ಕೋವಿಡ್ 19; ಪೇರಲ ಬೆಳೆಗಾರರು ಸಂಕಷ್ಟಕ್ಕೆ
Team Udayavani, Apr 22, 2020, 1:07 PM IST
ಧಾರವಾಡ: ಕೋವಿಡ್ 19 ಲಾಕ್ಡೌನ್ ಹಿನ್ನೆಲೆಯಲ್ಲಿ ಪೇರಲ ಬೆಳೆದ ರೈತರು ಸಂಕಷ್ಟ ಅನುಭವಿಸುವಂತಾಗಿದೆ.
ನವಲಗುಂದ ತಾಲೂಕಿನ ಶಿರೂರ ಗ್ರಾಮದಲ್ಲಿ ಸುಮಾರು 200 ಎಕರೆಗೂ ಹೆಚ್ಚು ಪೇರಲ ತೋಟಗಳಿದ್ದು, ರೈತರು ಎಲ್-49 ತಳಿಯ ಗಿಡಗಳಿಂದ ಉತ್ತಮ ಫಸಲು ಪಡೆದಿದ್ದಾರೆ. ಪ್ರತಿ ವರ್ಷ ಎಕರೆಗೆ ಒಂದು ಲಕ್ಷ ರೂ.ದಂತೆ ರೈತರಿಗೆ ಗುತ್ತಿಗೆದಾರರು ಲಾವಣಿ ನೀಡುತ್ತಿದ್ದರು. ಈ ಹಣ್ಣು ಗೋವಾ ಸೇರಿದಂತೆ ಸುತ್ತಮುತ್ತಲಿನ ಮಾರುಕಟ್ಟೆಗಳಿಗೆ ಸರಬರಾಜು ಆಗುತ್ತಿತ್ತು. ಆದರೀಗ ಕೋವಿಡ್ 19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಬೇಡಿಕೆಯೇ ಇಲ್ಲದಂತಾಗಿದೆ.
ಶಿರೂರ ಪೇರಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅತಿ ಬೇಡಿಕೆಯುಳ್ಳ ಹಣ್ಣು. ಆದರೆ ಈಗ ಪೇರಲ ತೋಟಗಳನ್ನು ಗುತ್ತಿಗೆ ಹಿಡಿಯುವವರೇ ಇಲ್ಲ. ಮಾರುಕಟ್ಟೆಯಲ್ಲಿ ಬೇಡಿಕೆಯಿಲ್ಲದೆ ರೈತರನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿವೆ ಎಂದು ಹೇಳುತ್ತಾರೆ ಪೇರು ಬೆಳೆಗಾರ ಪ್ರಕಾಶ ಬಾಳನಗೌಡರ.
ವಿಜ್ಞಾನಿಗಳ ಭೇಟಿ: ನವಲಗುಂದ ತಾಲೂಕಿನ ಶಿರೂರ ಗ್ರಾಮಕ್ಕೆ ಮಂಗಳವಾರ ಕೃಷಿ ವಿವಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ತಂಡ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿತು.ರೈತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಆಲಿಸಿತು. ಪೇರಲ ಹಣ್ಣು ಮಾರಾಟಕ್ಕಾಗಿ ಧಾರವಾಡದ ಎಐತ ಉತ್ಪಾದಕ ಕಂಪನಿ ಹಾಗೂ ಬೆಂಗಳೂರು ಹಾಪ್ಕಾಮ್ಸ್ ಸಂಪರ್ಕಿಸಿ ರೈತರನ್ನು ಪರಿಚಯಿಸಲಾಗಿದೆ. ರೈತರಿಗೆ ಕೃಷಿ ವಿವಿಯ ಅಗ್ರಿವಾರ್ ರೂಮ್ (18004251150) ಟೋಲ್ ಪ್ರೀ ದೂರವಾಣಿ ಸಂಖ್ಯೆ ನೀಡಿ ಕೃಷಿ ಸಂಬಂಧಿತ ಮಾಹಿತಿ ಪಡೆಯಲು ತಿಳಿಸಿತು.
ಹಿರಿಯ ವಿಜ್ಞಾನಿ ಡಾ| ಶುಭಾ ಎಸ್., ಗೃಹ ವಿಜ್ಞಾನಿ ಡಾ| ಗೀತಾ ತಾಮಗಾಳೆ, ಕೀಟಶಾಸ್ತ್ರ ವಿಜ್ಞಾನಿ ಕಲಾವತಿ ಕಂಬಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ