ಜನರ ಮನಸ್ಸು ತಿದ್ದುವಂತಹ ಸಾಹಿತ್ಯ ರಚನೆ ಮಾಡಿ


Team Udayavani, Aug 27, 2019, 9:34 AM IST

huballi-tdy-2

ಧಾರವಾಡ: ನಗರದಲ್ಲಿ ನಡೆದ ನಾಡೋಜ ಡಾ| ಕಮಲಾ ಹಂಪನಾ ಅವರ ಜೀವನಯಾನ 'ಬೇರು-ಬೆಂಕಿ-ಬಿಳಲು' ಕೃತಿಯ ಅನುಸಂಧಾನ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಧಾರವಾಡ: ಸಮಾಜ ವ್ಯವಸ್ಥೆಯಲ್ಲಿ ಸಾಹಿತಿಗಳಿಗೆ ಉಚ್ಚ ಸ್ಥಾನವಿದ್ದು, ಪ್ರತಿಯೊಬ್ಬ ಸಾಹಿತಿಯೂ ಜನರ ಮನಸ್ಸು ತಿದ್ದುವಂತಹ ಸಾಹಿತ್ಯ ರಚನೆ ಮಾಡಬೇಕಾಗಿದೆ ಎಂದು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವಿವಿ ಕುಲಪತಿ ಡಾ| ನಿರಂಜನಕುಮಾರ ಹೇಳಿದರು.

ಜನತಾ ಶಿಕ್ಷಣ ಸಮಿತಿ ಹಾಗೂ ಸಪ್ನ ಬುಕ್‌ ಹೌಸ್‌ ಸಹಯೋಗದಲ್ಲಿ ನಾಡೋಜ ಡಾ| ಕಮಲಾ ಹಂಪನಾ ಅವರ ಜೀವನಯಾನ ‘ಬೇರು- ಬೆಂಕಿ-ಬಿಳಲು’ ಕೃತಿಯ ಅನುಸಂಧಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಭಾಷೆಯ ಬೆಳವಣಿಗೆಯಲ್ಲಿ ಸಾಹಿತಿಗಳ ಪಾತ್ರ ಮುಖ್ಯವಾದದ್ದು. ತನ್ನ ಬರವಣಿಗೆ ಮೂಲಕ ಕವಿ ಪ್ರಕೃತಿಯ ಸೌಂದರ್ಯವನ್ನು ಸೆರೆ ಹಿಡಿಯುತ್ತಾನೆ. ಸಮಾಜದ ಪರಿವರ್ತನೆಗೆ ಶಿಕ್ಷಣ ಮುಖ್ಯವಾಗಿದ್ದು, ವೀರೇಂದ್ರ ಹೆಗ್ಗಡೆಯವರು ಶಿಕ್ಷಣ ಪ್ರಸಾರಕ್ಕೆ ಮಹತ್ವ ಕೊಟ್ಟಿದ್ದಾರೆ ಎಂದರು.

ಕೃತಿ ಲೋಕಾರ್ಪಣೆ ಮಾಡಿದ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಡಾ|ಪದ್ಮರಾಜ ದಂಡಾವತಿ ಮಾತನಾಡಿ, ಇದೊಂದು ಆತ್ಮಕತೆಯ ರೂಪದಲ್ಲಿಯೇ ಹೊರಹೊಮ್ಮಿದ ಜೀವನಯಾನವಾಗಿದೆ. ಕೃತಿ ಓದಿಸಿಕೊಂಡು ಹೋಗುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಸಾಹಿತಿ ದಂಪತಿಗಳಲ್ಲಿಯೇ ಆದರ್ಶದ ಜೀವನವನ್ನು ನಡೆಸುತ್ತಿರುವ ಅಪರೂಪದ ಜೋಡಿಯಾಗಿದೆ. ಹಂಪನಾ ಅವರೂ ಆತ್ಮಕತೆ ಬರೆಯಲಿ ಎಂದು ಆಶಿಸಿದರು.

ಡಾ| ಕಮಲಾ ಹಂಪನಾ ಮಾತನಾಡಿ, ಇವತ್ತಿನ ಶಿಕ್ಷಣ ವ್ಯವಸ್ಥೆಯ ಬದಲಾವಣೆಯಲ್ಲಿ ಪ್ರಾರಂಭದ ಹಂತದಿಂದಲೇ ಕನ್ನಡ ಮಾಧ್ಯಮದಲ್ಲಿ ಕಲಿಸುವುದರೊಂದಿಗೆ ಒಂದನೇ ತರಗತಿಯಿಂದ ಏಳನೇ ತರಗತಿ ವರೆಗೆ ಇಂಗ್ಲಿಷ್‌ನ್ನೂ ಒಂದು ವಿಷಯವನ್ನಾಗಿ ಕಲಿಸುವುದು ಅಗತ್ಯವಾಗಿದೆ. ದೇಶದಲ್ಲಿ ಹಲವಾರು ಧರ್ಮ, ಜಾತಿಗಳಿವೆ. ನಾವೆಲ್ಲರೂ ಹಿಂದೂಗಳೆ. ಆದರೆ ಹಿಂದು ಪದದ ಬಳಕೆ ಸಮಂಜಸವಲ್ಲ. ನಾವು ಭಾರತೀಯರು ಎಂಬ ಪದ ಬಳಕೆ ಸೂಕ್ತ ಎಂದರು. ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಡಾ| ಹಂಪ ನಾಗರಾಜಯ್ಯ ಅವರನ್ನು ಜನತಾ ಶಿಕ್ಷಣ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಡಾ| ಹಂಪ ನಾಗರಾಜಯ್ಯ ಮಾತನಾಡಿ, ಅತ್ಯಂತ ಪ್ರಾಚೀನವಾದ ಭಾಷೆಗಳು ಪ್ರಾಕೃತ ಮತ್ತು ಸಂಸ್ಕೃತ. ಸಂಸ್ಕೃತಕ್ಕೆ ದೇಶದಲ್ಲಿ ದೊರೆತ ಸ್ಥಾನಮಾನ ಅಪಾರ. ದೇಶದಲ್ಲಿ ಹದಿನಾಲ್ಕು ಸಂಸ್ಕೃತ ವಿಶ್ವವಿದ್ಯಾಲಯಗಳಿವೆ. ಒಂದು ಕಾಲದಲ್ಲಿ ಪ್ರಾಕೃತ ಭಾಷೆ ಆಡುಮಾತಿನ ಜನಪ್ರಿಯ ಭಾಷೆಯಾಗಿತ್ತು. ಇಂತಹ ಪ್ರಾಕೃತ ಭಾಷೆಯ ಬೆಳವಣಿಗೆ ಮತ್ತು ಅಧ್ಯಯನಕ್ಕಾಗಿ ಪ್ರಾಕೃತ ವಿಶ್ವವಿದ್ಯಾಲಯದ ಸ್ಥಾಪನೆಯ ಅಗತ್ಯವಿದೆ ಎಂದರು.

ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ| ಮೊಗಳ್ಳಿ ಗಣೇಶ್‌, ಶಿವಮೊಗ್ಗ ಕುವೆಂಪು ವಿವಿ ಪ್ರಾಧ್ಯಾಪಕ ಡಾ| ಪ್ರಶಾಂತ ನಾಯಕ ಮಾತನಾಡಿದರು. ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿ ಡಾ| ನ. ವಜ್ರಕುಮಾರ ಅಧ್ಯಕ್ಷತೆ ವಹಿಸಿದ್ದರು. ಡಾ| ಶಾಂತಿನಾಥ ದಿಬ್ಬದ, ಪ್ರೊ| ಮಾಲತಿ ಪಟ್ಟಣಶೆಟ್ಟಿ, ಹನುಮಾಕ್ಷಿ ಗೋಗಿ, ಪಿ.ಜಿ. ಕೆಂಪಣ್ಣವರ, ಸುಮನಕ್ಕ ವಜ್ರಕುಮಾರ, ಸೂರಜ ಜೈನ, ಜೆ.ಆರ್‌. ಕುಂದಗೋಳ ಇದ್ದರು. ಡಾ| ಅಜಿತಪ್ರಸಾದ ಸ್ವಾಗತಿಸಿದರು. ಡಾ| ಜಿನದತ್ತ ಹಡಗಲಿ ನಿರೂಪಿಸಿದರು. ಮಹಾವೀರ ಉಪಾಧ್ಯೆ ವಂದಿಸಿದರು.

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.