ಕಲಾವಿದರಿಗೆ ಈ ವರ್ಷವೂ ತಪ್ಪದ ಕೊರೊನಾ ಕಾಟ
ಗೊಂದಲದಲ್ಲಿ ಗಣೇಶಮೂರ್ತಿ ತಯಾರಕರು! ಗೊಂದಲ ಬಗೆಹರಿಸುವುದೇ ಜಿಲ್ಲಾಡಳಿತ
Team Udayavani, Jul 21, 2021, 8:01 PM IST
ವರದಿ: ಬಸವರಾಜ ಹೂಗಾರ
ಹುಬ್ಬಳ್ಳಿ: ಕೊರೊನಾ ಹೊಡೆತಕ್ಕೆ ಸಿಲುಕಿ, ಮೂರ್ತಿಗಳನ್ನು ತಯಾರಿಸುವ ಕಲಾವಿದರ ಬದುಕು ಅಲ್ಲೋಲ-ಕಲ್ಲೋಲವಾಗಿದೆ. ಕಳೆದ ವರ್ಷವೂ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದ ಗಣೇಶ ಮೂರ್ತಿಗಳನ್ನು ತಯಾರಿಸುವ ಕಲಾವಿದರು ಈ ವರ್ಷವೂ ಏನು-ಹೇಗೆ ಎಂಬ ಗೊಂದಲದಲ್ಲಿದ್ದು, ಸರಕಾರದ ನಿರ್ದೇಶನದತ್ತ ಕಾಯುತ್ತ ಕುಳಿತಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷ ಸರಕಾರ ಗಣೇಶೋತ್ಸವಕ್ಕೆ ಒಲ್ಲದ ಮನಸ್ಸಿನಿಂದ ಪರವಾನಗಿ ನೀಡಿತ್ತು. ಕೊನೆ ಕ್ಷಣದಲ್ಲಿ ಅವಕಾಶ ನೀಡಿದ್ದರಿಂದ ಸಾರ್ವಜನಿಕ ಗಣೇಶೋತ್ಸವಕ್ಕೆ ದೊಡ್ಡ ಹೊಡೆತ ಬಿದ್ದಿತ್ತು. ಕಳೆದ ವರ್ಷ ಮುಂಚಿತವಾಗಿ ಸಾರ್ವಜನಿಕ ಗಣೇಶ ಸಿದ್ಧಪಡಿಸಲು ನೂರಾರು ಸಂಘ-ಸಂಸ್ಥೆಯವರು ಮುಂಗಡ ನೀಡಿ ಬುಕ್ಕಿಂಗ್ ಮಾಡಿ ಕೊನೆಯ ಕ್ಷಣದವರೆಗೆ ಕಾಯ್ದು ಬುಕ್ಕಿಂಗ್ ರದ್ದುಪಡಿಸಿ ಹಣ ಮರಳಿ ಪಡೆದಿದ್ದರು. ಇದು ಕಲಾವಿದರ ಸಂಕಷ್ಟ ಹೆಚ್ಚುವಂತೆ ಮಾಡಿತ್ತು. ಕಲಾವಿದರು ಸಾಲ ಮಾಡಿ ತಯಾರಿಸಿದ್ದ ದೊಡ್ಡ ದೊಡ್ಡ ಗಣೇಶ ಮೂರ್ತಿಗಳು ಮಾರಾಟವಾಗದೆ ಹಾಗೇ ಉಳಿದುಕೊಂಡು ಬಿಟ್ಟಿದ್ದವು.
ಮಹಾರಾಷ್ಟ್ರದಲ್ಲಿ ಈಗಾಗಲೇ ಹಲವಾರು ನಿಯಮಗಳೊಂದಿಗೆ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದ್ದು, ಅದೇ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಗಣೇಶೋತ್ಸವ ಆಚರಣೆಗೆ ಎಲ್ಲ ನಿಯಮಗಳೊಂದಿಗೆ ಅವಕಾಶ ನೀಡಬೇಕೆಂಬುದು ಕಲಾವಿದರ ಬೇಡಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ