಸ್ಥಳೀಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಗೋಕುಲ ರಸ್ತೆಯಲ್ಲಿರುವ ಆರೆಸ್ಸೆಸ್ ಕಾರ್ಯಾಲಯ ಕೇಶವ ಕುಂಜಕ್ಕೆ ಭೇಟಿ ನೀಡಿ ಚುನಾವಣೆ ಕುರಿತು ಹಿರಿಯರೊಂದಿಗೆ ಚರ್ಚಿಸಿದರು.
ಸಂಘದ ಜ್ಯೇಷ್ಠ ಪ್ರಚಾರಕ ಸು. ರಾಮಣ್ಣ ಮಾತನಾಡಿ, ಪ್ರಹ್ಲಾದ ಜೋಶಿಯವರು ನಮ್ಮ ನಾಡಿನ ಸಾಂಸ್ಕೃತಿಕ ರಾಯಭಾರಿಗಳು. ಕ್ಷೇತ್ರದ ಜನತೆ ಅವರನ್ನು ಒಪ್ಪಿಕೊಂಡಿದ್ದಾರೆ. ತಾಳ್ಮೆಯಿಂದ ಪ್ರಚಾರ ಕಾರ್ಯ ಮಾಡುವಂತೆ ಸಲಹೆ ನೀಡಿದರು.
ಸಂಘದ ಹರಿಬಾವೂ ವಜೆ, ವಿಜಯ ಮಹಾಂತೇಶ, ಕಾರ್ಯಾಲಯ ಪ್ರಮುಖರಾದ ಸುರೇಶ ರಾವ್, ಹಿಂದೂ ಜಾಗರಣಾ ವೇದಿಕೆ ಸಂಚಾಲಕ ಶಿವು ಕೃಷ್ಣಮೂರ್ತಿ ಮತ್ತು ಸಂಘದ ಹಿರಿಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ