ಲಾಕ್‌ಡೌನ್‌ ತಂದಿಟ್ಟ ತೆರಿಗೆ ಸಂಕಟ


Team Udayavani, May 1, 2020, 1:44 PM IST

ಲಾಕ್‌ಡೌನ್‌ ತಂದಿಟ್ಟ ತೆರಿಗೆ ಸಂಕಟ

ಹುಬ್ಬಳ್ಳಿ: ಪಾಲಿಕೆ ಆಸ್ತಿ ತೆರಿಗೆ ಸಂಗ್ರಹದ ಮೇಲೂ ಕೋವಿಡ್ 19 ಕರಿನೆರಳು ಬಿದ್ದಿದೆ. ಏಪ್ರಿಲ್‌ ತಿಂಗಳಲ್ಲಿ ಕನಿಷ್ಠ 15-20 ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿತ್ತು. ಆದರೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಮೊದಲ ತಿಂಗಳಲ್ಲಿ ಸಂಗ್ರಹವಾಗಿರುವುದು ಕೇವಲ 2.45 ಕೋಟಿ ರೂ. ಮಾತ್ರ.

ಆರ್ಥಿಕ ವರ್ಷದ ಮೊದಲ ತಿಂಗಳು ಏಪ್ರಿಲ್‌ ತೆರಿಗೆ ಸಂಗ್ರಹವಾಗುವ ಪ್ರಮುಖ ಸಮಯ. ಹೀಗಾಗಿ ಈ ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳು ಪ್ರಮುಖವಾಗಿ ಆಸ್ತಿ ತೆರಿಗೆ ಸಂಗ್ರಹಕ್ಕೆ ಹೆಚ್ಚಿನ ಆದ್ಯತೆ ನೀಡುತ್ತವೆ. ಈ ತಿಂಗಳಲ್ಲಿ ಕರದಾತರಿಗೆ ಕೊಂಚ ರಿಯಾಯಿತಿ ಕೂಡ ನೀಡಲಾಗುತ್ತದೆ.ಹೀಗಾಗಿ ಬಹುತೇಕ ಸಾರ್ವಜನಿಕರು ಏಪ್ರಿಲ್‌ನಲ್ಲಿ ತೆರಿಗೆ ಪಾವತಿ ಮಾಡುತ್ತಾರೆ. ಈ ಬಾರಿಯೂ ಏಪ್ರಿಲ್‌ ನಲ್ಲಿ ತೆರಿಗೆ ಪಾವತಿಸುವ ಕರದಾತರಿಗೆ ಶೇ.5 ರಿಯಾಯಿತಿ ನೀಡಲಾಗಿದೆ. ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹಕ್ಕೆ ಹಿನ್ನಡೆಯಾಗಬಾರದು ಎಂದು ಆನ್‌ ಲೈನ್‌ ವ್ಯವಸ್ಥೆ ಕಲ್ಪಿಸಿದರೂ ನಿರೀಕ್ಷಿತ ತೆರಿಗೆ ಸಂಗ್ರಹವಾಗಿಲ್ಲ.

2019-20ನೇ ಸಾಲಿನ ಏಪ್ರಿಲ್‌ ತಿಂಗಳಲ್ಲಿ 20.92 ಕೋಟಿ, ಮೇ ತಿಂಗಳಲ್ಲಿ 6.61 ಕೋಟಿ ರೂ. ತೆರಿಗೆ ಬೊಕ್ಕಸಕ್ಕೆ ಸಂದಾಯವಾಗಿತ್ತು. ಮೂರು ತಿಂಗಳಲ್ಲಿ ಶೇ.50 ತೆರಿಗೆ ಹರಿದುಬಂದಿತ್ತು. ಉಳಿದಂತೆ ಪ್ರತಿ ತಿಂಗಳು 2-3 ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತದೆ. ಮಹಾನಗರ ವ್ಯಾಪ್ತಿಯಲ್ಲಿ ಗುರುತಿಸಿರುವ 2.59 ಲಕ್ಷ ಆಸ್ತಿಗಳ ಪೈಕಿ ಇದೀಗ 8923 ಆಸ್ತಿಗಳಿಂದ 2.23 ಕೋಟಿ ರೂ. ಸಂಗ್ರಹವಾಗಿದೆ.

2020-21ನೇ ಆರ್ಥಿಕ ವರ್ಷದಲ್ಲಿ ಆಸ್ತಿ ಕರ ಸಂಗ್ರಹ ಗುರಿ ಸುಮಾರು 60 ಕೋಟಿ ರೂ. ಆಗಿದ್ದು, ಮೇ ತಿಂಗಳಲ್ಲಿ ಕೊಂಚ ಲಾಕ್‌ಡೌನ್‌ ಸಡಿಲಿಕೆಯಾದರೆ ತೆರಿಗೆ ಸಂಗ್ರಹ ಹೆಚ್ಚಳವಾಗಬಹುದು ಎನ್ನುವ ನಿರೀಕ್ಷೆ ಅಧಿಕಾರಿಗಳಲ್ಲಿದೆ. ಈ ಮಧ್ಯೆ ನಂತರದಲ್ಲಾದರೂ ಆಸ್ತಿ ತೆರಿಗೆ ಸಂಗ್ರಹವಾಗುವ ಭರವಸೆಯಿದೆ. ಆದರೆ ಇತರೆ ತೆರಿಗೆಗಳಾದ ಜಾಹೀರಾತು ತೆರಿಗೆ, ಕಟ್ಟಡ ಪರವಾನಗಿ ಸೇರಿದಂತೆ ಇತರೆ ಆದಾಯಗಳು ಕೂಡ ಕಳೆದ 41 ದಿನಗಳಿಂದ ಸ್ಥಗಿತವಾಗಿವೆ.

ರಿಯಾಯ್ತಿ ಅವಧಿ ಮೇ ಕೊನೆವರೆಗೆ ವಿಸ್ತರಣೆ :  ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜನರ ಆರ್ಥಿಕ ಸ್ಥಿತಿಯೂ ಕುಸಿದಿದ್ದು, ಜೀವನ ನಡೆಸುವುದು ಕಷ್ಟ ಎನ್ನುವುದನ್ನು ಅರಿತಿರುವ ಸರಕಾರ ಆಸ್ತಿ ತೆರಿಗೆ ಪರಿಷ್ಕರಿಸದಿರಲು ನಿರ್ಧರಿಸಿದೆ ಎನ್ನಲಾಗಿದೆ. ಕಳೆದ ವರ್ಷದಲ್ಲಿ ನಿಗದಿ ಮಾಡಿದ್ದ ತೆರಿಗೆಯನ್ನೇ ಸಂಗ್ರಹ ಮಾಡಲಾಗುತ್ತಿದೆ. ಏ. 30ರ ವರೆಗೆ ನೀಡುತ್ತಿದ್ದ ಶೇ.5 ರಿಯಾಯಿತಿಯನ್ನು ಮೇ 31ರ ವರೆಗೆ ವಿಸ್ತರಿಸಲಾಗಿದೆ. ಏಪ್ರಿಲ್‌ ತಿಂಗಳಲ್ಲಿ ಸಂಗ್ರಹವಾಗದ ತೆರಿಗೆಯನ್ನು ಶತಾಯಗತಾಯ ಮೇ ತಿಂಗಳಲ್ಲಿ ಸಂಗ್ರಹವಾದರೆ ಮಹಾನಗರದ ಅಭಿವೃದ್ಧಿ, ಮಳೆಗಾಲಕ್ಕೂ ಪೂರ್ವ ಕೈಗೊಳ್ಳುವ ಕಾಮಗಾರಿಗೆ ಅನುಕೂಲವಾಗಲಿದೆ ಎನ್ನುವ ಲೆಕ್ಕಚಾರವಿದೆ.

ಆನ್‌ಲೈನ್‌ ಮೂಲಕವೂ ತೆರಿಗೆ ಸಂಗ್ರಹಕ್ಕೆ ಪಾಲಿಕೆ ಕ್ರಮ :  ಜನರು ವಲಯ ಕಚೇರಿಗಳಿಗೆ ಆಗಮಿಸಿ ತೆರಿಗೆ ಪಾವತಿ ಮಾಡಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಮಹಾನಗರ ಪಾಲಿಕೆ ಆನ್‌ಲೈನ್‌ ಮೂಲಕ ತೆರಿಗೆ ಸಂಗ್ರಹಕ್ಕೆ ಮುಂದಾಗಿದೆ. ಪಾಲಿಕೆ ವೆಬ್‌ಸೈಟ್‌ನಲ್ಲಿ ತೆರಿಗೆ ಪಾವತಿಸುವ ವಿಧಾನಗಳನ್ನು ವಿವರಿಸಲಾಗಿದೆ. ಆ ಮೂಲಕ ತಮ್ಮ ಆಸ್ತಿ ತೆರಿಗೆ ಮೊತ್ತದ ಚಲನ್‌ ಪಡೆದು ಅನುಕೂಲವಾದ ಬ್ಯಾಂಕ್‌ಗಳಿಗೆ ಆನ್‌ಲೈನ್‌ ಮೂಲಕ ಪಾವತಿ ಮಾಡಬಹುದಾಗಿದೆ. ಈ ವಿಧಾನ ಕಷ್ಟ ಎನ್ನುವವರಿಗಾಗಿ ಪ್ರತ್ಯೇಕ ವಾಟ್ಸ್‌ ಆ್ಯಪ್‌ ನಂಬರ್‌ಗೆ ತಮ್ಮ ಆಸ್ತಿ ಸಂಖ್ಯೆ (ಪಿಐಡಿ) ಹಾಗೂ ವಾರ್ಡ್‌ ನಂಬರ್‌ ಕಳುಹಿಸಿದರೆ ಅವರಿಗೆ ಚಲನ್‌ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಚೆಕ್‌, ಡಿಡಿ ಮೂಲಕ 10 ಸಾವಿರ ರೂ.ಗಿಂತ ಹೆಚ್ಚು ತೆರಿಗೆ ಪಾವತಿಸುವವರು ಪಾಲಿಕೆಗೆ ಕರೆ ಮಾಡಿ ತಿಳಿಸಿದರೆ ಪಾಲಿಕೆ ಸಿಬ್ಬಂದಿ ಆಗಮಿಸಿ ಚೆಕ್‌ ಅಥವಾ ಡಿಡಿ ಸಂಗ್ರಹ ಮಾಡಿ ಸ್ವೀಕೃತಿ ನೀಡಲಿದ್ದಾರೆ.

ವೇತನಕ್ಕೂ ಕಷ್ಟ ! :  ಕೋವಿಡ್ 19  ಸೋಂಕು ಹರಡದಂತೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು, ಸಿಬ್ಬಂದಿ ಸುರಕ್ಷತೆಗಾಗಿ ವಿವಿಧ ವೆಚ್ಚಗಳು ಒಂದೆಡೆಯಾದರೆ, ಸುಮಾರು ಎರಡು ಸಾವಿರ ಗುತ್ತಿಗೆ ಪೌರಕಾರ್ಮಿಕರಿಗೂ ವೇತನ ಪಾವತಿ ಮಾಡಬೇಕಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ಚಾಲ್ತಿಯಿಲ್ಲದಿದ್ದರೂ ಕೆಲ ಅಗತ್ಯ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಇದರೊಂದಿಗೆ ಇತರೆ ಖರ್ಚುಗಳನ್ನು ನಿಭಾಯಿಸುವುದು ಕೂಡ ದುಸ್ತರವಾಗಲಿದೆ. ಸಂಗ್ರಹವಾಗಿರುವ ತೆರಿಗೆಯಿಂದ ಎಲ್ಲಾ ಖರ್ಚು ನಿಭಾಯಿಸುವುದಾದರೂ ಹೇಗೆ ಎನ್ನುವ ಚಿಂತೆ ಪಾಲಿಕೆ ಅಧಿಕಾರಿಗಳಲ್ಲಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ಪಾಲಿಕೆಗೆ ಸಂದಾಯವಾಗಬೇಕಾದ ಆಸ್ತಿಗೆ ತೆರಿಗೆ ಸಂಗ್ರಹಕ್ಕೆ ಆನ್‌ಲೈನ್‌ ಸೇರಿದಂತೆ ಇತರೆ ಸರಳ ವ್ಯವಸ್ಥೆ ಕಲ್ಪಿಸಲಾಗಿದೆ. ಏಪ್ರಿಲ್‌ ತಿಂಗಳಲ್ಲಿ ಬರಬೇಕಾದ ತೆರಿಗೆ ಪಾಲಿಕೆಗೆ ಸಂದಾಯವಾಗಿಲ್ಲ. ಲಾಕ್‌ಡೌನ್‌ ಪೂರ್ಣಗೊಂಡ ನಂತರ ಬರಬೇಕಾದ ತೆರಿಗೆ ನಿರೀಕ್ಷೆಯಲ್ಲಿದ್ದೇವೆ. ಮಹಾನಗರದ ಅಭಿವೃದ್ಧಿ ದೃಷ್ಟಿಯಿಂದ ಸಾರ್ವಜನಿಕರು ತೆರಿಗೆ ಪಾವತಿ ಮಾಡಿದರೆ ಅನುಕೂಲವಾಗುತ್ತದೆ. -ಡಾ| ಸುರೇಶ ಇಟ್ನಾಳ, ಪಾಲಿಕೆ ಆಯುಕ್ತ

 

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.