ಕಿಮ್ಸ್ನಲ್ಲಿ ಕೋವಿಡ್ 19 ಸೈನಿಕರಿಗೆ ಸನ್ಮಾನ
Team Udayavani, Apr 27, 2020, 12:48 PM IST
ಹುಬ್ಬಳ್ಳಿ: ಜಗಜ್ಯೋತಿ ಬಸವೇಶ್ವರರ ಜಯಂತಿ ಹಿನ್ನೆಲೆಯಲ್ಲಿ ಕೋವಿಡ್ 19 ವಿರುದ್ಧ ಹೋರಾಟ ಮಾಡುತ್ತಿರುವ ಕಿಮ್ಸ್ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ದಿ| ವಿ.ಬಿ. ಡಂಗನವರ ಪ್ರತಿಷ್ಠಾನದಿಂದ ರವಿವಾರ ಇಲ್ಲಿನ ಕಿಮ್ಸ್ ಸಭಾಂಗಣದಲ್ಲಿ ಗೌರವಿಸಲಾಯಿತು.
ಈ ವೇಳೆ ಪ್ರತಿಷ್ಠಾನದ ಅಧ್ಯಕ್ಷ ಸದಾನಂದ ಡಂಗನವರ ಮಾತನಾಡಿ, ಕೊರನಾ ವೈರಸ್ ಎಂದರೆ ಭಯ ಬೀಳುತ್ತಿರುವ ಸಂದರ್ಭದಲ್ಲಿ ಇಲ್ಲಿನ ವೈದ್ಯರು, ಸಿಬ್ಬಂದಿ ಇಬ್ಬರು ಸೋಂಕಿತರಿಗೆ ಚಿಕಿತ್ಸೆ ನೀಡಿ ಗುಣಮುಖರಾನ್ನಾಗಿ ಮಾಡಿದ್ದಾರೆ. ಉಳಿದಂತೆ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಕೊಂಚ ಯಾಮಾರಿದ್ರು ಸೋಂಕು ತಗಲು ಸಾಧ್ಯಗಳಿರುವ ಸಂದರ್ಭದಲ್ಲಿ ಇಲ್ಲಿನ ವೈದ್ಯರು ಹಾಗೂ ಸಿಬ್ಬಂದಿ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ನಿಸ್ವಾರ್ಥ ಸೇವೆಯ ಮುಂದೆ ಇನ್ನೊಂದು ಕಾರ್ಯವಿಲ್ಲ ಎಂದರು.
ಕಿಮ್ಸ್ ನಿರ್ದೇಶಕ ಡಾ| ರಾಮಲಿಂಗಪ್ಪ ಅಂಟರತಾನಿ ಮಾತನಾಡಿ, ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ಸೋಂಕಿನ ಬಗ್ಗೆ ಭಯವಿಲ್ಲ. ಆದರೆ ಪ್ರತಿ ಕ್ಷಣವೂ ಜಾಗೃತಿಯಿಂದ ಕೆಲಸ ನಿರ್ವಹಿಸುತ್ತಿದ್ದೇವೆ. ನಮ್ಮ ಕರ್ತವ್ಯ ಗುರುತಿಸಿ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು ನೋಡಿದರೆ ಸೇವೆ ಸಾರ್ಥಕವಾದಂತಾಗಿದೆ ಎಂದರು.
ಪ್ರಭಾರ ವೈದ್ಯಕೀಯ ಅಧೀಕ್ಷಕ ಡಾ| ಅರುಣಕುಮಾರ, ಉಪ ವೈದ್ಯಕೀಯ ಅಧೀಕ್ಷಕ ಡಾ| ರಾಜಶೇಖರ ದ್ಯಾಬೇರಿ, ಡಾ| ಎಸ್.ವೈ. ಮುಲ್ಕಿಪಾಟೀಲ, ಆರ್ಎಂಒ ಡಾ| ಸಿದ್ದೇಶ್ವರ ಕಟಕೋಳ, ಮುಖ್ಯ ಆಡಳಿತಾಧಿಕಾರಿ ರಾಜಶ್ರೀ ಜೈನಾಪೂರ, ಡಾ| ಈಶ್ವರ ಹಸಬಿ, ಡಾ| ಸಚಿನ್ ಹೊಸಕಟ್ಟಿ, ಡಾ| ಚೇತನ, ಡಾ| ಕಿರಣ, ಅಣ್ಣಮ್ಮ ಪೌಲ್, ಬಿ. ಕಮಲಾ, ಹೇಮೇಂದ್ರ, ಪರಶುರಾಮ ಮಲ್ಯಾಳ, ನಾಗರಾಜ ಜಗತಾಪ, ಮೈನುದ್ದೀನ್, ಪ್ರವೀಣ ವಡ್ಡರ ಅವರನ್ನು ಸನ್ಮಾನಿಸಲಾಯಿತು.
ಪ್ರತಿಷ್ಠಾನದ ಪದಾಧಿಕಾರಿಗಳಾದ ರಾಜಣ್ಣ ಪವಾರ, ಸುಪ್ರೀತ ಶೆಟ್ಟಿ, ಮಲ್ಲಿಕ್ ಸಿಖಂದರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್