ಅಡಕೆ ಬೆಳೆಗೆ ಕೊಳೆರೋಗ


Team Udayavani, Aug 25, 2018, 5:37 PM IST

25-agust-25.jpg

ಯಲ್ಲಾಪುರ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಗ್ರಾಮೀಣ ಭಾಗಗಳ ಅಡಕೆ ತೋಟದಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ. ಅಡಕೆ ಮಿಡಿಗಳು ಉದುರುತ್ತಿರುವುದರಿಂದ ರೈತರು ಚಿಂತಿತರಾಗಿದ್ದಾರೆ. 

ಮಳೆಗಾಲದ ಪ್ರಾರಂಭದಲ್ಲಿ ಅಡಕೆಗೆ ತಿಗಣೆ ಕಾಟದಿಂದ ಅಡಕೆ ಮುಗುಡು ಹಾಗೂ ಮಿಳ್ಳೆಗಳು ರಾಶಿ ರಾಶಿಯಾಗಿ ಉದುರಿ, ಉದುರಿದ ಅಡಕೆಯ ಒಳಗಡೆ ಬಿಳಿ ಬಣ್ಣದ ಸಣ್ಣ ಕ್ರಿಮಿಗಳು ಕಂಡು ಬಂದು ರೈತರ ಚಿಂತೆಗೆ ಕಾರಣವಾಗಿತ್ತು. ನಿರಂತರ ಮಳೆಯ ಕಾರಣದಿಂದ ಆರಂಭದಲ್ಲಿ ಕೆಲವು ಭಾಗದಲ್ಲಿ ಮಾತ್ರ ಬಯೋಫೈಟ್‌ ಸಿಂಪಡಿಸಿದ್ದು ಬಿಟ್ಟರೆ ಬಹುತೇಕ ರೈತರಿಗೆ ಔಷಧಿ ಸಿಂಪಡಿಸಲು ಸಾಧ್ಯವಾಗಿಲ್ಲ. ಎಡಬಿಡದೇ ಮಳೆ ಸುರಿಯುತ್ತಿದ್ದು, ತೋಟದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಕೊಳೆರೋಗ ಕಾಣಿಸಿಕೊಂಡಿದೆ. ತಾಲೂಕಿನ ಬಾರೆ, ಮಲವಳ್ಳಿ, ಬೀಗಾರ, ಹೊನಗದ್ದೆ ಕಳಚೆ, ಮುಂತಾದ ಭಾಗಗಳಲ್ಲಿ ಕೊಳೆರೋಗ ವ್ಯಾಪಕವಾಗಿ ಹರಡಿದೆ. ಇದಕ್ಕೆ ಔಷಧಿ ಸಿಂಪಡಿಸಲೂ ಮಳೆ ತೊಡಕಾಗಿದೆ.

ತಾಲೂಕಿನ ಗ್ರಾಮೀಣ ಭಾಗದ ವಿವಿಧೆಡೆ ಅಡಕೆ ತೋಟಗಳಲ್ಲೆಲ್ಲಾ ಸಣ್ಣ ಅಡಕೆ ಮಿಳ್ಳೆಗಳು ರಾಶಿ ರಾಶಿಯಾಗಿ ಉದುರುತ್ತಿರುವುದು ಬೆಳೆಗಾರರ ಚಿಂತೆಗೆ ಕಾರಣವಾಗಿದೆ. ಗುರುವಾರದಿಂದ ಬಿಸಿಲು-ಮಳೆ ಮುಂದುವರಿದಿದ್ದು, ಕೊಳೆ ರೋಗ ಮತ್ತಷ್ಟು ವ್ಯಾಪಿಸಲು ಕಾರಣವಾಗುತ್ತಿದೆ.

ಕಳೆದ 2-3 ವರ್ಷಗಳಿಂದ ಅಡಿಕೆ ತೋಟಗಳಲ್ಲಿ ಬೆಳೆಯ ಏರು-ಪೇರು ರೈತರನ್ನು ಹೈರಾಣಾಗಿಸಿದೆ. ಬರಗಾಲದ ಪರಿಣಾಮವಾಗಿ ಎರಡು ವರ್ಷ ಅಡಕೆಯ ಸಿಂಗಾರ ಒಣಗಿ ಹೋಗಿ ರೈತರು ಬೆಳೆ ನಷ್ಟ ಅನುಭವಿಸಿದ್ದರು. ಕಳೆದ ಮೂರು ವರ್ಷಗಳಿಗೆ ಹೋಲಿಸಿದಾಗ ಈ ಬಾರಿ ಉತ್ತಮ ಬೆಳೆ ಬರಬಹುದೆಂಬ ನಿರೀಕ್ಷೆ ರೈತರಲ್ಲಿದ್ದರೂ ಕೂಡ ಕೊಳೆ ರೋಗದಿಂದಾಗಿ ನಿರೀಕ್ಷೆ ಹುಸಿಯಾಗಿದೆ.

ಈಗಾಗಲೇ ಶೇ.60 ರಷ್ಟು ಅಡಕೆ ಕೋಳೆ ರೋಗದಿಂದ ಹಾನಿಗೊಳಗಾಗಿದ್ದು, ಮುಂದಿನ ದಿನಗಳಲ್ಲಿ ಈ ಸಲದ ಬೆಳೆಯು ಸಂಪೂರ್ಣ ನಾಶವಾಗುವ ಮುನ್ಸೂಚನೆ ತೋರಿದೆ. ಕೊಳೆರೋಗಪಿಡಿತ ತಾಲೂಕೆಂದು ಪರಿಗಣಿಸಿ ತೋಟಿಗನಿಗೆ ನೇರವಾದ ಸಹಾಯಕ್ಕೆ ಸರಕಾರ ಮುಂದಾಗಬೇಕೆಂದು ಭಾರತೀಯ ಕಿಸಾನ್‌ ಸಂಘ ತಾಲೂಕ ಘಟಕ ಸರಕಾರವನ್ನು ಆಗ್ರಹಿಸಿದೆ. 

ಕೊಳೆ ರೋಗದಿಂದಾಗಿ ಅಡಕೆ ವ್ಯಾಪಕ ಪ್ರಮಾಣದಲ್ಲಿ ಉದುರುತ್ತಿದೆ. ಸಂಕಷ್ಟದಲ್ಲಿರುವ ರೈತರಿಗೆ ಗಾಯದ ಮೇಲೆ ಉಪ್ಪು ಸವರಿದಂತಾಗಿದೆ. ಕಾರಣ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಡಕೆ ಬೆಳೆಗಾರರ ನೆರವಿಗೆ ಧಾವಿಸಬೇಕು. ಕೊಳೆರೋಗದಿಂದ ನಷ್ಟ ಅನುಭವಿಸಿದ ಬೆಳೆಗಾರರಿಗೆ ಪರಿಹಾರ ನೀಡಬೇಕು.  
.ರಾಮಕೃಷ್ಣ ಭಟ್ಟ ಬಾರೆ ಕೃಷಿಕ

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.