14,072 ಜನರ ಕೋವಿಡ್ ಪರೀಕ್ಷೆ

ಮಹಾಮಾರಿಗೆ ಜಿಲ್ಲಾಡಳಿತದಿಂದ ದಿಗ್ಬಂಧನ

Team Udayavani, May 29, 2020, 8:53 AM IST

14,072 ಜನರ ಕೋವಿಡ್ ಪರೀಕ್ಷೆ

ಹುಬ್ಬಳ್ಳಿ: ಕೋವಿಡ್ ಸೋಂಕು ತಡೆ ಹಾಗೂ ಸೋಂಕಿತರ ಮೇಲೆ ನಿಗಾ ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಯಶಸ್ವಿ ಕಾರ್ಯಾಚರಣೆ ಕೈಗೊಂಡಿದೆ. ಜಿಲ್ಲೆಯಲ್ಲಿ ಈವರೆಗೆ 14,072 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆ ಮಾಡುವುದರೊಂದಿಗೆ ಇತರೆ ಜಿಲ್ಲೆಗಳಿಗೆ ಮಾದರಿಯಾಗಿದೆ.

ಜಿಲ್ಲೆಯಲ್ಲಿ ಪಿ-21 ಪ್ರಕರಣ ಜನರನ್ನು ಆತಂಕಕ್ಕೆ ದೂಡಿತ್ತು. ಮೊದಲ ಪ್ರಕರಣದ ಸಂದರ್ಭದಲ್ಲಿ ಜಿಲ್ಲಾಡಳಿತ ತೆಗೆದುಕೊಂಡ ದಿಟ್ಟ ಕ್ರಮಗಳ ಪರಿಣಾಮ ಹೆಚ್ಚು ಜನ ಸಂಪರ್ಕವಿರುವ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗಲು ಕಾರಣವಾಯಿತು. ಇನ್ನೂ ಹುಬ್ಬಳ್ಳಿಯಲ್ಲಿ ಮುಲ್ಲಾ ಓಣಿಯ ಮೊದಲ ಪ್ರಕರಣ ಪತ್ತೆಯಾಗುತ್ತಿದ್ದಂತೆ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಕೊಂಚ ಯಾಮಾರಿದ್ದರೂ ಹುಬ್ಬಳ್ಳಿ ಕೋವಿಡ್ ಹಾಟ್‌ಸ್ಪಾಟ್‌ ಆಗಿರುತ್ತಿತ್ತು.

ವಾಣಿಜ್ಯ ನಗರಿಯ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡು ಜಿಲ್ಲಾಡಳಿತ ಆರೋಗ್ಯ, ಪೊಲೀಸ್‌, ಕಂದಾಯ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ನಡುವೆ ಸಮನ್ವಯ ಬೆಸೆದು ಸನ್ನಿವೇಶ ಎದುರಿಸಲು ಸಜ್ಜುಗೊಳಿಸಿತು. ಹೊಸ ಯಲ್ಲಾಪುರ ಭಾಗದಲ್ಲಿ ಕೈಗೊಂಡ ಮಾದರಿ ಕಾರ್ಯವನ್ನು ಮುಲ್ಲಾ ಓಣಿಯಲ್ಲಿ ಮತ್ತಷ್ಟು ಬಿಗಿಯಾಗಿ ಅನುಷ್ಠಾನಗೊಳಿಸಿತು. ಶಾಂತಿ ನಗರ ಹಾಗೂ ನವಲೂರಿನ ಸೋಂಕಿತರ ಪ್ರಯಾಣದ ಹಿಸ್ಟರಿ ಜಿಲ್ಲೆಯ ಜನತೆಯನ್ನು ಮತ್ತಷ್ಟು ಬೆಚ್ಚಿ ಬೀಳಿಸಿತ್ತು. ಇಂತಹ ಸಂದರ್ಭದಲ್ಲಿ ಮಹಾನಗರ, ಜಿಲ್ಲಾ ಗಡಿಗಳು ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ನಿರ್ಮಿಸಿದ ಚೆಕ್‌ಪೋಸ್ಟ್‌, ಸೀಲ್‌ಡೌನ್‌, ಕ್ವಾರಂಟೈನ್‌ನಂತಹ ಕಟ್ಟುನಿಟ್ಟಿನ ಕಾರ್ಯನಿರ್ವಹಣೆ ಪರಿಣಾಮ ಸೋಂಕಿತರ, ಶಂಕಿತರ ಬೇಕಾಬಿಟ್ಟಿ ಓಡಾಟಕ್ಕೆ ಕಡಿವಾಣ ಹೇರಲಾಯಿತು.

14,072 ಜನರ ಪರೀಕ್ಷೆ: ಸೋಂಕಿತ, ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರನ್ನು ಸಕಾಲಕ್ಕೆ ಪತ್ತೆ ಹಚ್ಚಿ ದಿಗ್ಬಂಧನಕ್ಕೊಳಪಡಿಸಿದ್ದು ನಿಜಕ್ಕೂ ಮೆಚ್ಚುಗೆ ಕಾರ್ಯ. ಸೋಂಕಿತನ ಮಾಹಿತಿ, ತಂತ್ರಜ್ಞಾನದ ಸಹಾಯದಿಂದ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ-656, ದ್ವಿತೀಯ ಸಂಪರ್ಕ-1201 ಜನರ ಗಂಟಲು ದ್ರವ ಸಂಗ್ರಹಿಸಿ ತಪಾಸಣೆ ಮಾಡಿದಾಗ ಪ್ರಾಥಮಿಕ 10 ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ಓರ್ವ ಸೇರಿ 11 ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. 14,072 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿರುವುದು ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಮಾದರಿ ಕಾರ್ಯವಾಗಿದೆ. 619 ಜನರನ್ನು ಇಲ್ಲಿಯವರೆಗೆ ಹಂತ ಹಂತವಾಗಿ ಪರೀಕ್ಷೆಗೆ ಒಳಪಡಿಸಿ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿತ್ತು.

ಕೈಹಿಡಿದ ತಂತ್ರಗಾರಿಕೆ: ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕ ಪತ್ತೆ ಒಂದೆಡೆಯಾದರೆ ಆರೋಗ್ಯ ಕಾರ್ಯಕರ್ತರು ನಡೆಸಿದ ಸರ್ವೇ ಕಾರ್ಯದಲ್ಲಿ ಸೋಂಕಿನ ಲಕ್ಷಣವುಳ್ಳ 332 ಜನರ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದಾರೆ. ಇನ್ನೂ ಖಾಸಗಿ ಕ್ಲಿನಿಕ್‌, ಔಷಧಿ ಅಂಗಡಿಗಳ ಮೂಲಕ ಹೆಣೆದ ತಂತ್ರಗಾರಿಕೆಯೂ ಜಿಲ್ಲಾಡಳಿತಕ್ಕೆ ನೆರವಾಗಿದೆ. ಸೋಂಕಿನ ಪ್ರಮುಖ ಲಕ್ಷಣಗಳಾದ ಕೆಮ್ಮು, ನೆಗಡಿ, ವಿಪರೀತ ಜ್ವರ (ಐಎಲ್‌ಐ)ಇರುವ 870 ಹಾಗೂ ತೀವ್ರ ಉಸಿರಾಟದ ತೊಂದರೆ (ಎಸ್ ಎಆರ್‌ಐ) ಇರುವ 332 ಜನರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಒಂದು ಪಾಸಿಟಿವ್‌ ಪ್ರಕರಣ ಬಯಲಿಗೆ ಬಂದಿತ್ತು. ಇನ್ನೂ ಗರ್ಭಿಣಿಯರ ಬಗ್ಗೆ ಅತೀ ಹೆಚ್ಚು ಕಾಳಜಿ ತೋರಿದ ಜಿಲ್ಲಾಡಳಿತ ಶಂಕೆಯ ಮೇಲೆ 199 ಗರ್ಭಿಣಿಯರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದೆ.

1,280 ಜನರ ವರದಿ ನಿರೀಕ್ಷೆಯಲ್ಲಿ: ಜಿಲ್ಲೆಯಲ್ಲಿ ತಬ್ಲಿಘಿ ಜಮಾತೆಯಲ್ಲಿ ಪಾಲ್ಗೊಂಡ ಒಬ್ಬರೂ ಸೋಂಕಿತರಿಲ್ಲ ಹಾಗೂ ಪ್ರಾರ್ಥನೆಯಲ್ಲಿ ಪಾಲ್ಗೊಂಡವರ ವರದಿ ಬಾಕಿಯೂ ಇಲ್ಲ. ಜಿಲ್ಲೆಯಲ್ಲಿ ಪಾಸಿಟಿವ್‌ ಪ್ರಕರಣ ಪತ್ತೆಯಾಗುತ್ತಿರುವುದು ವಿವಿಧ ರಾಜ್ಯಗಳಿಂದ ಬಂದವರು. ಹೀಗಾಗಿ ಇವರ ಮೇಲೆ ತೀವ್ರ ನಿಗಾ ವಹಿಸಿ ಪ್ರತಿಯೊಬ್ಬರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. ಇಲ್ಲಿಯವರೆಗೆ ಹೊರ ಜಿಲ್ಲೆ, ರಾಜ್ಯಗಳಿಂದ ಬಂದ ಒಟ್ಟಾರೆ 9428 ಜನರನ್ನು ಪತ್ತೆ ಹಚ್ಚಲಾಗಿದ್ದು, 9248 ಜನರ ಗಂಟಲು ದ್ರವ ಪರೀಕ್ಷೆಗೊಳಪಡಿಸಿದಾಗ 27 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಪರೀಕ್ಷಾ ವರದಿ ಬಾಕಿ ಇರುವವರಲ್ಲಿ 1035 ಜನ ವಿವಿಧ ರಾಜ್ಯಗಳಿಂದ ಬಂದವರಾಗಿದ್ದಾರೆ. ಉಳಿದಂತೆ ವಲ್ನರೇಬಲ್‌ 78, ಐಎಲ್‌ಐ 95, ಎಸ್‌ಎಆರ್‌ಐ 25 ಹಾಗೂ ಗರ್ಭಿಣಿಯರು 199, ಪ್ರಾಥಮಿಕ 53 ಜನರ ಪ್ರಯೋಗಾಲಯದ ವರದಿ ನಿರೀಕ್ಷೆಯಲ್ಲಿದೆ.

ಜಿಲ್ಲೆಯಲ್ಲಿ ಹೆಚ್ಚು ಜನರನ್ನು ಕೋವಿಡ್‌-19 ತಪಾಸಣೆಗೆ ಒಳಪಡಿಸುವ ಮೂಲಕ ರಾಜ್ಯದ ಉಳಿದ ಜಿಲ್ಲೆಗಳಿಗೆ ಧಾರವಾಡ ಮಾದರಿಯಾಗಿದೆ. ಜಿಲ್ಲಾಡಳಿತ, ಕಿಮ್ಸ್‌, ಆರೋಗ್ಯ, ಪಾಲಿಕೆ, ಪೊಲೀಸ್‌ ಸೇರಿದಂತೆ ವಿವಿಧ ಇಲಾಖೆಗಳು ಕೋವಿಡ್‌ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿವೆ.– ಜಗದೀಶ ಶೆಟ್ಟರ, ಜಿಲ್ಲಾ ಉಸ್ತುವಾರಿ ಸಚಿವ

ಕೇಂದ್ರ, ರಾಜ್ಯ ಸರಕಾರಗಳ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ವಿವಿಧ ಇಲಾಖೆಗಳ ಸಮನ್ವಯ ಕಾರ್ಯ, ಖಾಸಗಿ ಆಸ್ಪತ್ರೆ, ಔಷಧಿ ಅಂಗಡಿಗಳ ಮಾಹಿತಿ ಆಧರಿಸಿ ಕೆಮ್ಮು, ನೆಗಡಿ, ತೀವ್ರ ಜ್ವರ, ಉಸಿರಾಟ ಸಮಸ್ಯೆಯುಳ್ಳವರ ಮಾಹಿತಿ ಆಧರಿಸಿ ಕೋವಿಡ್‌-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅವರ ಆರೋಗ್ಯ ಕಾಪಾಡಲು ಅಗತ್ಯ ಕ್ರಮ ಹಾಗೂ ಸಲಹೆ ನೀಡಲಾಗುತ್ತಿದೆ. – ದೀಪಾ ಚೋಳನ್‌, ಜಿಲ್ಲಾಧಿಕಾರಿ

 

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.