ಸಿಪಿಐ ಅನುಚಿತ ವರ್ತನೆ; ವಕೀಲರ ದಿಢೀರ್‌ ಪ್ರತಿಭಟನೆ

ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲು ; ಅಧಿಕಾರಿ ಅಮಾನತು ಮಾಡಿ ಬಂಧಿಸಲು ಪಟ್ಟು

Team Udayavani, Nov 1, 2022, 10:05 AM IST

3

ಧಾರವಾಡ: ಮಹಿಳಾ ವಕೀಲರೊಬ್ಬರ ಜೊತೆ ಪೊಲೀಸ್‌ ಅಧಿಕಾರಿ ಅನುಚಿತವಾಗಿ ವರ್ತಿಸಿದ್ದು, ಕೂಡಲೇ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಸೋಮವಾರ ವಕೀಲರು ದಿಢೀರ್‌ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಧಾರವಾಡ ಗ್ರಾಮೀಣ ಸಿಪಿಐ ಮಂಜುನಾಥ ಕುಸುಗಲ್ಲ ಅವರ ಮೇಲೆ ಈ ಆರೋಪ ಕೇಳಿಬಂದಿದೆ. ಅ.28ರಂದು ಪ್ರಕರಣವೊಂದರ ಮಾಹಿತಿಗಾಗಿ ಮಹಿಳಾ ವಕೀಲರೊಬ್ಬರು ಠಾಣೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಸಿಪಿಐ ಅವರ ಕಚೇರಿಯಲ್ಲಿ ಮಹಿಳಾ ವಕೀಲರು ಒಬ್ಬರೇ ಇದ್ದ ಸಮಯದಲ್ಲಿ ಅವರ ಜೊತೆ ಅನುಚಿತವಾಗಿ ವರ್ತಿಸಿರುವ ಸಿಪಿಐ ಮಂಜುನಾಥ ಕುಸುಗಲ್ಲ ಅವರನ್ನು ಕೂಡಲೇ ಅಮಾನತು ಮಾಡಬೇಕು. ಅವರ ವಿರುದ್ಧ ಈಗಾಗಲೇ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದ್ದರಿಂದ ಕುಸುಗಲ್ಲರನ್ನು ಬಂಧಿಸಬೇಕು ಎಂದು ವಕೀಲರು ನಗರದ ಜ್ಯುಬಿಲಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.

ಯಾರ ಮಾತಿಗೂ ಜಗ್ಗದ ವಕೀಲರು: ಹಿರಿಯ ಪೊಲೀಸ್‌ ಅಧಿಕಾರಿಗಳು ವಕೀಲರ ಮನವೊಲಿಸಲು ಮುಂದಾದರೂ ಸ್ಪಂದಿಸದ ವಕೀಲರು, ಕ್ರಮ ಜರುಗಿಸಿದ ಬಳಿಕವೇ ಪ್ರತಿಭಟನೆ ಹಿಂಪಡೆಯುವುದಾಗಿ ಪಟ್ಟುಹಿಡಿದರು. ಡಿಸಿಪಿ ರಾಕೇಶ ಬಾಗ್ಲಾ ಸ್ಥಳಕ್ಕೆ ಆಗಮಿಸಿ ವಕೀಲರ ಸಂಘದ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಲು ಯತ್ನಿಸಿದರು. ಆದರೆ, ವಕೀಲರು ತಮ್ಮ ಪಟ್ಟು ಸಡಿಲಿಸದ ಪರಿಣಾಮ ಮಧ್ಯಾಹ್ನ 3 ಗಂಟೆ ವರೆಗೂ ಪ್ರತಿಭಟನೆ ಮುಂದುವರಿಯಿತು.

ಎಸ್‌ಪಿಗೆ ದೂರು: ನಂತರ ವಕೀಲರ ಸಂಘದ ಸದಸ್ಯರು ಉಪನಗರ ಠಾಣೆ ಎದುರು ಪ್ರತಿಭಟನೆ ನಡೆಸಿ ತಪ್ಪಿತಸ್ಥ ಪೊಲೀಸ್‌ ಅಧಿಕಾರಿ ವಿರುದ್ಧ ಎಫ್‌ಐಆರ್‌ ಮಾಡುವಂತೆ ಒತ್ತಾಯಿಸಿದರು. ಬಳಿಕ ಎಫ್‌ಐಆರ್‌ ದಾಖಲಾಗಿದ್ದರಿಂದ ಎಸ್ಪಿ ಕಚೇರಿಗೆ ತೆರಳಿ ತಪ್ಪಿತಸ್ಥ ಅಧಿಕಾರಿ ಮಂಜುನಾಥ ಕುಸುಗಲ್‌ ಅವರನ್ನು ಅಮಾನತು ಮಾಡುವಂತೆ ಮನವಿ ಸಲ್ಲಿಸಿದರು. ಎಸ್‌ಪಿ ಲೋಕೇಶ ಜಗಲಾಸರ್‌ ಅವರು ಪ್ರಕರಣದ ಕುರಿತು ಪರಿಶೀಲಿಸಿ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.

ತಪ್ಪಿತಸ್ಥ ಅಧಿಕಾರಿಯನ್ನು ಮಂಗಳವಾರ ಅಮಾನತು ಮಾಡದಿದ್ದರೆ ಬುಧವಾರ ಮತ್ತೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ವಕೀಲರು ತಿಳಿಸಿದರು. ವಕೀಲರ ಸಂಘದ ಅಧ್ಯಕ್ಷ ಸಿ.ಎಸ್‌.ಪೊಲೀಸ್‌ ಪಾಟೀಲರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಹಿರಿ-ಕಿರಿಯ ವಕೀಲರು ಭಾಗವಹಿಸಿದ್ದರು.

ಸವಾರಗೆ ಗೂಸಾ ವಿಡಿಯೋ ವೈರಲ್‌

ಜ್ಯುಬಿಲಿ ವೃತ್ತದಲ್ಲಿ ವಕೀಲರು ದಿಢೀರ್‌ ಪ್ರತಿಭಟನೆ ನಡೆಸಿದ್ದರಿಂದಾಗಿ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು. ಮಧ್ಯಾಹ್ನ 3 ಗಂಟೆ ವರೆಗೂ ಪ್ರತಿಭಟನೆಯ ಪ್ರಭಾವದಿಂದ ಜ್ಯುಬಿಲಿ ವೃತ್ತ, ಕೋರ್ಟ್‌ ವೃತ್ತ, ಮಾರುಕಟ್ಟೆ ಮತ್ತು ಬಸ್‌ ನಿಲ್ದಾಣದ ಪ್ರದೇಶ, ಹಳೆ ಎಸ್‌ಪಿ ಕಚೇರಿ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ವಿದ್ಯಾರ್ಥಿಗಳು ಬಸ್‌ನಲ್ಲೇ ಹಸಿದು ಕುಳಿತುಕೊಳ್ಳುವಂತಾಯಿತು. ಪ್ರತಿಭಟನೆ ಸಂದರ್ಭದಲ್ಲಿ ಕೆಲ ಯುವ ವಕೀಲರು ವಾಹನ ಸವಾರನೊಬ್ಬನಿಗೆ ಗೂಸಾ ಕೊಟ್ಟಿರುವುದು ಹಾಗೂ ಪ್ರತಿಭಟನೆಯಿಂದ ದಾಟಿಕೊಂಡು ಹೋಗಲು ಯತ್ನಿಸಿದಾತನಿಗೆ ಅವಾಜ್‌ ಹಾಕಿದ ವಿಡಿಯೋ ವೈರಲ್‌ ಆಗಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.