ಸಿಆರ್ಎಫ್ ಅನುದಾನ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಜೋಶಿ
Team Udayavani, Oct 4, 2019, 1:03 PM IST
ಹುಬ್ಬಳ್ಳಿ: ಕೇಂದ್ರದಿಂದ ಅವಳಿನಗರಕ್ಕೆ ಸಿಆರ್ಎಫ್ ಅನುದಾನ ಸಾಕಷ್ಟು ಬಂದಿದ್ದರೂ ಮೈತ್ರಿ ಸರಕಾರ ನಿರ್ಲಕ್ಷ್ಯ ತೋರಿದ್ದರಿಂದಲೇ ಅನೇಕ ಕಾಮಗಾರಿಗಳು ಕುಂಠಿತಗೊಂಡಿದ್ದವು. ಈಗ ಅವೆಲ್ಲ ಕಾಮಗಾರಿಗಳನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸಂಗೊಳ್ಳಿ ರಾಯಣ್ಣ ನಗರದಲ್ಲಿ ಭೈರಿದೇವರಕೊಪ್ಪ ಮತ್ತು ಗಾಮನಗಟ್ಟಿ ನಡುವೆ ನೇರ ರಸ್ತೆಯ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸುಮಾರು 10 ಕೋಟಿ ರೂ. ವೆಚ್ಚದ ಸಿಆರ್ ಎಫ್ ಅನುದಾನದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹಿಂದಿನ ಸರಕಾರದ ತೀವ್ರ ನಿರ್ಲಕ್ಷ್ಯದಿಂದ ಈ ಕಾಮಗಾರಿ ಕುಂಠಿತಗೊಂಡಿತ್ತು. ಈಗ ಅವಧಿಗೆ ಮುನ್ನವೇ ಕಾಮಗಾರಿ ಮುಗಿಸಲು ಸಂಕಲ್ಪ ಮಾಡಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಮಾತನಾಡಿ, ಭೈರಿದೇವರಕೊಪ್ಪ ಮತ್ತು ಗಾಮನಗಟ್ಟಿ ನಡುವೆ ಉತ್ತಮ ಗುಣಮಟ್ಟದ ರಸ್ತೆಯನ್ನಾಗಿ ಮಾರ್ಪಡಲಾಗುವುದು. ಈ ಕಾಮಗಾರಿ ಬಹುಬೇಗನೆ ಮುಗಿಸಲಿದ್ದೇವೆ ಎಂದು ಹೇಳಿದರು.
ಶಾಸಕ ಅರವಿಂದ ಬೆಲ್ಲದ, ಪಾಲಿಕೆ ಮಾಜಿ ಸದಸ್ಯ ಚಂದ್ರಶೇಖರ ಮನಗುಂಡಿ ಮಾತನಾಡಿದರು. ಪಾಲಿಕೆ ಮಾಜಿ ಸದಸ್ಯ ಮಲ್ಲಿಕಾರ್ಜುನ ಗುಂಡೂರ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ