ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಡಿ.9ಕ್ಕೆ ಮುಂದೂಡಿದ ನ್ಯಾಯಾಲಯ
Team Udayavani, Dec 4, 2020, 7:48 PM IST
ಧಾರವಾಡ: ಯೋಗೀಶಗೌಡ ಹತ್ಯೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನಗರದ 3ನೇ ಹೆಚ್ಚುವರಿ ಮತ್ತು ವಿಶೇಷ ಸಿಬಿಐ ನ್ಯಾಯಾಲಯವು ಡಿ.9 ಕ್ಕೆ ಮುಂದೂಡಿದೆ.
2016ರಲ್ಲಿ ಯೋಗೀಶಗೌಡರ ಹತ್ಯೆ ನಡೆದಾಗ ಸಲ್ಲಿಸಲಾಗಿರುವ ದೂರಿನಲ್ಲಿ ಅರ್ಜಿದಾರರ ವಿರುದ್ಧ ಯಾವುದೇ ದೂರು ಸಲ್ಲಿಕೆಯಾಗಿಲ್ಲ. ಅಲ್ಲದೇ ಪ್ರಕರಣದಲ್ಲಿ ಅರ್ಜಿದಾರರ ಕೈವಾಡ ಇದೆ ಎನ್ನಲು ಯಾವುದೇ ನಿರ್ದಿಷ್ಟ ದಾಖಲೆಗಳು ಇಲ್ಲ. ಕೇವಲ ಸಂಚು (120ಬಿ) ಇದೆ ಎಂಬ ಹೇಳಿಕೆಯ ಮೇಲೆ ವಿನಯ ಕುಲಕರ್ಣಿ ಅವರನ್ನು ಬಂಧಿಸಲಾಗಿದೆ. ಇದಲ್ಲದೇ ಹತ್ಯೆಯ ದೂರು ದಾಖಲಿಸಿ, ಹಲವು ವರ್ಷಗಳಿಂದ ಯಾವುದೇ ಆರೋಪ ಮಾಡದ ದೂರುದಾರರು ಈಗ ಅರ್ಜಿದಾರರ ಬಗ್ಗೆ ಆರೋಪ ಮಾಡುತ್ತಿರುವುದು ದುರುದ್ದೇಶದಿಂದ ಕೂಡಿದೆ. ಹೀಗಾಗಿ ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ವಿನಯ್ ಪರ ವಕೀಲರು ನ್ಯಾಯಾಲಯದ ಎದುರು ವಾದ ಮಂಡಿಸಿದರು.
ಈ ವಾದ ಆಲಿಸಿದ 3ನೇ ಹೆಚ್ಚುವರಿ ಮತ್ತು ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶರು, ಈ ಪ್ರಕರಣಕ್ಕೆ ಸಂಬಂಸಿದಂತೆ ಪ್ರತಿವಾದಿಗಳಾದ ಸಿಬಿಐ ಪರ ವಕೀಲರಿಗೆ ಮುಂದಿನ ವಿಚಾರಣೆಯಲ್ಲಿ ವಾದ ಮಂಡಿಸಲು ಸೂಚಿಸಿ, ಹೆಚ್ಚಿನ ವಿಚಾರಣೆಗೆ ಡಿ.9ಕ್ಕೆ ವಿಚಾರಣೆ ಮುಂದೂಡಿದರು.
ಇದನ್ನೂ ಓದಿ: ಮಂಡ್ಯ: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ನಡೆಸಿರುವುದು ಅಮಾನವೀಯ: ಚವ್ಹಾಣ್
ಇದನ್ನೂ ಓದಿ: ಅನಾರೋಗ್ಯಕ್ಕೆ ಕುಗ್ಗದೆ ಕೃಷಿಯಲ್ಲಿ ಬದುಕು ಬದಲಿಸಿಕೊಂಡ ಸಾಧಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ