ನೆಲಕಚ್ಚುವ ಸ್ಥಿತಿಗೆ ಹೋಟೆಲ್‌ ಉದ್ಯಮ


Team Udayavani, May 16, 2020, 10:22 AM IST

Huballi-tdy-5

ಹುಬ್ಬಳ್ಳಿ: ಕೋವಿಡ್ ಲಾಕ್‌ಡೌನ್‌ನಿಂದಾಗಿ ಹೋಟೆಲ್‌ ಉದ್ಯಮ ನೆಲಕಚ್ಚುವ ಸ್ಥಿತಿಗೆ ತಲುಪಿದ್ದು, ಹೋಟೆಲ್‌ ಉದ್ಯಮಿಗಳು ಮುಂದೇನು ಎಂದು ಚಿಂತಾಕ್ರಾಂತರಾಗಿದ್ದಾರೆ. ಅವಳಿ ನಗರದ ಬಹುತೇಕ ಹೋಟೆಲ್‌ ಗಳು ಬಂದ್‌ ಆಗಿವೆ. ಕೆಲವೊಂದು ಹೋಟೆಲ್‌ಗ‌ಳಲ್ಲಿ ಪಾರ್ಸ್‌ಲ್‌ ಮಾತ್ರ ನೀಡಲಾಗುತ್ತಿದೆ.

ಉದ್ಯಮ ಮೇಲೇಳುವುದು ಕಷ್ಟ: ಕೋವಿಡ್ ವೈರಸ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಉದ್ಯಮ ಸಂಪೂರ್ಣ ಬಂದ್‌ ಆಗಿದ್ದು, ಹೋಟೆಲ್‌ ಉದ್ಯಮ ಸಂಪೂರ್ಣ ನೆಲಕಚ್ಚಿದೆ. ಈ ಉದ್ಯಮ ಮತ್ತೇ ತಲೆ ಎತ್ತಿ ನಿಲ್ಲಬೇಕೆಂದರೆ ಕನಿಷ್ಟ ಪಕ್ಷ ಎರಡು ವರ್ಷವಾದರೂ ಬೇಕಾಗುತ್ತದೆ. ಜನರಲ್ಲಿ ಸೋಂಕು ಹರಡುವ ಆತಂಕ ಇದ್ದು, ಇದರಿಂದ ಸುಮಾರು ಒಂದು ವರ್ಷದವರೆಗೂ ಜನರು ಹೋಟೆಲ್‌ ಗಳತ್ತ ಧಾವಿಸುವುದು, ಹೊರಗೆ ತಿನ್ನುವ ಹವ್ಯಾಸದಿಂದ ಸ್ವಲ್ಪ ದೂರವಾಗಲಿದ್ದಾರೆ. ಇದರಿಂದ ಹೋಟೆಲ್‌ ಉದ್ಯಮ ಪುನೇಶ್ವತನಗೊಳ್ಳುವುದು ತುಂಬಾ ಕಷ್ಟಕರವಾಗಿದೆ. ಹೋಟೆಲ್‌ ಉದ್ಯಮ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಹಾಗೂ ಕೇಂದ್ರ ಸರಕಾರಗಳು ಉದ್ಯಮ ಉತ್ತೇಜನಕ್ಕೆ ಯಾವುದೇ ಪರಿಹಾರದ ಬಗ್ಗೆ ಮಾತನಾಡುತ್ತಿಲ್ಲ ಎಂಬುದು ಉದ್ಯಮದವರ ನೋವಾಗಿದೆ.

ಹೋಟೆಲ್‌ ಉದ್ಯಮ ಚೈನ್‌ ಕಳಚುತ್ತಿದೆ: ಹೋಟೆಲ್‌ ಉದ್ಯಮದಿಂದ ರೈತರು, ದವಸ-ಧಾನ್ಯ, ಹಾಲು ಸೇರಿದಂತೆ ಒಂದು ಕೊಂಡಿಯೇ ಬೆಸೆದುಕೊಂಡಿರುತ್ತದೆ. ಆದರೆ ಇದೀಗ ಕೋವಿಡ್ ವೈರಸ್‌ನಿಂದ ಇಡೀ ಸರಪಳಿ ಕಳಚಿ ಬಿದ್ದಂತಾಗಿದೆ. ಹೋಟೆಲ್‌ ಉದ್ಯಮದವರು ರೈತರೊಂದಿಗೆ ನೇರ ಸಂಪರ್ಕ ಹೊಂದಿ ಬೆಳೆ ಖರೀದಿಸುತ್ತಿದ್ದರು.ಆದರೆ ಇದೀಗ ಎಲ್ಲವೂ ಸ್ಥಗಿತಗೊಂಡಿದೆ. ಕೆಲವು ಹೋಟೆಲ್‌ ಉದ್ಯಮದವರು ಕಿರಾಣಿ ವ್ಯಾಪಾರಿಗಳೊಂದಿಗೆ ಸಗಟು ವ್ಯಾಪಾರ ಇಟ್ಟುಕೊಂಡಿದ್ದರು. ಇದು ಕೂಡಾ ಸ್ಥಗಿತವಾಗಿದೆ. ಅದೇ ರೀತಿ ಇನ್ನಿತರ ಸಂಪರ್ಕಗಳು ತಪ್ಪಿದಂತಾಗಿವೆ. ನಗರದಲ್ಲಿ ನೂರಾರು ಹೋಟೆಲ್‌ಗ‌ಳಿದ್ದು, ಕೋವಿಡ್ ವೈರಸ್‌ ಲಾಕ್‌ಡೌನ್‌ನಿಂದ ಎಲ್ಲವೂ ಬಂದ್‌ ಆಗಿವೆ. ಆದರೆ ಹೋಟೆಲ್‌ ಗಳ ಬಾಡಿಗೆ ಮಾತ್ರ ಸ್ಥಗಿತವಾಗಿಲ್ಲ. ಮಾಲೀಕರಿಗೆ ಪ್ರತಿ ತಿಂಗಳು ಭಾಡಿಗೆ ನೀಡಲೆಬೇಕು, ಕೆಲವೊಂದು ಕುಟುಂಬಗಳು ಬರುವ ಬಾಡಿಗೆಯನ್ನೇ ನೆಚ್ಚಿಕೊಂಡು ಕುಳಿತಿವೆ. ಸರ್ಕಾರ ಬಾಡಿಗೆದಾರರಿಂದ ಬಾಡಿಗೆ ಪಡೆಯಬಾರದು ಎಂದು ಹೇಳಿಕೆ ನೀಡುತ್ತಿದೆ. ಆದರೆ ಅಂತಹ ಕೆಲಸ ಮಾಡಿದರೆ ನಮ್ಮಲ್ಲಿರುವ ಬಾಂಧವ್ಯ, ಪ್ರೀತಿ ಕಳೆದುಕೊಳ್ಳಬೇಕಾಗುತ್ತದೆ ಎನ್ನುವುದು ಹೋಟೆಲ್‌ ಉದ್ಯಮದವರ ಅನಿಸಿಕೆ.

ಸರಕಾರ ಕೈ ಹಿಡಿಯಬೇಕು.. ಕೋವಿಡ್ ವೈರಸ್‌ ಲಾಕ್‌ಡೌನ್‌ನಿಂದ ಹೋಟೆಲ್‌ ಉದ್ಯಮ ಸಂಪೂರ್ಣ ನೆಲಕಚ್ಚಲಿದೆ. ಮುಂದಿನ ದಿನಗಳಲ್ಲಿ ಸುಮಾರು ಶೇ.30ರಷ್ಟು ಹೋಟೆಲ್‌ಗ‌ಳು ಮರಳಿ ಆರಂಭವಾಗುವುದೇ ಕಷ್ಟ. ಲಕ್ಷಾಂತರ ರೂ. ಸಾಲ ಮಾಡಿ ಉದ್ಯಮ ನಡೆಸುತ್ತಿರುವವರು ಮುಂದಿನ ಜೀವನ ಹೇಗೆ ಎನ್ನುವ ಚಿಂತೆಗೆ ಈಡಾಗಿದ್ದಾರೆ. ಕೇಂದ್ರ-ರಾಜ್ಯ ಸರ್ಕಾರದವರು ಹೋಟೆಲ್‌ ಉದ್ಯಮ ಪುನಶ್ವೇತನಕ್ಕೆ ಬಡ್ಡಿ ರಹಿತ ಸಾಲ ನೀಡುವ ಸೌಲಭ್ಯ ಕಲ್ಪಿಸಬೇಕು. ಇದರಿಂದ ಸ್ವಲ್ಪವಾದರೂ ಪುನಶ್ಚೇತನಗೊಳ್ಳಲು ಸಹಾಯವಾಗುತ್ತದೆ. ಆದ್ದರಿಂದ ಹೋಟೆಲ್‌ಗ‌ಳನ್ನು ಕೇವಲ ಊಟ-ಉಪಹಾರ, ವಸತಿಗೆ ಬಳಸಿಕೊಳ್ಳದೇ ಉದ್ಯಮದ ಬೆಳವಣಿಗೆಗೆ ಸರಕಾರ ಕೈ ಹಿಡಿಯಬೇಕು. -ಸುಧಾಕರ ಶೆಟ್ಟಿ, ಹೋಟೆಲ್‌ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ

 

-ಬಸವರಾಜ ಹೂಗಾರ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.