ಉಪಕಾರಾಗೃಹ ಆವರಣದಲ್ಲೇ ಗುಂಪುಗಳ ಹೊಡೆದಾಟ

•ಪರಸ್ಪರ ಮಾರಕಾಸ್ತ್ರಗಳಿಂದ ಹಲ್ಲೆ-ಓರ್ವನಿಗೆ ಗಂಭೀರ ಗಾಯ

Team Udayavani, Jun 20, 2019, 9:39 AM IST

hubali-tdy-7..

ಹುಬ್ಬಳ್ಳಿ: ಉಪ ಕಾರಾಗೃಹದಲ್ಲಿ ನಿಲ್ಲಿಸಿದ್ದ ಕಾರು ಜಖಂಗೊಳಿಸಿರುವುದು.

ಹುಬ್ಬಳ್ಳಿ: ಇಲ್ಲಿನ ಉಪ ಕಾರಾಗೃಹ ಆವರಣದಲ್ಲಿಯೇ ಎರಡು ಗುಂಪುಗಳು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಈ ವೇಳೆ ಓರ್ವನಿಗೆ ಗಂಭೀರ ಗಾಯಗಳಾಗಿವೆ.

ಇಲ್ಲಿನ ವಿಶ್ವೇಶ್ವರ ನಗರದ ಉಪ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಗಳಾದ ನೇಕಾರ ನಗರದ ಸೂರಿ, ಗಿರಿ ಅವರನ್ನು ನ್ಯಾಯಾಲಯದಿಂದ ಕರೆದುಕೊಂಡು ಬರುತ್ತಿದ್ದಾಗ, ಇವರನ್ನು ಭೇಟಿಯಾಗಲು ಸುಮಾರು 10ಕ್ಕೂ ಅಧಿಕ ಜನರು ಬುಧವಾರ ಬಂದಿದ್ದರು. ಇದನ್ನು ತಿಳಿದ ಶ್ಯಾಮ ಜಾಧವ ಮತ್ತು ರವಿ ಜಾಧವ ಗುಂಪಿನ 20-25 ಜನರ ತಂಡದವರು ಸ್ಥಳಕ್ಕೆ ಆಗಮಿಸಿ, ಏಕಾಏಕಿ ರವಿ ಮಹಾಂತಶೆಟ್ಟರ ಮತ್ತು ಜುನೈದ್‌ ಮುಲ್ಲಾ ಸೇರಿ ಇನ್ನಿತರರ ಮೇಲೆ ಲಾಂಗ್‌, ಮಚ್ಚು, ತಲ್ವಾರ್‌ನಿಂದ ಉಪ ಕಾರಾಗೃಹ ಆವರಣದಲ್ಲಿಯೇ ಹಲ್ಲೆ ಮಾಡಿದ್ದಾರೆ. ಈ ವೇಳೆ ಪರಸ್ಪರರು ಹೊಡೆದಾಡಿಕೊಂಡಿದ್ದಾರೆ. ಸೂರಿ ಸ್ನೇಹಿತರು ಆವರಣದಲ್ಲಿ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಕಲ್ಲಿನಿಂದ ಹೊಡೆದು ಜಖಂಗೊಳಿಸಲಾಗಿದೆ.

ಚಂದ್ರು ಗಡಗಿ, ಗಣೇಶ ಜಾಧವ ಸೇರಿ 25 ಜನರ ತಂಡ ದಾಳಿ ಮಾಡಿದೆ ಎನ್ನಲಾಗಿದ್ದು, ಘಟನೆಯಲ್ಲಿ ಗಾಯಗೊಂಡ ಜುನೈದ್‌, ರವಿಯನ್ನು ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ಯಾಮ್‌ ಜಾಧವ ಮತ್ತು ರವಿ ಜಾಧವ ಗುಂಪಿನವರೆ ಹಲ್ಲೆ ಮಾಡಿದ್ದಾರೆಂದು ಗಾಯಾಳು ರವಿ ಆರೋಪಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುವುದರೊಳಗೆ ಹಲ್ಲೆಕೋರರು ಪರಾರಿಯಾಗಿದ್ದಾರೆ.

ಡಿಸಿಪಿ ನಾಗೇಶ ಡಿ.ಎಲ್., ಎಸಿಪಿ ಎಚ್.ಕೆ. ಪಠಾಣ, ಅಶೋಕನಗರ ಠಾಣೆ ಇನ್‌ಸ್ಪೆಕ್ಟರ್‌ ಜಗದೀಶ ಹಂಚನಾಳ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಲ್ಲೆಕೋರರ ಮೇಲೆ ಅಶೋಕನಗರ ಠಾಣೆಯಲ್ಲಿ ದೊಂಬಿ ಮತ್ತು ಕೊಲೆಗೆ ಯತ್ನ ಪ್ರಕರಣ ದಾಖಲಾಗಿದೆ.

ಮಾರಕಾಸ್ತ್ರಗಳಿಂದ ಹೊಡೆದಾಟ:

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಜೂ.7ರಂದು ನೇಕಾರನಗರ ಈಶ್ವರನಗರದಲ್ಲಿ ಎರಡು ಗುಂಪುಗಳು ಪರಸ್ಪರ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದವು. ಈ ಸಂದರ್ಭದಲ್ಲಿ ಹುಸೇನಸಾಬ ಬಿಜಾಪುರಿ ಎಂಬಾತನಿಗೆ ಚಾಕುವಿನಿಂದ ಇರಿದಿದ್ದರಿಂದ ತೀವ್ರ ಗಾಯಗೊಂಡಿದ್ದ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಈ ಘಟನೆಗೆ ಸಂಬಂಧಿಸಿ ಕಸಬಾಪೇಟೆ ಪೊಲೀಸರು ಸೂರಿ, ಗಿರಿ, ಮಹ್ಮದ ಸಾದಿಕ್‌, ವಿನಾಯಕ ಎಂಬುವರನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು.

ಗೋಮಾಂಸ ಸಾಗಾಟ ಅನುಮಾನ: ದಾಳಿ ವೇಳೆ ದನದ ಮೂಳೆ ಪತ್ತೆ

ಧಾರವಾಡ: ಅಕ್ರಮವಾಗಿ ಗೋಮಾಂಸ ಸಾಗಾಟದ ಅನುಮಾನದಲ್ಲಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ತಡೆ ಹಿಡಿದ ಲಾರಿಯಲ್ಲಿ ಬರೀ ಮೂಳೆ ಸಿಕ್ಕ ಘಟನೆ ಎಸ್‌ಡಿಎಂ ಎಂಜಿನಿಯರಿಂಗ್‌ ಕಾಲೇಜು ಬಳಿ ಬುಧವಾರ ನಡೆದಿದೆ. ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಲಾರಿಯನ್ನು ತಡೆಯುತ್ತಿದ್ದಂತೆ ಲಾರಿ ಮಾಲೀಕ ಪರಾರಿಯಾಗಿದ್ದಾನೆ. ನಂತರ ಲಾರಿ ಚಾಲಕ ಹಾಗೂ ಕ್ಲೀನರ್‌ನನ್ನು ಕಾರ್ಯಕರ್ತರು ವಶಕ್ಕೆ ಪಡೆದು ವಿದ್ಯಾಗಿರಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ವಿದ್ಯಾಗಿರಿ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ಬಳಿಕ ಠಾಣೆಗೆ ಕರೆದುಕೊಂಡು ಬಂದು ಘಟನೆ ಬಗ್ಗೆ ವಿಚಾರಣೆ ಮಾಡಿದ್ದಾರೆ. ಆಗ ಅವರಿಂದ ಲಾರಿಗೆ ಸಂಬಂಧಿಸಿದ ಹಾಗೂ ಮೂಳೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಬಿಟ್ಟು ಕಳುಹಿಸಿದ್ದಾರೆ. ಲಾರಿಯಲ್ಲಿ ಯಾವುದೇ ಮಾಂಸ ಸಾಗಾಟ ಮಾಡುತ್ತಿರಲಿಲ್ಲ. ಮೂಳೆಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಅವರ ಮೂಳೆ ಸಾಗಾಟಕ್ಕೆ ಸಂಬಂಧಿಸಿದ ಲೈಸನ್ಸ್‌ ಇದ್ದ ಹಿನ್ನೆಲೆ ವಿಚಾರಣೆ ಮಾಡಿ ಕಳುಹಿಸಲಾಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ವಿದ್ಯಾಗಿರಿ ಠಾಣೆ ಇನ್ಸ್‌ಪೆಕ್ಟರ್‌ ಅಲ್ತಾಪ್‌ ಹುಸೇನ್‌ ಮುಲ್ಲಾ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.