ಹುಬ್ಬಳ್ಳಿಯಲ್ಲಿ ಹಾಲು ಮಾರುವವರ ಮೇಲೂ ಕೋವಿಡ್ 19 ಕರಿಛಾಯೆ


Team Udayavani, Apr 18, 2020, 11:05 AM IST

ಹುಬ್ಬಳ್ಳಿಯಲ್ಲಿ  ಹಾಲು ಮಾರುವವರ ಮೇಲೂ ಕೋವಿಡ್ 19 ಕರಿಛಾಯೆ

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಹೈನುಗಾರಿಕೆಯನ್ನೇ ನಂಬಿದ್ದ ರೈತರ ದುಡಿಮೆ ಮೇಲೂ ಕೋವಿಡ್ 19 ಪರಿಣಾಮ ಬೀರಿದೆ. ಈ ಮಹಾಮಾರಿ ತಮ್ಮ ಗ್ರಾಮಕ್ಕೂ ಕಾಲಿಡಬಾರದೆಂದು ಹಾಲು ಮಾರಲು ನಗರಕ್ಕೆ ಹೋಗುವುದನ್ನೆ ನಿಲ್ಲಿಸಿದ್ದಾರೆ.

ಹೈನುಗಾರಿಕೆ ಮಾಡುವ ಹುಬ್ಬಳ್ಳಿ, ಧಾರವಾಡ, ಕುಂದಗೋಳ, ಕಲಘಟಗಿ ಸೇರಿದಂತೆ ಇನ್ನಿತರೆ ತಾಲೂಕುಗಳ ಅನೇಕ ಗ್ರಾಮಗಳು ಸ್ವಯಂ ದಿಗ್ಬಂಧನಕ್ಕೆ ಒಳಪಟ್ಟಿವೆ. ಕೆಲ ಗ್ರಾಮಗಳಲ್ಲಿ ಗ್ರಾಮದ ಹಿರಿಯರೆಲ್ಲ ಸೇರಿ ತಮ್ಮ ಗ್ರಾಮಕ್ಕೆ ಹೊರಗಿನವರು ಯಾರೂ ಬರಬಾರದು, ಗ್ರಾಮದಿಂದ ಯಾರೂ ನಗರಕ್ಕೆ ಹೋಗಬಾರದು. ಹಾಗೇನಾದರೂ ಮಾಡಿದರೆ ನಿಮ್ಮ ಕುಟುಂಬದವರ ಮೇಲೆಯೇ ದಿಗ್ಬಂಧನ ಹಾಕುತ್ತೇವೆ. ದಂಡ ವಿಧಿಸುತ್ತೇವೆ. ಒಂದಿಷ್ಟು ದಿನ ನಿಮ್ಮ ದುಡಿಮೆ ಬಂದ್‌ ಮಾಡಿದರೆ ಏನೂ ಆಗಲ್ಲ ಎಂದು ಖಂಡತುಂಡವಾಗಿ ಹೇಳಿದ್ದಾರೆ ಎನ್ನಲಾಗಿದೆ.

ತಾಲೂಕಿನ ರಾಮಾಪುರ ಗ್ರಾಮದಲ್ಲಿ ಸುಮಾರು 8-10 ಕುಟುಂಬಗಳವರು ಹೈನುಗಾರಿಕೆಯನ್ನೆ ನಂಬಿ ಜೀವನ ಸಾಗಿಸುತ್ತಿದ್ದು, ಇವರಲ್ಲಿ ಐದಾರು ಜನರು ಹುಬ್ಬಳ್ಳಿಯ ವಿವಿಧ ಪ್ರದೇಶಗಳಲ್ಲಿನ ಮನೆ ಮನೆಗೆ ತೆರಳಿ ಹಾಲು ಮಾರುತ್ತಾರೆ. ಆದರೀಗ ಹುಬ್ಬಳ್ಳಿಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದರಿಂದ ಸುತ್ತಮುತ್ತಲಿನ ಗ್ರಾಮದವರು ಆತಂಕಕ್ಕೊಳಗಾಗಿ ಹುಬ್ಬಳ್ಳಿಗೆ ಹೋಗುವವರನ್ನು ತಡೆಹಿಡಿದಿದ್ದಾರೆ. ಹಾಲು ಮಾರಾಟ ಬಂದ್‌ ಮಾಡಿ. ಗ್ರಾಮದಲ್ಲೇ ಇರಿ. ನಗರಕ್ಕೆ ಹೋದರೆ ವಾಪಸ್‌ ಗ್ರಾಮಕ್ಕೆ ಬರಬೇಡಿ ಎಂದು ಕಟ್ಟಪ್ಪಣೆ ಹಾಕಿದ್ದಾರೆಂದು ತಿಳಿದು ಬಂದಿದೆ.

ಹೀಗಾಗಿ ಕಳೆದ 2-3 ದಿನಗಳಿಂದ ಹುಬ್ಬಳ್ಳಿಗೆ ಬರುವುದನ್ನೆ ನಿಲ್ಲಿಸಿದ್ದಾರೆ. ಈ ಗ್ರಾಮದವರು ಪ್ರತಿದಿನ ಕನಿಷ್ಟ 200 ಲೀಟರ್‌ ಹಾಲನ್ನು ಹುಬ್ಬಳ್ಳಿ ನಗರದಲ್ಲಿ ಮನೆ ಮನೆಗಳಿಗೆ ಪೂರೈಸುತ್ತಿದ್ದರೆಂದು ತಿಳಿದು ಬಂದಿದೆ.

ಹುಬ್ಬಳ್ಳಿಗೆ ಹಾಲು ಮಾರಲು ಹೋಗಬೇಡಿ ಎಂದು ಕಟ್ಟಪ್ಪಣೆ ಮಾಡಿದ್ದರಿಂದ ಹೋಗುವುದುನಿಲ್ಲಿಸಿದ್ದೇವೆ. ಕಾರಣ ಹಾಲು ಉಳಿಯುತ್ತಿದೆ. ಡೈರಿಯವರಿಗೆ ಕೊಡಬೇಕೆಂದರೆ ಅವರು ಕಾಯಂ ಕೊಡುವವರಿಂದ ಮಾತ್ರ ತೆಗೆದುಕೊಳ್ಳುತ್ತೇವೆ ಎನ್ನುತ್ತಿದ್ದಾರೆ. ಉಳಿದ ಹಾಲನ್ನು ಮನೆಗೆ ಹಾಗೂ ಗ್ರಾಮದ ಕೆಲವರಿಗೆ ಕೊಡುತ್ತಿದ್ದೇವೆ. ಉಳಿದಿದ್ದನ್ನು ಕರುವಿಗೆ ಬಿಡುತ್ತಿದ್ದೇವೆ. ಹುಬ್ಬಳ್ಳಿಯಲ್ಲೂ ಒಂದಿಷ್ಟು ಜನ ಮೇ 3ರವರೆಗೂ ಹಾಲು ಕೊಡುವುದು ಬೇಡವೆಂದು ಹೇಳಿದ್ದಾರೆ. ನಮ್ಮ ದುಡಿಮೆ ಸಂಪೂರ್ಣ ನಿಂತು ಹೋಗಿದೆ.– ಹೆಸರು ಹೇಳಲಿಚ್ಚಿಸದ ರಾಮಾಪುರದ ಹಾಲು ಮಾರಾಟಗಾರ

 

-ಶಿವಶಂಕರ ಕಂಠಿ

 

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.